Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 1:9 - ಕನ್ನಡ ಸಮಕಾಲಿಕ ಅನುವಾದ

9 ಆದರೆ ನೀವು ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ, ಅವುಗಳ ಪ್ರಕಾರ ನಡೆದರೆ, ನಿಮ್ಮಲ್ಲಿರುವವರು ಆಕಾಶದ ಅಂತ್ಯದವರೆಗೂ ಸೆರೆಯಾಗಿ ಹೋಗಿದ್ದರೂ, ನಾನು ಅಲ್ಲಿಂದ ಅವರನ್ನು ಕೂಡಿಸಿ, ನನ್ನ ಹೆಸರನ್ನಿಡಲು ಆಯ್ದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು,’ ಎಂದು ಹೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವುದಾದರೆ ನಿಮ್ಮ ಜನರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ, ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು’ ಎಂದು ಹೇಳಿರುವೆಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗಾಗಿ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು; ಎಂದು ಹೇಳಿದಿರಲ್ಲವೆ? ಆ ಮಾತನ್ನು ನೆನಪುಮಾಡಿಕೊಳ್ಳಿ. ಸ್ವಾಮೀ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವದಾದರೆ ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ತಿರಿಗಿ ಬರಮಾಡುವೆನು ಎಂದು ಹೇಳಿದಿಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಬೇಕು, ಸ್ವಾಮೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ನೀವು ಹಿಂತಿರುಗಿ ನನ್ನ ಬಳಿಗೆ ಬಂದು, ನನ್ನ ಕಟ್ಟಳೆಗಳಿಗೆ ವಿಧೇಯರಾದರೆ, ನಿಮ್ಮ ಜನರನ್ನು ಬಲವಂತವಾಗಿ ಭೂಲೋಕದ ಕಟ್ಟಕಡೆಯವರೆಗೆ ಕೊಂಡೊಯ್ದಿದ್ದರೂ ಅಲ್ಲಿಂದ ನನ್ನ ಹೆಸರನ್ನು ನೆಲೆಗೊಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸ್ಥಳಕ್ಕೆ ಕರೆದುಕೊಂಡು ಬರುವೆನು” ಎಂದು ಹೇಳಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 1:9
28 ತಿಳಿವುಗಳ ಹೋಲಿಕೆ  

ನಾನು ನನ್ನ ಕೋಪದಲ್ಲಿಯೂ, ನನ್ನ ಉಗ್ರದಲ್ಲಿಯೂ, ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶದೊಳಗಿಂದ ಅವರನ್ನು ಕೂಡಿಸಿ, ಈ ಸ್ಥಳಕ್ಕೆ ತಿರುಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.


ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು. ಆಗ ಅವರು ಆತನಿಂದ ಆಯ್ಕೆಯಾದವರನ್ನು ನಾಲ್ಕು ದಿಕ್ಕುಗಳಿಂದಲೂ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.


ನಾನು ಅವರನ್ನು ಕಿತ್ತು ಹಾಕಿದ ಮೇಲೆ, ನಾನು ಹಿಂದಿರುಗಿ ಅವರನ್ನು ಕರುಣಿಸುವೆನು. ತಮ್ಮ ತಮ್ಮ ಸೊತ್ತಿಗೂ, ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.


ಇಸ್ರಾಯೇಲಿನ ಸೆರೆಹೋದ ಜನರನ್ನು ಕೂಡಿಸುವಂಥ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: “ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು.”


ಯೆಹೋವ ದೇವರು ಯೆರೂಸಲೇಮನ್ನು ಕಟ್ಟುತ್ತಾರೆ, ಚದರಿಹೋದ ಇಸ್ರಾಯೇಲನ್ನು ಕೂಡಿಸುತ್ತಾರೆ.


ಇದಲ್ಲದೆ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡಿರಲು, ಯೆರೂಸಲೇಮಿನ ಈ ದೇವಾಲಯವನ್ನು ಕಟ್ಟಬೇಕೆಂಬ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ದೇವಾಲಯವನ್ನು ನಾಶಮಾಡುವುದಕ್ಕಾಗಲಿ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ, ಜನರನ್ನೂ ದೇವರು ನಾಶಮಾಡಲಿ. ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಪಾಲಿಸಬೇಕು, ಎಂಬುದು.


ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಗೋತ್ರಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ದೇವರ ದರ್ಶನಕ್ಕಾಗಿ ಸಭೆ ಸೇರಬೇಕು.


“ ‘ನಾನು ನಿಮ್ಮನ್ನು ಇತರ ಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.


“ಜನಾಂಗಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ಸಾರಿರಿ! ‘ಇಸ್ರಾಯೇಲನ್ನು ಚದರಿಸಿದಾತನೇ ಅವರನ್ನು ಕೂಡಿಸಿ, ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವರನ್ನು ಕಾಯುವನು’ ಎಂದು ಪ್ರಕಟಿಸಿರಿ.


ಜನಾಂಗಗಳಿಗೆ ಗುರುತಾಗಿ ಧ್ವಜವನ್ನೆತ್ತಿ ಇಸ್ರಾಯೇಲಿನಿಂದ ತಳ್ಳಿಬಿಟ್ಟವರನ್ನು ಕೂಡಿಸುವನು. ಯೆಹೂದದಿಂದ ಚದರಿದವರನ್ನು ಭೂಮಿಯ ನಾಲ್ಕು ಕಡೆಗಳಿಂದ ಒಟ್ಟುಗೂಡಿಸುವನು.


ನಮ್ಮ ದೇವರಾದ ಯೆಹೋವ ದೇವರೇ, ನಾವು ನಿಮ್ಮ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ, ನಿಮ್ಮ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ, ನಮ್ಮನ್ನು ರಕ್ಷಿಸಿರಿ.


ಯೆಹೋವ ದೇವರು ಅವನಿಗೆ, “ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆಯನ್ನೂ ನಿನ್ನ ವಿಜ್ಞಾಪನೆಯನ್ನೂ ಕೇಳಿ ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಆಲಯವನ್ನು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.


“ಓ ಭ್ರಷ್ಟರಾದ ಜನರೇ, ತಿರುಗಿಕೊಳ್ಳಿರಿ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ಏಕೆಂದರೆ, ನಾನು ನಿಮಗೆ ಪತಿ. ಪಟ್ಟಣದೊಳಗಿಂದ ಒಬ್ಬನನ್ನು, ಗೋತ್ರದೊಳಗಿಂದ ಇಬ್ಬರನ್ನು ತೆಗೆದುಕೊಂಡು, ಚೀಯೋನಿಗೆ ಕರೆದುಕೊಂಡು ಬರುವೆನು.


ನಮ್ಮ ರಕ್ಷಣೆಯ ದೇವರೇ, “ನಾವು ನಿಮ್ಮ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ, ನಿಮ್ಮ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸಿರಿ, ಜನಾಂಗಗಳೊಳಗಿಂದ ನಮ್ಮನ್ನು ಬಿಡುಗಡೆ ಮಾಡಿ ಒಂದುಗೂಡಿಸಿರಿ.”


ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಂಡ ಸ್ಥಳವು ನಿಮಗೆ ದೂರವಾದರೆ, ಯೆಹೋವ ದೇವರು ನಿಮಗೆ ಕೊಟ್ಟ ದನಕುರಿಗಳಿಂದ ನಾನು ನಿಮಗೆ ಆಜ್ಞಾಪಿಸಿದಂತೆ ನಿಮ್ಮ ಊರಲ್ಲೇ ನಿಮಗೆ ಮನಸ್ಸಿದ್ದಷ್ಟು ಮಾಂಸಾಹಾರವನ್ನು ಮಾಡಿ ಉಣ್ಣಬಹುದು.


ಅವರನ್ನು ಸೆರೆಹಿಡಿದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ಕಡೆಗೆ ತಿರುಗಿಕೊಂಡು, ನೀವು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀವು ಆಯ್ದುಕೊಂಡ ಪಟ್ಟಣದ ಕಡೆಗೂ ನಿಮ್ಮ ನಾಮಕ್ಕೋಸ್ಕರ ನಾನು ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಅವರು ನಿಮಗೆ ಪ್ರಾರ್ಥನೆಮಾಡಿದರೆ,


ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದೇಶಗಳಿಂದ ಕೂಡಿಸಿದವರು ಸಹ ಹಾಗೆ ಹೇಳಲಿ.


ಇಸ್ರಾಯೇಲರೇ, ಯೆಹೋವ ದೇವರು ಯೂಫ್ರೇಟೀಸ್ ನದಿ ಮೊದಲುಗೊಂಡು ಈಜಿಪ್ಟ್ ದೇಶದ ನದಿಯವರೆಗೆ ಹೊಡೆಯುವರು, ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಕೂಡಿಸುವರು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬರುವುದು. ದೊಡ್ಡ ಜನಾಂಗವು ಲೋಕದ ಕಟ್ಟಕಡೆಯಿಂದ ಎದ್ದು ಬರುತ್ತದೆ.


“ಆದ್ದರಿಂದ ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮಾನಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾಗಿಯೇ ತಿರುಗಿಕೊಳ್ಳಿರಿ. ನಿಮ್ಮ ಅಸಹ್ಯವಾದವುಗಳನ್ನೆಲ್ಲಾ ಬಿಟ್ಟು, ನಿಮ್ಮ ಮುಖಗಳನ್ನು ತಿರುಗಿಸಿರಿ.


“ ‘ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು, ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳಂತೆ ನಡೆದರೆ,


ನಾನು ನಿಮ್ಮ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ, ಶಾಪವೂ, ನಿಮಗೆ ಸಂಭವಿಸಿದಾಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಚದರಿಸಿರುವ ಎಲ್ಲಾ ಜನಾಂಗಗಳ ಮಧ್ಯದಲ್ಲಿಯೇ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮ ದೇಶದಿಂದಲೂ ರಕ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು