Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:38 - ಕನ್ನಡ ಸಮಕಾಲಿಕ ಅನುವಾದ

38 ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತನೆಯ ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಟ್ಟಡಿಗಳ ಬಳಿಯಿರುವ ಬೊಕ್ಕಸದ ಮನೆಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿರುವ ಭಾಗದ ದಶಮಾಂಶವನ್ನು ದೇವಾಲಯದ ಭಂಡಾರದ ಕೊಠಡಿಗಳಲ್ಲಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿದ ಭಾಗದ ದಶಮಾಂಶವನ್ನು ದೇವಾಲಯದ ಬಂಡಾರದಕೊಠಡಿಗಳಲ್ಲಿಡಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿದ ಭಾಗದ ದಶಮಾಂಶವನ್ನು ದೇವಾಲಯದ ಬಂಡಾರದ ಕೊಠಡಿಗಳಲ್ಲಿಡಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ನಮ್ಮಿಂದ ಆ ಕಾಣಿಕೆಗಳನ್ನು ಅವರು ಸ್ವೀಕರಿಸುವಾಗ ಆರೋನನ ವಂಶದವರಾದ ಯಾಜಕನೊಬ್ಬನು ಅವರ ಜೊತೆಯಲ್ಲಿ ಇರಬೇಕು. ಲೇವಿಯರು ಆ ಕಾಣಿಕೆಗಳನ್ನು ದೇವಾಲಯಕ್ಕೆ ತಂದು ಅದರ ಉಗ್ರಾಣಗಳಲ್ಲಿ ಶೇಖರಿಸಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:38
11 ತಿಳಿವುಗಳ ಹೋಲಿಕೆ  

ಏಕೆಂದರೆ ದ್ವಾರಪಾಲಕರಲ್ಲಿರುವ ನಾಲ್ಕು ಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯದ ಉಗ್ರಾಣಗಳ ಮೇಲೆಯೂ ಬೊಕ್ಕಸಗಳ ಜವಾಬ್ದಾರಿಯನ್ನು ವಹಿಸಲಾಗಿತ್ತು.


“ ‘ಭೂಮಿಯ ಬೀಜದಲ್ಲಾಗಲಿ, ಮರದ ಫಲದಲ್ಲಾಗಲಿ ಹತ್ತನೆಯ ಒಂದು ಪಾಲೆಲ್ಲಾ ಯೆಹೋವ ದೇವರದೇ. ಅದು ಯೆಹೋವ ದೇವರಿಗೆ ಪರಿಶುದ್ಧವಾದದ್ದು.


ಆ ದೇಶದ ಆಹಾರವನ್ನು ತಿನ್ನುವಾಗ, ನೀವು ಅದರಲ್ಲಿ ಸ್ವಲ್ಪವನ್ನು ಯೆಹೋವ ದೇವರಿಗೆ ಕಾಣಿಕೆಯಾಗಿ ಅರ್ಪಿಸಬೇಕು.


ನೀವು ಮತ್ತು ನಿಮ್ಮ ಸಂತತಿಯವರು ನಿಮ್ಮ ಕಣದಿಂದ ಮಾಡಿದ ಪ್ರಥಮ ರೊಟ್ಟಿಯನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು.


“ಅವರು ದೇವದರ್ಶನ ಗುಡಾರದ ಸೇವೆಯನ್ನೂ ಮಾಡುವುದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾಯೇಲರಲ್ಲಿ ಹತ್ತನೆಯ ಭಾಗವನ್ನು ಸೊತ್ತಾಗಿ ಕೊಟ್ಟಿದ್ದೇನೆ.


ಇಸ್ರಾಯೇಲರು ಯೆಹೋವ ದೇವರಿಗೆ ಬಲಿಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ. ಆದಕಾರಣ, ‘ಇಸ್ರಾಯೇಲರ ಮಧ್ಯದಲ್ಲಿ ಅವರಿಗೆ ಸೊತ್ತು ಇರಬಾರದು ಎಂದು ನಾನು ಅವರಿಗೆ ಹೇಳಿದ್ದೇನೆ,’ ” ಎಂದರು.


ನೀವು ಬಿತ್ತುವ ಹೊಲದಲ್ಲಿ ವರ್ಷ ವರ್ಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು.


ನೇಮಿತ ಕಾಲದಲ್ಲಿ ಸಲ್ಲತಕ್ಕ ಅರ್ಪಣೆಯ ಕಟ್ಟಿಗೆಗಳನ್ನೂ, ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ಇದನ್ನು ಸಹ ನನ್ನ ಮೇಲಿನ ನಿಮ್ಮ ದಯೆಯೊಂದಿಗೆ ನನ್ನನ್ನು ನೆನಪುಮಾಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು