Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:25 - ಕನ್ನಡ ಸಮಕಾಲಿಕ ಅನುವಾದ

25 ಮತ್ತನ್ಯನೂ, ಬಕ್ಬುಕ್ಯನೂ, ಓಬದ್ಯನೂ, ಮೆಷುಲ್ಲಾಮನೂ, ಟಲ್ಮೋನನೂ, ಅಕ್ಕೂಬನೂ ಬೊಕ್ಕಸಗಳ ಬಾಗಿಲುಗಳನ್ನು ಕಾಯುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹಷಬ್ಯ, ಶೇರೇಬ್ಯ, ಯೇಷೂವ, ಬಿನ್ನೂಯ್, ಕದ್ಮೀಯೇಲ್ ಇವರು. ದೇವರ ಮನುಷ್ಯನಾದ ದಾವೀದನ ಅಪ್ಪಣೆಯ ಮೇರೆಗೆ ಇವರೂ ಇವರ ಸಹೋದರರೂ ಸರದಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ, ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇವರ ಕಾಲದಲ್ಲಿದ್ದವರು - ಹಷಬ್ಯ, ಶೇರೇಬ್ಯ, ಯೇಷೂವ, ಬಿನ್ನೂಯ್, ಕದ್ಮೀಯೇಲ್ ಇವರು.ದೈವಪುರುಷ ದಾವೀದನ ಅಪ್ಪಣೆಯ ಮೇರೆಗೆ ಇವರೂ ಇವರ ಸಹೋದರರೂ ಸರದಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇವರ ಕಾಲದಲ್ಲಿದ್ದವರು - ಹಷಬ್ಯ, ಶೇರೇಬ್ಯ, ಯೇಷೂವ, ಬಿನ್ನೂಯ್, ಕದ್ಮೀಯೇಲ್ ಇವರು. (ದೇವರ ಮನುಷ್ಯನಾದ ದಾವೀದನ ಅಪ್ಪಣೆಯ ಮೇರೆಗೆ ಇವರೂ ಇವರ ಸಹೋದರರೂ ಸರತಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣದ ಕೋಣಿಗಳನ್ನು ಕಾಯುತ್ತಿದ್ದವರು ಯಾರೆಂದರೆ: ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್ ಮತ್ತು ಅಕ್ಕೂಬ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:25
10 ತಿಳಿವುಗಳ ಹೋಲಿಕೆ  

ಬಳಿಕ ಅವನು ಸಿಂಹದಂತೆ ಕೂಗಿ ಹೀಗೆ ಹೇಳಿದನು, “ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.


ಓಬೇದ್ ಏದೋಮನಿಗೆ ದಕ್ಷಿಣ ಭಾಗ ಬಂತು. ಅವನ ಪುತ್ರರಿಗೆ ಉಗ್ರಾಣ ಮನೆ ಬಂತು.


ಇದರಲ್ಲಿ ದ್ವಾರಪಾಲಕರ ವರ್ಗಗಳು ಯೆಹೋವ ದೇವರ ಆಲಯದಲ್ಲಿ ಸೇವೆ ಮಾಡುವುದಕ್ಕೆ ವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲಾಗಿದ್ದವು.


ಯೆಹೋವ ದೇವರ ಮನೆಯ ಸೇವೆಯಲ್ಲಿ ದೇವದರ್ಶನ ಗುಡಾರದ ಕಾವಲನ್ನೂ, ಪರಿಶುದ್ಧ ಸ್ಥಾನದ ಕಾವಲನ್ನೂ, ತಮ್ಮ ಸಹೋದರರಾದ ಆರೋನನ ಪುತ್ರರ ಆಜ್ಞೆಯನ್ನೂ ಕೈಗೊಳ್ಳುವುದು ಅವರಿಗೆ ನೇಮಕವಾಗಿತ್ತು.


ಹಾಗೆಯೇ ಅವರು ಬಂದು ಪಟ್ಟಣದ ಬಾಗಿಲು ಕಾಯುವವನನ್ನು ಕರೆದು ಅವನಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು, ಅಲ್ಲಿ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ,” ಎಂದರು.


ಪೂರ್ವ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ, ದಕ್ಷಿಣ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಉಗ್ರಾಣ ಮಂದಿರದ ಬಳಿಯಲ್ಲಿ ಇಬ್ಬರಿಬ್ಬರಾಗಿಯೂ,


ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ, ಅವರ ಸೇವೆಗೆ ಯಾಜಕ ವರ್ಗಗಳವರನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ, ಯಾಜಕರ ಮುಂದೆ ಸ್ತುತಿಸುವುದಕ್ಕೂ, ಸೇವೆ ಮಾಡುವುದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ, ಸೇವೆಯ ಬಾಗಿಲಲ್ಲಿ ತಮ್ಮ ವರ್ಗಗಳ ಸರದಿಯ ಪ್ರಕಾರವಾಗಿ ದ್ವಾರಪಾಲಕರನ್ನೂ ನೇಮಿಸಿದನು. ಏಕೆಂದರೆ ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು