Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:18 - ಕನ್ನಡ ಸಮಕಾಲಿಕ ಅನುವಾದ

18 ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ, ನಮ್ಮ ದೇವರು ನಮ್ಮ ಮೇಲೆಯೂ, ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲಿಲ್ಲವೋ? ಆದರೆ ನೀವು ಸಬ್ಬತ್ ದಿನವನ್ನು ಅಪವಿತ್ರ ಮಾಡುವುದರಿಂದ ಇಸ್ರಾಯೇಲಿನ ಮೇಲೆ ಇನ್ನೂ ದೇವರ ಕೋಪವನ್ನು ಬರಮಾಡುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿಮ್ಮ ಪೂರ್ವಿಕರು ಹೀಗೆ ಮಾಡಿದರೋ? ನಮ್ಮ ದೇವರು ಈ ಎಲ್ಲಾ ಕೇಡನ್ನು ನಮ್ಮ ಮೇಲೆಯೂ, ನಮ್ಮ ಪಟ್ಟಣದ ಮೇಲೆಯೂ ಬರಮಾಡಿದ್ದನಲ್ಲವೇ? ಹೀಗಿರಲಾಗಿ ನೀವೂ ಸಬ್ಬತ್ ದಿನವನ್ನು ಅಶುದ್ಧಮಾಡಿ ಇಸ್ರಾಯೇಲರ ಮೇಲೆ ದೈವಕೋಪವನ್ನು ಹೆಚ್ಚಿಸುತ್ತೀರಿ” ಎಂದು ಹೇಳಿ ಅವರನ್ನು ಗದರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಿಮ್ಮ ಪೂರ್ವಿಕರು ಹೀಗೆ ಮಾಡಿದ್ದರಿಂದಲೆ ನಮ್ಮ ದೇವರು ಎಲ್ಲಾ ಕೇಡನ್ನು ನಮ್ಮ ಮೇಲೂ ನಮ್ಮ ಪಟ್ಟಣದ ಮೇಲೂ ಬರಮಾಡಿದ್ದಾರೆ. ಹೀಗಿರಲಾಗಿ, ನೀವೂ ಸಬ್ಬತ್‍ದಿನವನ್ನು ಅಶುದ್ಧಮಾಡಿ ಇಸ್ರಯೇಲರ ಮೇಲಿದ್ದ ದೇವಕೋಪವನ್ನು ಹೆಚ್ಚಿಸಬೇಡಿ,” ಎಂದು ಹೇಳಿ ಅವರನ್ನು ಗದರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿಮ್ಮ ಪೂರ್ವಿಕರು ಹೀಗೆ ಮಾಡಿದ್ದರಿಂದ ನಮ್ಮ ದೇವರು ಈ ಎಲ್ಲಾ ಕೇಡನ್ನು ನಮ್ಮ ಮೇಲೆಯೂ ನಮ್ಮ ಪಟ್ಟಣದ ಮೇಲೆಯೂ ಬರಮಾಡಿದನಲ್ಲವೇ. ಹೀಗಿರಲಾಗಿ ನೀವೂ ಸಬ್ಬತ್ ದಿನವನ್ನು ಅಶುದ್ಧಮಾಡಿ ಇಸ್ರಾಯೇಲ್ಯರ ಮೇಲಿದ್ದ ದೇವಕೋಪವನ್ನು ಹೆಚ್ಚಿಸುತ್ತೀರೇನು ಎಂದು ಹೇಳಿ ಅವರನ್ನು ಗದರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಮ್ಮ ಪೂರ್ವಿಕರೂ ಇದೇ ರೀತಿ ಮಾಡಿದರು. ಆ ಕಾರಣದಿಂದ ನಮ್ಮ ದೇವರು ಇಂಥಾ ತೊಂದರೆಗಳನ್ನು ನಮ್ಮ ನಗರಕ್ಕೆ ತಂದೊಡ್ಡಿದನು. ನೀವು ಸಬ್ಬತ್ ದಿನವನ್ನು ಅಶುದ್ಧಮಾಡಿ ನಿಮ್ಮ ಮೇಲೆ ಇನ್ನೂ ಹೆಚ್ಚಿನ ಕೋಪವನ್ನು ಬರಮಾಡಿಕೊಳ್ಳುತ್ತಿದ್ದೀರಿ. ದೇವರು ಇದಕ್ಕಾಗಿ ಭಯಂಕರ ಶಿಕ್ಷೆಯನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:18
16 ತಿಳಿವುಗಳ ಹೋಲಿಕೆ  

ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಒಡವೆಗಳನ್ನು ಕಸಿದುಕೊಳ್ಳುವರು.


ಅವಳು ಈಜಿಪ್ಟಿನಲ್ಲಿ ಇದ್ದಾಗಿನಿಂದಲೂ ವ್ಯಭಿಚಾರವನ್ನು ಬಿಡಲಿಲ್ಲ. ಅವಳ ಯೌವನದಲ್ಲಿ ಪುರುಷರು ಅವಳ ಸಂಗಡ ಮಲಗಿದರು. ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ಅವಳ ಮೇಲೆ ವ್ಯಭಿಚಾರ ನಡೆಸಿದರು.


ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡಿದಂಥ, ನಿಮ್ಮ ಪಿತೃಗಳು ಕೆಟ್ಟತನಗಳನ್ನೂ, ಯೆಹೂದದ ಅರಸರ ಕೆಟ್ಟತನಗಳನ್ನೂ, ಅವರ ಹೆಂಡತಿಯರ ಕೆಟ್ಟತನಗಳನ್ನೂ, ನಿಮ್ಮ ಸ್ವಂತ ಕೆಟ್ಟತನಗಳನ್ನೂ, ನಿಮ್ಮ ಹೆಂಡತಿಯರ ಕೆಟ್ಟತನಗಳನ್ನೂ ಮರೆತು ಬಿಟ್ಟಿದ್ದೀರೋ?


ಆದರೆ ನೀವು ಸಬ್ಬತ್ ದಿನವನ್ನು ಪರಿಶುದ್ಧಮಾಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು, ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದರೆ ಯೆರೂಸಲೇಮಿನ ದ್ವಾರಗಳಲ್ಲಿ ಬೆಂಕಿಯನ್ನು ಹಚ್ಚುವೆನು. ಅದು ಆರಿಹೋಗದೆ, ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.’ ”


“ನಿಮ್ಮ ಪಿತೃಗಳ ಬದಲಾಗಿ ಬಂದಿರುವ ನೀವು, ಪಾಪಿಗಳಾಗಿ ಇಸ್ರಾಯೇಲ್ ಕುರಿತು ಯೆಹೋವ ದೇವರ ಕೋಪವನ್ನೂ ಮತ್ತಷ್ಟು ಹೆಚ್ಚಿಸುತ್ತಿದ್ದೀರಲ್ಲಾ.


ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು, ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.


“ ‘ಹೀಗೂ ನನ್ನ ಮಾತನ್ನು ಕೇಳದೆ ಹೋದರೆ, ನಾನು ನಿಮ್ಮನ್ನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ಶಿಕ್ಷಿಸುವೆನು.


ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ, ನೀವು ಮಾಡಿದ ಅಸಹ್ಯಗಳನ್ನೂ ಯೆಹೋವ ದೇವರು ಇನ್ನು ತಾಳಲಾರದ್ದರಿಂದ, ನಿಮ್ಮ ದೇಶವು ಈ ದಿನ ಇರುವ ಪ್ರಕಾರ, ನಿವಾಸಿಗಳಿಲ್ಲದೆ ಹಾಳಾಗಿಯೂ, ವಿಸ್ಮಯವಾಗಿಯೂ, ಶಾಪವಾಗಿಯೂ ಇದೆ.


ನೀವು ಧೂಪ ಸುಟ್ಟು, ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಯೆಹೋವ ದೇವರ ಮಾತನ್ನು ಕೇಳದೆ, ದೈವನಿಯಮವನ್ನೂ, ದೈವತೀರ್ಪುಗಳನ್ನೂ, ದೈವಷರತ್ತುಗಳನ್ನೂ ಅನುಸರಿಸದೆ, ದೇವರಿಗೆ ವಿಧೇಯರಾಗದೆ ಇದ್ದುದರಿಂದಲೇ, ಈ ಕೇಡು ಈ ದಿನ ನಿಮಗೆ ಸಂಭವಿಸಿದೆ,” ಎಂದನು.


ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,


ವರ್ಷಕ್ಕೆ 4 ಗ್ರಾಂ ಬೆಳ್ಳಿಯನ್ನು ನಮ್ಮ ದೇವರ ಆಲಯದ ಸೇವೆಗಾಗಿ ಕೊಡಬೇಕೆಂಬ ನಿಯಮವನ್ನು ಪಾಲಿಸಿಕೊಳ್ಳುತ್ತೇವೆ.


ನೀವು ಹೇಳುವುದೇನೆಂದರೆ, “ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಯಾವಾಗ ಕೊನೆಗೊಳ್ಳುತ್ತದೆ? ಗೋಧಿಯನ್ನು ಮಾರುವ ಹಾಗೆ ಸಬ್ಬತ್ ದಿನವು ಯಾವಾಗ ಮುಗಿಯುವುದು? ಕೊಳಗವನ್ನು ಚಿಕ್ಕದಾಗಿಯೂ ತೊಲಗಳನ್ನು ದೊಡ್ಡದಾಗಿಯೂ, ಕಳ್ಳತಕ್ಕಡಿಗಳನ್ನು ಮೋಸಕ್ಕಾಗಿಯೂ ಮಾಡೋಣವೆಂದೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು