Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:19 - ಕನ್ನಡ ಸಮಕಾಲಿಕ ಅನುವಾದ

19 ಸಬ್ಬತ್ ದಿನಕ್ಕೆ ಮುಂಚೆ ಯೆರೂಸಲೇಮಿನ ಬಾಗಿಲುಗಳಲ್ಲಿ ಕತ್ತಲಾಗಲಾರಂಭಿಸಿದಾಗ ಬಾಗಿಲುಗಳನ್ನು ಹಾಕುವ ಹಾಗೆಯೂ, ಸಬ್ಬತ್ ದಿನವು ತೀರುವವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಸಬ್ಬತ್ ದಿನದಲ್ಲಿ ಹೊರೆ ಏನಾದರೂ ಒಳಗೆ ತರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಇಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಲ್ಲದೆ, ಸಬ್ಬತ್ ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ಕತ್ತಲಾಗುವುದಕ್ಕೆ ಮೊದಲೇ ಮುಚ್ಚಿಸಿ, ಸಬ್ಬತ್ ದಿನವು ಮುಗಿಯುವವರೆಗೂ ಅವುಗಳನ್ನು ತೆರೆಯಬಾರದೆಂದು ಆಜ್ಞಾಪಿಸಿ, ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದಲ್ಲದೆ, “ಸಬ್ಬತ್‍ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಜೆರುಸಲೇಮಿನ ಬಾಗಿಲುಗಳಲ್ಲಿ ಕತ್ತಲಾಗುವಾಗಲೇ ಕದಗಳನ್ನು ಮುಚ್ಚಿಸಬೇಕು; ಸಬ್ಬತ್‍ದಿನ ಗತಿಸುವುದಕ್ಕಿಂತ ಮುಂಚೆ ಅವುಗಳನ್ನು ತೆರೆಯಬಾರದು,” ಎಂದು ಆಜ್ಞಾಪಿಸಿದೆ. ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದಲ್ಲದೆ ಸಬ್ಬತ್‍ದಿನ ಪ್ರಾರಂಭವಾಗುವದಕ್ಕಿಂತ ಮೊದಲು ಯೆರೂಸಲೇವಿುನ ಬಾಗಲುಗಳಲ್ಲಿ ಕತ್ತಲಾಗಿರುವಾಗಲೇ ಕದಗಳನ್ನು ಮುಚ್ಚಿಸಿ ಸಬ್ಬತ್ ದಿನವು ಗತಿಸುವದಕ್ಕಿಂತ ಮುಂಚೆ ಅವುಗಳನ್ನು ತೆರೆಯಬಾರದೆಂದು ಆಜ್ಞಾಪಿಸಿ ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಕಾವಲಿರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಲ್ಲದೆ ಶುಕ್ರವಾರ ಸೂರ್ಯಸ್ತಮಾನಕ್ಕಿಂತ ಮುಂಚೆ ಜೆರುಸಲೇಮಿನ ಬಾಗಿಲ ಕದಗಳನ್ನು ಮುಚ್ಚಲು ಆಜ್ಞೆಯಿತ್ತೆನು. ಸಬ್ಬತ್‌ದಿನ ಮುಗಿದ ಬಳಿಕವೇ ಅವುಗಳನ್ನು ತೆರೆಯಲು ಅಪ್ಪಣೆಕೊಟ್ಟೆನು. ದ್ವಾರಗಳ ಬಳಿ ನನ್ನ ಕೆಲವು ಜನರನ್ನು ನಿಲ್ಲಿಸಿ, ಸಬ್ಬತ್ ದಿನದಲ್ಲಿ ಯಾವ ಮೂಟೆಯನ್ನೂ ನಗರದೊಳಗೆ ತರಲು ಬಿಡಬಾರದು ಎಂದು ಅವರಿಗೆ ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:19
7 ತಿಳಿವುಗಳ ಹೋಲಿಕೆ  

ಇದು ನಿಮಗೆ ಸಬ್ಬತ್ ದಿನವಾಗಿರುವುದು. ನೀವು ನಿಮ್ಮನ್ನು ಉಪವಾಸ ಇಡಬೇಕು. ಆ ತಿಂಗಳಿನ ಒಂಬತ್ತನೆಯ ದಿವಸದ ಸಾಯಂಕಾಲದಿಂದ ಹಿಡಿದು ಮರುದಿನದ ಸಂಜೆಯವರೆಗೆ ಸಬ್ಬತ್ ದಿನವನ್ನು ಆಚರಿಸಬೇಕು,” ಎಂಬದೇ.


ಆಗ ನಾನು ಅವರಿಗೆ, “ಬಿಸಿಲು ಏರುವುದಕ್ಕಿಂತ ಮೊದಲೇ ಯೆರೂಸಲೇಮಿನ ಬಾಗಿಲುಗಳನ್ನು ತೆರೆಯಬಾರದು. ಇದಲ್ಲದೆ ನೀವು ಸಮೀಪದಲ್ಲಿ ನಿಂತಿರುವಾಗ, ಕದಗಳನ್ನು ಮುಚ್ಚಿ ಅಗುಳಿಗಳನ್ನು ಹಾಕಿರಿ. ಯೆರೂಸಲೇಮಿನ ನಿವಾಸಿಗಳಲ್ಲಿ ಪ್ರತಿ ಮನುಷ್ಯನು ತನ್ನ ಮನೆಗೆ ಎದುರಾಗಿ ಕಾವಲಾಗಿರಲು ನೇಮಿಸಿರಿ,” ಎಂದು ಹೇಳಿದೆನು.


“ ‘ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯುವಾಗ, ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು, ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನೂ ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”


ಆದ್ದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ, “ಇದು ಸಬ್ಬತ್ ದಿನ ನೀನು ಹಾಸಿಗೆಯನ್ನು ಹೊತ್ತುಕೊಂಡು ನಡೆಯುವುದಕ್ಕೆ ನಿಷೇಧವಿದೆ,” ಎಂದರು.


ಆಗ ವರ್ತಕರೂ, ಎಲ್ಲಾ ಸರಕುಗಳನ್ನು ಮಾರುವವರೂ ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ರಾತ್ರಿಯನ್ನು ಕಳೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು