Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:31 - ಕನ್ನಡ ಸಮಕಾಲಿಕ ಅನುವಾದ

31 ನೇಮಿತ ಕಾಲದಲ್ಲಿ ಸಲ್ಲತಕ್ಕ ಅರ್ಪಣೆಯ ಕಟ್ಟಿಗೆಗಳನ್ನೂ, ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ಇದನ್ನು ಸಹ ನನ್ನ ಮೇಲಿನ ನಿಮ್ಮ ದಯೆಯೊಂದಿಗೆ ನನ್ನನ್ನು ನೆನಪುಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಿಯಮಿತ ಕಾಲಗಳನ್ನು, ಸಲ್ಲತಕ್ಕ ಕಟ್ಟಿಗೆ ದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ನೇಮಿತಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆ; ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನೇವಿುತ ಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪು ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಜನರು ಕಟ್ಟಿಗೆಯನ್ನೂ ಪ್ರಥಮಫಲಗಳನ್ನೂ ಸರಿಯಾದ ಸಮಯದಲ್ಲಿ ತರುವಂತೆ ನಾನು ಆಜ್ಞಾಪಿಸಿದೆನು. ನನ್ನ ದೇವರೇ, ಈ ಒಳ್ಳೆಯ ಕಾರ್ಯಗಳನ್ನೆಲ್ಲಾ ಮಾಡಿದ ನನ್ನನ್ನು ಮರೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:31
10 ತಿಳಿವುಗಳ ಹೋಲಿಕೆ  

ನನ್ನ ದೇವರೇ, ಇದಕ್ಕಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ. ನಾನು ನನ್ನ ದೇವರ ಆಲಯಕ್ಕೋಸ್ಕರವೂ, ಅದರ ಸೇವೆಗೋಸ್ಕರವೂ ನಂಬಿಗಸ್ತಿಕೆಯಿಂದ ಮಾಡಿದ ಭಕ್ತಿಕಾರ್ಯಗಳನ್ನು ಅಳಿಸಿಬಿಡಬೇಡಿರಿ.


ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಂಡು ಬಂದು ಸಬ್ಬತ್ ದಿನವನ್ನು ಪರಿಶುದ್ಧವಾಗಿ ಆಚರಿಸಬೇಕೆಂದೂ, ಬಾಗಿಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕಾಗಿ ಸಹ ನೀವು ನನ್ನನ್ನು ನೆನಸಿ, ನಿಮ್ಮ ಮಹಾ ಪ್ರೀತಿಯ ಪ್ರಕಾರ ನನ್ನನ್ನು ಕರುಣಿಸಿರಿ.


ದೇವರೇ, ನಿಮ್ಮ ಜನರ ಮೇಲಿರುವ ಮೆಚ್ಚುಗೆಯಿಂದ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ, ನಿಮ್ಮ ರಕ್ಷಣೆಯಿಂದ ನನ್ನನ್ನು ದರ್ಶಿಸಿರಿ.


ಯೆಹೋವ ದೇವರೇ, ನನ್ನ ಯೌವನದ ಪಾಪಗಳನ್ನೂ, ನನ್ನ ತಿರುಗಿ ಬೀಳುವಿಕೆಗಳನ್ನೂ ಜ್ಞಾಪಕ ಮಾಡಿಕೊಳ್ಳಬೇಡಿರಿ. ನೀವು ಒಳ್ಳೆಯವರಾಗಿರುವುದರಿಂದ ನಿಮ್ಮ ಪ್ರೀತಿಯ ಪ್ರಕಾರ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ.


ಮೋಶೆಯ ನಿಯಮದಲ್ಲಿ ಬರೆದ ಹಾಗೆ ನಮ್ಮ ದೇವರಾಗಿರುವ ಯೆಹೋವ ದೇವರ ಬಲಿಪೀಠದ ಮೇಲೆ ಅರ್ಪಿಸುವುದಕ್ಕೆ ನೇಮಿತವಾದ ಕಾಲಗಳಲ್ಲಿ, ವರ್ಷ ವರ್ಷಕ್ಕೆ ನಮ್ಮ ಪಿತೃಗಳ ಗೋತ್ರಗಳ ಪ್ರಕಾರ ನಮ್ಮ ದೇವಾಲಯದೊಳಗೆ ತೆಗೆದುಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ, ಲೇವಿಯರಿಗೂ, ಜನರಿಗೂ ಚೀಟಿಗಳನ್ನು ಹಾಕಿದೆವು.


ಬಳಿಕ ಅವನು, “ಯೇಸುವೇ, ನೀವು ನಿಮ್ಮ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪುಮಾಡಿಕೊಳ್ಳಿರಿ,” ಎಂದನು.


“ನನ್ನ ದೇವರೇ, ನಾನು ಈ ಜನರಿಗೆ ಮಾಡಿದ ಎಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಮಾಡಿರಿ,” ಎಂದು ಪ್ರಾರ್ಥಿಸಿದೆ.


ಯೆಹೋವ ದೇವರ ಆಲಯಕ್ಕೆ ಪ್ರತಿ ವರ್ಷದಲ್ಲಿಯೂ ನಮ್ಮ ಭೂಮಿಯ ಫಲಗಳಿಂದ ಪ್ರಥಮ ಫಲಗಳನ್ನು ತರುವುದಕ್ಕೂ,


ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತನೆಯ ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಟ್ಟಡಿಗಳ ಬಳಿಯಿರುವ ಬೊಕ್ಕಸದ ಮನೆಗೆ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು