Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:13 - ಕನ್ನಡ ಸಮಕಾಲಿಕ ಅನುವಾದ

13 ನಾನು ರಾತ್ರಿಯಲ್ಲಿ ಕಣಿವೆಯ ಬಾಗಿಲಿಂದ ಹೊರಟು, ಸರ್ಪದ ಬಾವಿಯನ್ನು ದಾಟಿ, ತಿಪ್ಪೆ ದಿಬ್ಬೆಯ ಬಾಗಿಲಿಗೆ ಬಂದು, ಯೆರೂಸಲೇಮಿನ ಕೆಡವಿ ಹಾಕಲಾದ ಗೋಡೆಗಳನ್ನೂ, ಬೆಂಕಿಯಿಂದ ಸುಡಲಾದ ಅದರ ಬಾಗಿಲುಗಳನ್ನೂ ಚೆನ್ನಾಗಿ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ರಾತ್ರಿವೇಳೆಯಲ್ಲಿ ತಗ್ಗಿನ ಬಾಗಿಲಿನಿಂದ ಹೊರಟು ಹಾಳುಬಿದ್ದ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಿಲುಗಳನ್ನೂ ನೋಡುತ್ತಾ, ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನು ರಾತ್ರಿ ವೇಳೆಯಲ್ಲಿ ಕಣಿವೆಯ ಬಾಗಿಲಿನಿಂದ ಹೊರಟು, ಹಾಳುಬಿದ್ದ ಜೆರುಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲಾಗಿದ್ದ ಅದರ ಬಾಗಿಲುಗಳನ್ನೂ ನೋಡುತ್ತಾ ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ರಾತ್ರಿವೇಳೆಯಲ್ಲಿ ತಗ್ಗಿನ ಬಾಗಲಿನಿಂದ ಹೊರಟು ಹಾಳುಬಿದ್ದ ಯೆರೂಸಲೇವಿುನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಲುಗಳನ್ನೂ ನೋಡುತ್ತಾ ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಲಿಗೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕತ್ತಲೆಯಲ್ಲಿಯೇ ಕಣಿವೆಯ ಬಾಗಿಲಿನ ಮೂಲಕ ಹೊರಟು ಕೆಡವಲ್ಪಟ್ಟಿದ್ದ ಜೆರುಸಲೇಮಿನ ಗೋಡೆಗಳನ್ನು, ಸುಟ್ಟುಹೋಗಿರುವ ಅದರ ಬಾಗಿಲುಗಳನ್ನು ನೋಡುತ್ತಾ ಹೆಬ್ಬಾವು ಬಾವಿಯ ಬಳಿಗೂ ತಿಪ್ಪೆಬಾಗಿಲಿನ ಬಳಿಗೂ ಸವಾರಿಮಾಡಿಕೊಂಡು ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:13
9 ತಿಳಿವುಗಳ ಹೋಲಿಕೆ  

ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟ ನಿಂದೆಗಳಿಗೆ ಒಳಗಾಗಿದ್ದಾರೆ. ಯೆರೂಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.


ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ? ಯೆರೂಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಯೆರೂಸಲೇಮಿನ ಗೋಡೆಯನ್ನು ಪುನಃ ಕಟ್ಟೋಣ. ಹೀಗೆ ಮಾಡಿದರೆ, ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ.


“ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿರುವಾಗ ನನ್ನ ಮುಖವು ದುಃಖವಿಲ್ಲದೆ ಇರಲು ಸಾಧ್ಯವೇ?” ಎಂದು ಹೇಳಿದೆನು.


ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಿಲ ಬಳಿಯಲ್ಲಿಯೂ, ತಗ್ಗಿನ ಬಾಗಿಲ ಬಳಿಯಲ್ಲಿಯೂ, ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು.


ಆಗ ನಾನು ಯೆಹೂದದ ಪ್ರಧಾನರನ್ನು ಗೋಡೆಯ ಮೇಲೆ ಬರಮಾಡಿ, ಸ್ತುತಿಸಲು ಎರಡು ಗುಂಪುಗಳನ್ನು ನೇಮಿಸಿದೆನು. ಒಂದು ಗುಂಪಿನವರು ಗೋಡೆಯ ಮೇಲೆ ಬಲಗಡೆಯಿಂದ ತಿಪ್ಪೆ ಬಾಗಿಲ ಕಡೆಗೆ ಹೋದರು.


ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಯನ್ನು ಪರೀಕ್ಷಿಸಿದೆನು. ಆಮೇಲೆ ಪುನಃ ಕಣಿವೆಯ ಬಾಗಿಲಿನಿಂದ ಮನೆಗೆ ಬಂದೆನು.


ಅವಳ ದ್ರಾಕ್ಷಿತೋಟಗಳ ಮೂಲಕ ಹೋಗಿ ಅವುಗಳನ್ನು ಹಾಳುಮಾಡಿರಿ. ಆದರೆ ಸಂಪೂರ್ಣವಾಗಿ ನಾಶಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ ಏಕೆಂದರೆ ಅವು ಯೆಹೋವ ದೇವರಿಗೆ ಸೇರಿದವುಗಳಲ್ಲ.


ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟಿದ್ದನ್ನು ಯಾರಿಗೂ ತಿಳಿಸಲಿಲ್ಲ. ನಾನು ಸವಾರಿಮಾಡುತ್ತಿದ್ದ ವಾಹನ ಪಶುವಿನ ಹೊರತು ಬೇರೆ ಪಶು ನನ್ನೊಂದಿಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು