Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:5 - ಕನ್ನಡ ಸಮಕಾಲಿಕ ಅನುವಾದ

5 ಅರಸನಿಗೆ, “ಅರಸನಿಗೆ ಮೆಚ್ಚಿಗೆಯಾದರೆ ಮತ್ತು ನಿಮ್ಮ ಸೇವಕನಿಗೆ ನಿಮ್ಮ ಮುಂದೆ ದಯೆ ದೊರಕಿದರೆ, ನನ್ನನ್ನು ನನ್ನ ತಂದೆಗಳ ಸಮಾಧಿಗಳಿರುವ ಪಟ್ಟಣವನ್ನು ಕಟ್ಟಿಸುವುದಕ್ಕಾಗಿ ಯೆಹೂದಕ್ಕೆ ನನ್ನನ್ನು ಕಳುಹಿಸಬೇಕು,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅರಸನಿಗೆ ಹೀಗೆ ಉತ್ತರಕೊಟ್ಟೆನು, “ಅರಸನೇ ನಿಮ್ಮ ಚಿತ್ತವಿರುವುದಾದರೆ ಮತ್ತು ತಮ್ಮ ಸೇವಕನಾದ ನಾನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವನ್ನು ತಿರುಗಿ ಕಟ್ಟುವುದಕ್ಕಾಗಿ ಯೆಹೂದ ದೇಶಕ್ಕೆ ಹೋಗಲು ನನಗೆ ಅಪ್ಪಣೆಯಾಗಬೇಕು” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮತ್ತು ತಮ್ಮ ಸೇವಕನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ, ನನ್ನ ಪಿತೃಗಳ ಸಮಾಧಿಗಳಿರುವ ಪಟ್ಟಣವನ್ನು ಮರಳಿ ಕಟ್ಟುವುದಕ್ಕೆ ಜುದೇಯ ನಾಡಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು,” ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ತಮ್ಮ ಸೇವಕನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ ನನ್ನ ಪಿತೃಗಳ ಸಮಾಧಿಗಳಿರುವ ಪಟ್ಟಣವನ್ನು ತಿರಿಗಿ ಕಟ್ಟುವದಕ್ಕೋಸ್ಕರ ಯೆಹೂದದೇಶಕ್ಕೆ ಹೋಗಲು ನನಗೆ ಅಪ್ಪಣೆಯಾಗಬೇಕು ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅನಂತರ ಅರಸನಿಗೆ, “ನಾನು ನಿನಗೆ ಮೆಚ್ಚಿಕೆಯಾಗಿದ್ದಲ್ಲಿ ಮತ್ತು ನಿನಗೆ ಈ ವಿಷಯ ಸರಿಕಂಡಲ್ಲಿ ದಯಮಾಡಿ ಯೆಹೂದ ಪ್ರಾಂತ್ಯದಲ್ಲಿ ನನ್ನ ಪೂರ್ವಿಕರ ಸಮಾಧಿಗಳಿರುವ ಜೆರುಸಲೇಮಿಗೆ ನನ್ನನ್ನು ಕಳುಹಿಸು. ನಾನು ಅಲ್ಲಿಗೆ ಹೋಗಿ ಜೆರುಸಲೇಮನ್ನು ಮತ್ತೆ ಕಟ್ಟಬೇಕು” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:5
12 ತಿಳಿವುಗಳ ಹೋಲಿಕೆ  

“ಆದ್ದರಿಂದ ಅರಸನಿಗೆ ಸರಿ ತೋರುವುದಾದರೆ, ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಪುನಃ ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ, ಇಲ್ಲವೋ ಎಂಬುದನ್ನು ಬಾಬಿಲೋನಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸೋಣವಾಗಲಿ,” ಎಂಬುದಾಗಿ ಉತ್ತರಕೊಟ್ಟರು.


ಆಗ ದೇವರ ಮುಂದೆಯೂ ಮನುಷ್ಯರ ಮುಂದೆಯೂ ದಯೆಯನ್ನೂ, ಒಳ್ಳೆಯ ಹೆಸರನ್ನೂ ನೀನು ಪಡೆದುಕೊಳ್ಳುವೆ.


ಅವಳು, “ಅರಸನಿಗೆ ನನ್ನ ಮೇಲೆ ದಯೆಯಿದ್ದರೆ, ಈ ಕಾರ್ಯವು ಅರಸನಿಗೆ ಸರಿ ಎಂದೆಣಿಸಿದರೆ, ಅರಸನು ನನ್ನನ್ನು ಮೆಚ್ಚಿದ್ದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಕೊಂದುಹಾಕುವುದಕ್ಕೆ, ಅಗಾಗನ ವಂಶದ ಹಮ್ಮೆದಾತನ ಮಗ ಹಾಮಾನನು ಬರೆದ ಪತ್ರಗಳನ್ನು ರದ್ದುಗೊಳಿಸಲು ಆಜ್ಞೆ ಹೊರಡಿಸಬೇಕು.


ಆಗ ಎಸ್ತೇರ್ ರಾಣಿಯು ಉತ್ತರವಾಗಿ, “ಅರಸನೇ, ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವಳಾಗಿದ್ದರೆ, ನನ್ನ ಪ್ರಾಣವನ್ನೂ ನನ್ನ ಜನರ ಪ್ರಾಣವನ್ನೂ ಉಳಿಸಬೇಕು. ಇದೇ ನನ್ನ ವಿಜ್ಞಾಪನೆ. ಇದೇ ನನ್ನ ಬೇಡಿಕೆ.


ಅರಸನಿಗೆ ಸಮ್ಮತಿಯಾದರೆ, ಅರಸನಿಗೂ ಹಾಮಾನನಿಗೂ ನಾನು ಮಾಡಲಿರುವ ಔತಣಕ್ಕೆ ನಾಳೆಯೂ ಬರಬೇಕು. ಆಗ ಅರಸನ ಪ್ರಶ್ನೆಗೆ ಉತ್ತರಕೊಡುವೆನು,” ಎಂದಳು.


ಆಗ ಯೋವಾಬನು ಮೋರೆ ಕೆಳಗಾಗಿ ನೆಲದ ಮೇಲೆ ಬಿದ್ದು ವಂದಿಸಿದನು. ಯೋವಾಬನು, “ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ, ನನ್ನ ಒಡೆಯನಾದ ಅರಸನೇ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂಬುದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು,” ಎಂದನು.


ಅದಕ್ಕೆ ಅವಳು, “ನನ್ನ ಒಡೆಯನೇ, ನನಗೆ ನಿಮ್ಮ ದೃಷ್ಟಿಯಲ್ಲಿ ಉಪಕಾರವಾಗಲಿ. ಏಕೆಂದರೆ ನಾನು ನಿಮ್ಮ ದಾಸಿಯರಲ್ಲಿ ಒಬ್ಬಳಂತೆ ನಿಲ್ಲುವುದಕ್ಕೂ ಯೋಗ್ಯಳಲ್ಲ ಆದರೂ ದಯೆಯಿಂದ ಮಾತನಾಡಿಸಿದಿರಿ” ಎಂದಳು.


“ಅರಸನಿಗೆ ಸಮ್ಮತಿಯಾದರೆ, ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯರ ಮತ್ತು ಮೇದ್ಯರ ಕಾನೂನುಗಳಲ್ಲಿ ಲಿಖಿತವಾಗಲಿ.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಸುಣ್ಣ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ. ಆದರೆ ಒಳಗೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರುತ್ತವೆ.


ಅದಕ್ಕೆ ಅರಸನು ನನಗೆ, “ನಿನಗೆ ಬೇಕಾಗಿರುವುದೇನು?” ಎಂದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ


ರಾಣಿಯು ಅವನ ಬಳಿಯಲ್ಲಿ ಕುಳಿತಿರುವಾಗ ಅರಸನು ನನಗೆ, “ನಿನ್ನ ಪ್ರಯಾಣ ಎಷ್ಟು ದಿವಸ? ನೀನು ತಿರುಗಿ ಯಾವಾಗ ಬರುತ್ತೀ?” ಎಂದನು. ನಾನು ಅರಸನಿಗೆ ಸಮಯ ಗೊತ್ತು ಮಾಡಿದೆನು. ಆಗ ಅರಸನು ನನ್ನನ್ನು ಕಳುಹಿಸಲು ಸಮ್ಮತಿಸಿದನು.


“ಆದ್ದರಿಂದ ನೀನು ಅರಿತು ತಿಳಿಯಬೇಕಾದದ್ದು ಏನೆಂದರೆ, ಯೆರೂಸಲೇಮನ್ನು ತಿರುಗಿ ಕಟ್ಟಲು ಆಜ್ಞೆ ಹೊರಡುವ ದಿನದಿಂದ, ಆಳುವ ಒಬ್ಬ ಅಭಿಷಿಕ್ತರು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಿದ ಮೇಲೆ, ಅರವತ್ತೆರಡು ವಾರಗಳು ಇರುವುದು. ಕಷ್ಟಕಾಲದಲ್ಲಿ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಅದು ಕಟ್ಟಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು