Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:25 - ಕನ್ನಡ ಸಮಕಾಲಿಕ ಅನುವಾದ

25 ಸೆರೆಮನೆಯ ಅಂಗಳದ ಹತ್ತಿರ ಮೇಲಣ ಅರಮನೆಯ ಗೋಡೆಯನ್ನು ಮೀರಿ ಬರುವ ಮೂಲೆ ಬುರುಜಿನ ಎದುರಿನ ಭಾಗವನ್ನು ಊಜೈಯ ಮಗನಾದ ಪಾಲಾಲನೂ, ಇವನ ಆಚೆಯಲ್ಲಿ ಪರೋಷನ ಮಗನಾದ ಪೆದಾಯನೂ ಜೀರ್ಣೋದ್ಧಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸೆರೆಮನೆಯ ಅಂಗಳದ ಹತ್ತಿರವಿದ್ದ ಅರಸನ ಅರಮನೆಯ ಮೇಲಿನ ಗೋಡೆಯನ್ನು ಮೀರಿನಿಂತಿರುವ ಮೂಲೆ ಗೋಪುರದ ಎದುರಿನ ಭಾಗವನ್ನು ಊಜೈಯನ ಮಗನಾದ ಪಾಲಾಲನೂ. ಇವನ ನಂತರ ಪರೋಷನ ಮಗನಾದ ಪೆದಾಯನೂ ಜೀರ್ಣೋದ್ಧಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸೆರೆಮನೆಯ ಅಂಗಳದ ಹತ್ತಿರ ಮೇಲಣ ಅರಮನೆಯ ಗೋಡೆಯನ್ನು ಮೀರಿ ಬರುವ ಮೂಲೆಬುರುಜಿನ ಎದುರಿನ ಭಾಗವನ್ನು ಊಜೈಯ ಮಗ ಪಾಲಾಲನೂ ಇವನ ಆಚೆಯಲ್ಲಿ ಪರೋಷನ ಮಗ ಪೆದಾಯನೂ ಸರಿಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸೆರೆಮನೆಯ ಅಂಗಳದ ಹತ್ತಿರ ಮೇಲಣ ಅರಮನೆಯ ಗೋಡೆಯನ್ನು ಮೀರಿಬರುವ ಮೂಲೆಬುರುಜಿನ ಎದುರಿನ ಭಾಗವನ್ನು ಊಜೈಯ ಮಗನಾದ ಪಾಲಾಲನೂ ಇವನ ಆಚೆಯಲ್ಲಿ ಪರೋಷನ ಮಗನಾದ ಪೆದಾಯನೂ ಜೀರ್ಣೋದ್ಧಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಊಜೈಯ ಮಗನಾದ ಪಾಲಾಲನು ಮೂಲೆಯಿಂದ ಹಿಡಿದು ರಾಜನ ಮೇಲ್ಮನೆಯ ಬುರುಜಿನ ತನಕ ಮುಂದುವರಿಸಿದನು. ಇದು ರಾಜನ ಕಾವಲುಪಡೆಯ ಅಂಗಳದ ಸಮೀಪದಲ್ಲಿತ್ತು. ಪರೋಷನ ಮಗನಾದ ಪೆದಾಯನು ಅಲ್ಲಿಂದಾಚೆಗೆ ಅಂದರೆ ಪಾಲಾಲನು ಕೊನೆಗೊಳಿಸಿದಾಚಿನಿಂದ ಮುಂದುವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:25
12 ತಿಳಿವುಗಳ ಹೋಲಿಕೆ  

ಆಗ ಬಾಬಿಲೋನಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕಿತ್ತು. ಪ್ರವಾದಿಯಾದ ಯೆರೆಮೀಯನು ಯೆಹೂದದ ಅರಸನ ಅರಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಬಂಧಿಸಲಾಗಿದ್ದನು.


ಆಗ ಅರಸನಾದ ಚಿದ್ಕೀಯನು ಯೆರೆಮೀಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ, ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವವರೆಗೆ, ಅವನಿಗೆ ರೊಟ್ಟಿಗಾರರ ಬೀದಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿ ಕೊಡಬೇಕೆಂದು ಆಜ್ಞಾಪಿಸಿದನು; ಹಾಗೆಯೇ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ನಿಂತನು.


ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಅವನು ಇನ್ನು ಸೆರೆಮನೆಯ ಅಂಗಳದಲ್ಲಿ ಸೆರೆಯಾಗಿದ್ದಾಗ ಎರಡನೆಯ ಸಾರಿ ಉಂಟಾಯಿತು.


ಎಫ್ರಾಯೀಮ್ ಬಾಗಿಲ ಮೇಲೆಯೂ, ಯೆಷಾನಾ ಬಾಗಿಲ ಮೇಲೆಯೂ, ಮೀನು ಬಾಗಿಲ ಮೇಲೆಯೂ ಹಾದು, ಹನನೇಲ್ ಗೋಪುರವನ್ನೂ, ಶತ ಗೋಪುರವನ್ನೂ ದಾಟಿ, ಕುರಿ ಬಾಗಿಲವರೆಗೆ ಬಂದು ಸೆರೆಮನೆಯ ಬಾಗಿಲ ಬಳಿಯಲ್ಲಿ ನಿಂತರು.


ಅರಮನೆಯನ್ನೂ, ಜನರ ಮನೆಗಳನ್ನೂ, ಬಾಬಿಲೋನಿಯರು ಬೆಂಕಿಯಿಂದ ಸುಟ್ಟರು. ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.


ಅವನು, ‘ನಾನು ವಿಸ್ತಾರವಾದ ಅರಮನೆಯನ್ನೂ, ವಿಶಾಲವಾದ ಕೊಠಡಿಗಳನ್ನೂ ಕಟ್ಟಿಸಿಕೊಳ್ಳುವೆನೆಂದು ಹೇಳಿ.’ ಕಿಟಕಿಗಳನ್ನು ಕೊರೆದು, ದೇವದಾರಿನ ಹಲಗೆಗಳನ್ನು ಹಾಕಿ, ಕೆಂಪು ಬಣ್ಣವನ್ನು ಹಚ್ಚುವವನಿಗೂ ಕಷ್ಟ!


ಆಗ ನಿಯಮಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡಲಾಗಿದ್ದ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನ ಬಲಗಡೆಯಲ್ಲಿ ಮತ್ತಿತ್ಯ. ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ, ಅವನಿಗೆ ಎಡಗಡೆಯಲ್ಲಿ ಪೆದಾಯ್, ಮೀಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ನಿಂತಿದ್ದರು.


ಪರೋಷನ ವಂಶಜರು 2,172 ಮಂದಿ ಇದ್ದರು.


ಹೀಗೆ ಹಗ್ಗಗಳಿಂದ ಯೆರೆಮೀಯನನ್ನು ಎಳೆದು, ಅವನನ್ನು ಬಾವಿಯೊಳಗಿಂದ ಎತ್ತಿದನು. ಆಮೇಲೆ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ಉಳಿದನು.


ಕುರಿಮಂದೆಯ ಬುರುಜೇ, ಚೀಯೋನ್ ಪುತ್ರಿಯ ದುರ್ಗವೇ, ಮೊದಲಿದ್ದ ರಾಜ್ಯಾಧಿಕಾರವೂ ನಿಮಗೆ ಲಭಿಸುವುದು. ಯೆರೂಸಲೇಮಿನ ಪುತ್ರಿಗೆ ರಾಜ್ಯತ್ವವೂ ಬರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು