Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:1 - ಕನ್ನಡ ಸಮಕಾಲಿಕ ಅನುವಾದ

1 ನಾವು ಗೋಡೆಯನ್ನು ಪುನಃ ಕಟ್ಟುವ ವರ್ತಮಾನವನ್ನು ಸನ್ಬಲ್ಲಟನು ಕೇಳಿದಾಗ, ಅವನು ಕೋಪಗೊಂಡು, ಯೆಹೂದ್ಯರಿಗೆ ಗೇಲಿಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿಯು ಸನ್ಬಲ್ಲಟನಿಗೆ ಗೊತ್ತಾದಾಗ ಅವನು ಬಹಳ ಹೊಟ್ಟೆಕಿಚ್ಚಿನಿಂದ ಕೋಪಗೊಂಡು ಯೆಹೂದ್ಯರನ್ನು ಗೇಲಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿ ಸನ್ಬಲ್ಲಟನಿಗೆ ಮುಟ್ಟಿತು. ಅವನು ಬಹಳ ಹೊಟ್ಟೆಕಿಚ್ಚಿನ ಹಾಗು ಸಿಡುಕಿನ ವ್ಯಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿಯು ಸನ್ಬಲ್ಲಟನಿಗೆ ಮುಟ್ಟಿದಾಗ ಅವನು ಬಲು ಹೊಟ್ಟೆಕಿಚ್ಚೂ ಸಿಟ್ಟೂ ಉಳ್ಳವನಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾವು ಜೆರುಸಲೇಮಿನ ಗೋಡೆ ಕಟ್ಟುತ್ತಿದ್ದೇವೆ ಎಂಬುದನ್ನು ಕೇಳಿದ ಸನ್ಬಲ್ಲಟನು ಹೊಟ್ಟೆಕಿಚ್ಚಿನಿಂದ ಕೋಪಗೊಂಡನು. ಅವನು ಯೆಹೂದ್ಯರನ್ನು ಹಾಸ್ಯ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:1
13 ತಿಳಿವುಗಳ ಹೋಲಿಕೆ  

ಇನ್ನೂ ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು ತಿಂದು ಬೇಡಿ ಸೆರೆವಾಸವನ್ನು ಸಹ ಅನುಭವಿಸಿದರು,


ಇಸ್ರಾಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬಾ ವಿಚಲಿತರಾದರು.


ಹೀಗಿರಲು ಮಹಾಯಾಜಕನೂ ಅವನ ಬಳಿಯಲ್ಲಿದ್ದ ಸದ್ದುಕಾಯರೆಲ್ಲರೂ ಬಹಳ ಅಸೂಯೆಪಟ್ಟರು.


ಆದರೆ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ಯ ದಾಸನಾದ ಟೋಬೀಯನೂ, ಅರಬಿಯನಾದ ಗೆಷೆಮನೂ ಇದನ್ನು ಕೇಳಿದಾಗ, ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ, “ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರುಗಿಬೀಳುವಿರೋ?” ಎಂದರು.


ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು, ಯೇಸುವಿನ ತಲೆಯ ಮೇಲಿಟ್ಟು, ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಅವರ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಮಸ್ಕಾರ!” ಎಂದು ಹೇಳಿ ಯೇಸುವನ್ನು ಹಾಸ್ಯಮಾಡಿದರು.


ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು.


ಹೀಗೆ ಗೋಡೆಯು ಐವತ್ತೆರಡು ದಿವಸಗಳಲ್ಲಿ ಏಲುಲ್ ತಿಂಗಳದ ಇಪ್ಪತ್ತೈದನೆಯ ದಿವಸದಲ್ಲಿ ಮುಗಿಯಿತು.


ಈ ಸುದ್ದಿ ಸುತ್ತಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.


ಮಹಾಯಾಜಕನಾದ ಎಲ್ಯಾಷೀಬನ ಮಗ ಯೋಯಾದನ ಮಕ್ಕಳಲ್ಲಿ ಒಬ್ಬನು ಹೋರೋನಿನವನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.


ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನಾನು ಕಸ್ದೀಯರಿಗೆ ಒಳಗಾಗಿರುವ ಯೆಹೂದ್ಯರ ವಿಷಯ ಅಂಜುತ್ತೇನೆ. ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು. ಆಗ ಅವರು ನನ್ನನ್ನು ಹಿಂಸಿಸಬಹುದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು