Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:6 - ಕನ್ನಡ ಸಮಕಾಲಿಕ ಅನುವಾದ

6 ಹೀಗೆ ನಾವು ಪುನಃ ಗೋಡೆ ಕಟ್ಟುವುದನ್ನು ಮುಂದುವರಿಸಿದೆವು. ಗೋಡೆ ಅರ್ಧ ಎತ್ತರದವರೆಗೂ ಆಯಿತು. ಏಕೆಂದರೆ ಜನರು ಕೆಲಸ ಮಾಡುವುದಕ್ಕೆ ಮನಸ್ಸುಳ್ಳವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೂ ನಾವು ಕಟ್ಟುವ ಕೆಲಸವನ್ನು ಮುಂದುವರಿಸಿದೆವು. ಜನರು ಅದಕ್ಕೆ ಮನಸ್ಸು ಕೊಟ್ಟಿದ್ದರಿಂದ ಗೋಡೆಯೆಲ್ಲಾ ಅರ್ಧ ಎತ್ತರದವರೆಗೂ ಸಮನಾಗಿ ಕಟ್ಟಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಾದ ಮೇಲೆ ನಾವು ಕಟ್ಟುವ ಕೆಲಸವನ್ನು ಮುಂದುವರಿಸಿದೆವು. ಜನರು ಮನಸ್ಸುಮಾಡಿ ಅರ್ಧಗೋಡೆಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೂ ನಾವು ಕಟ್ಟುವ ಕೆಲಸವನ್ನು ಮುಂದರಿಸಿದೆವು. ಜನರು ಅದಕ್ಕೆ ಮನಸ್ಸು ಕೊಟ್ಟದ್ದರಿಂದ ಗೋಡೆಯೆಲ್ಲಾ ಅರ್ಧ ಎತ್ತರದವರೆಗೂ ಜೋಡನೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜೆರುಸಲೇಮಿನ ಗೋಡೆಯನ್ನು ನಾವು ಕಟ್ಟಿ ಮುಗಿಸಿದೆವು. ಪಟ್ಟಣದ ಸುತ್ತಲೂ ಪೌಳಿಗೋಡೆಯನ್ನು ಕಟ್ಟಿದೆವು. ಆದರೆ ಅದರ ಎತ್ತರ ಇರಬೇಕಾದಷ್ಟು ಇರದೆ ಅರ್ಧದ ತನಕ ಇದ್ದವು. ನಮ್ಮ ಜನರು ತಮ್ಮ ಹೃದಯ ಪೂರ್ವಕವಾಗಿ ಕೆಲಸ ಮಾಡಿದ್ದುದರಿಂದ ನಮಗೆ ಅಷ್ಟಾದರೂ ಮಾಡುವುದಕ್ಕೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:6
13 ತಿಳಿವುಗಳ ಹೋಲಿಕೆ  

ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ.


ನೀವು ದೇವರ ಚಿತ್ತಾನುಸಾರವಾಗಿ ಎಲ್ಲವನ್ನೂ ಮಾಡುವಂತೆ ನಿಮ್ಮನ್ನು ಸನ್ನದ್ಧರಾಗಿ ಮಾಡಲಿ. ಕ್ರಿಸ್ತ ಯೇಸುವಿನ ಶಕ್ತಿಯ ಮೂಲಕವಾಗಿ ಪ್ರತಿಯೊಂದು ಸತ್ಕಾರ್ಯಗಳನ್ನು ತಮಗೆ ಮೆಚ್ಚಿಕೆಯಾಗುವಂತೆ ನಿಮ್ಮ ಮೂಲಕವಾಗಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಯೇಸುವಿಗೆ ಮಹಿಮೆ ಉಂಟಾಗಲಿ. ಆಮೆನ್.


ಹೀಗೆ ಗೋಡೆಯು ಐವತ್ತೆರಡು ದಿವಸಗಳಲ್ಲಿ ಏಲುಲ್ ತಿಂಗಳದ ಇಪ್ಪತ್ತೈದನೆಯ ದಿವಸದಲ್ಲಿ ಮುಗಿಯಿತು.


“ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವುದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಏಕೆಂದರೆ ಸಮಸ್ತವೂ ನಿಮ್ಮಿಂದಲೇ.


ಇದಲ್ಲದೆ ನಾನು ನನ್ನ ದೇವರ ಮನೆಯ ಮೇಲೆ ನನಗೆ ಭಕ್ತಿ ಇರುವುದರಿಂದ, ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು, ನನ್ನ ಸ್ವಂತ ಸ್ವತ್ತಿನಿಂದ ಬಂಗಾರವನ್ನೂ, ಬೆಳ್ಳಿಯನ್ನೂ ನನ್ನ ಪವಿತ್ರ ದೇವರ ಮನೆಗೆ ಕೊಟ್ಟಿದ್ದೇನೆ.


ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು.


ಆಗ ದೇವರು ತಮ್ಮ ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ, ಜನರೆಲ್ಲರೂ ಸಂತೋಷಪಟ್ಟರು. ಏಕೆಂದರೆ ಈ ಕಾರ್ಯವು ತ್ವರೆಯಾಗಿ ನಡೆಯಿತು.


ಅವರು ಕಟ್ಟುವವರ ಮುಂದೆ ನಿಮ್ಮನ್ನು ಕೆಣಕಿದ್ದರಿಂದ ನೀವು ಅವರ ಅಪರಾಧವನ್ನು ಮುಚ್ಚಬೇಡಿರಿ. ನಿಮ್ಮ ಮುಂದೆ ಇರುವ ಅವರ ಪಾಪಗಳನ್ನು ಅಳಿಸಿಬಿಡಬೇಡಿರಿ ಎಂದು ನಾನು ಪ್ರಾರ್ಥಿಸಿದೆ.


ಯೆರೂಸಲೇಮಿನ ಗೋಡೆಯ ದುರಸ್ತಿಕಾರ್ಯ ಮುಂದುವರಿದಿದೆ ಹಾಗು ಅದರ ಸಂದುಗಳು ಮತ್ತೆ ಮುಚ್ಚಿಕೊಳ್ಳುತ್ತಿವೆ ಎಂದು ಸನ್ಬಲ್ಲಟನೂ ಟೋಬೀಯನೂ ಅರಬಿಯರೂ ಅಮ್ಮೋನ್ಯರೂ ಅಷ್ಡೋದ್ಯರೂ ಕೇಳಿದಾಗ ಬಹು ಕೋಪಗೊಂಡರು.


ಯೆರೂಸಲೇಮು, ಗಂಭೀರವಾಗಿಯೂ ಗಟ್ಟಿಯಾಗಿಯೂ ಕಟ್ಟಿರುವ ಪಟ್ಟಣವಾಗಿದೆ.


ಯೆಹೋವ ದೇವರು ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನ ಆತ್ಮವನ್ನೂ, ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನ ಆತ್ಮವನ್ನೂ, ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಪ್ರೇರೇಪಿಸಿದರು. ಅವರು ಬಂದು ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೇ ವರ್ಷದ, ಆರನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಯೆಹೋವ ದೇವರ ಆಲಯದ ಕೆಲಸ ಪ್ರಾರಂಭಿಸಿದರು. ಅರಸನಾದ ದಾರ್ಯಾವೆಷನ ಎರಡನೇ ವರ್ಷದಲ್ಲಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು