Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:10 - ಕನ್ನಡ ಸಮಕಾಲಿಕ ಅನುವಾದ

10 ನಾನು, ನನ್ನ ಸಹೋದರರು, ಸೇವಕರು ಸಹ ಅವರಿಗೆ ಹಣವನ್ನೂ, ಧಾನ್ಯವನ್ನೂ ಸಾಲವಾಗಿ ಕೊಟ್ಟಿದ್ದೇವೆ. ಬಡ್ಡಿ ತೆಗೆದುಕೊಳ್ಳುವ ಪದ್ಧತಿಯನ್ನು ಬಿಟ್ಟುಬಿಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನೂ ನನ್ನ ಸಹೋದರರೂ ಸೇವಕರೂ ಸಹ ಅವರಿಗೆ ಹಣವನ್ನೂ, ಧಾನ್ಯವನ್ನೂ ಸಾಲವಾಗಿ ಕೊಟ್ಟಿದ್ದೇವೆ. ಬಡ್ಡಿತೆಗೆದುಕೊಳ್ಳುವ ಈ ಪದ್ಧತಿಯನ್ನು ಬಿಟ್ಟುಬಿಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಾನು, ನನ್ನ ಸಹೋದರರು, ಸೇವಕರು ಸಹ, ಅವರಿಗೆ ಹಣವನ್ನೂ ಧಾನ್ಯವನ್ನೂ ಬಡ್ಡಿಗೆ ಕೊಟ್ಟಿದ್ದೇವೆ. ಬಡ್ಡಿ ತೆಗೆದುಕೊಳ್ಳುವ ಪದ್ಧತಿಯನ್ನು ಬಿಟ್ಟುಬಿಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನೂ ನನ್ನ ಸಹೋದರರೂ ಸೇವಕರೂ ಸಹ ಅವರಿಗೆ ಹಣವನ್ನೂ ಧಾನ್ಯವನ್ನೂ ಬಡ್ಡಿಗೆ ಕೊಟ್ಟಿದ್ದೇವೆ. ಬಡ್ಡಿ ತೆಗೆದುಕೊಳ್ಳುವ ಪದ್ಧತಿಯನ್ನು ಬಿಟ್ಟುಬಿಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಜನರು, ನನ್ನ ಬಂಧುಗಳು ಮತ್ತು ನಾನು ಹಣವನ್ನು ದವಸಧಾನ್ಯಗಳನ್ನು ಎರವಲಾಗಿ ಕೊಡುತ್ತೇವೆ. ಆದರೆ ಅವರಿಂದ ಬಡ್ಡಿಯನ್ನು ವಸೂಲು ಮಾಡುವುದಿಲ್ಲ. ಸಾಲ ಪಡೆದುಕೊಂಡವರಿಂದ ಬಡ್ಡಿಯನ್ನು ಬಲವಂತದಿಂದ ವಸೂಲು ಮಾಡುವುದನ್ನು ನಾವು ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:10
18 ತಿಳಿವುಗಳ ಹೋಲಿಕೆ  

ನೀವು ಹೊಂದಿರುವ ದೇವರ ಕೃಪೆಯನ್ನು ವ್ಯರ್ಥಮಾಡಿಕೊಳ್ಳಬೇಡಿರೆಂದು ದೇವರ ಜೊತೆಕೆಲಸದವರಾದ ನಾವು ನಿಮ್ಮಲ್ಲಿ ಬೇಡಿಕೊಳ್ಳುತ್ತೇವೆ,


ಆದ್ದರಿಂದ ನಾವು ಕ್ರಿಸ್ತ ಯೇಸುವಿನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ನಿಮಗೆ ಕರೆ ನೀಡುತ್ತಾರೆ. ಆದ್ದರಿಂದ ಕ್ರಿಸ್ತ ಯೇಸುವಿನ ಪರವಾಗಿ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ದೇವರೊಡನೆ ಸಮಾಧಾನ ಮಾಡಿಕೊಳ್ಳಿರಿ.


ಕರ್ತನ ಭಯಭಕ್ತಿಯನ್ನು ಅರಿತಿರುವ ಕಾರಣ, ಜನರ ಮನವೊಲಿಸಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲವರಾಗಿದ್ದಾರೆ. ಅದು ನಿಮ್ಮ ಮನಸ್ಸಾಕ್ಷಿಗೂ ತಿಳಿದಿದೆ ಎಂದು ನಾನು ನಂಬುತ್ತೇನೆ.


ಅಪರಾಧವನ್ನು ಯೋಚಿಸಿ ಅಪರಾಧವನ್ನು ಕಲ್ಪಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡೆಸುವವರಿಗೆ ಕಷ್ಟ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ. ಏಕೆಂದರೆ ಅದು ಅವರ ಕೈಶಕ್ತಿಯಲ್ಲಿದೆ.


ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭ ಪಡೆಯುವವನು ಆಗಿದ್ದರೆ, ಅವನು ಬದುಕುವನೋ? ಅವನು ಬದುಕುವುದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿದ್ದರಿಂದ ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.


ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯದಿಂದ ತನ್ನ ಕೈಯನ್ನು ಹಿಂತೆಗೆದು ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,


ಅವರು ಬಡವರಿಗೆ ಸಾಲ ಕೊಟ್ಟು ಬಡ್ಡಿಕೇಳದವರೂ; ನಿರಪರಾಧಿಯ ಕೇಡಿಗಾಗಿ ಲಂಚ ತೆಗೆದುಕೊಳ್ಳದವರೂ ಆಗಿರಬೇಕು. ಈ ರೀತಿಯಾಗಿ ಬಾಳುವವರು ಎಂದಿಗೂ ಕದಲುವುದಿಲ್ಲ.


ನಾನು ತುಸು ಆಲೋಚಿಸಿ ನೋಡಿದೆ. ಬಳಿಕ ಶ್ರೇಷ್ಠರನ್ನೂ, ಅಧಿಕಾರಿಗಳನ್ನೂ ಖಂಡಿಸಿ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದು ಸರಿಯೇ?” ಎಂದು ಹೇಳಿ ಅವರೊಡನೆ ಬಹಳವಾಗಿ ವಾಗ್ವಾದಿಸಿ, ಅವರಿಗೆ ವಿರೋಧವಾಗಿ ಮಹಾ ಸಭೆಯನ್ನು ಕೂಡಿಸಿದೆ.


ನಾನು ಅವರಿಗೆ, “ನೀವು ಮಾಡುವುದು ಒಳ್ಳೆಯದಲ್ಲ. ಇತರ ದೇಶದವರಾದ ನಮ್ಮ ಶತ್ರುಗಳ ನಿಂದೆಗೆ ಗುರಿಯಾಗದಂತೆ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲವೇ.


ಅವರ ಹೊಲ, ದ್ರಾಕ್ಷಿತೋಟ, ಓಲಿವ್ ಎಣ್ಣೆಮರಗಳ ತೋಪು, ಮನೆ ಇವುಗಳನ್ನು ಹಿಂದಕ್ಕೆ ಕೊಟ್ಟು ಬಿಡಿ; ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೆ ಶೇಕಡಾ ಇಷ್ಟೆಂದು ವಸೂಲಿ ಮಾಡುವ ಹಕ್ಕನ್ನೂ ಕೂಡ ದಯವಿಟ್ಟು ಈ ದಿನವೇ ರದ್ದುಗೊಳಿಸಿ,” ಎಂದು ಹೇಳಿದೆ.


“ನಾನು ಆಯ್ದುಕೊಳ್ಳುವ ಉಪವಾಸವು ಅನ್ಯಾಯದ ಸರಪಣಿಯನ್ನು ಬಿಚ್ಚುವುದೂ, ಭಾರವಾದ ಹೊರೆಯನ್ನು ಬಿಚ್ಚುವುದೂ, ದಬ್ಬಾಳಿಕೆಯಾದವರನ್ನು ಬಿಡಿಸುವುದೂ, ನೊಗಗಳನ್ನೆಲ್ಲಾ ಮುರಿದುಹಾಕುವುದೂ, ಇವೇ ಅಲ್ಲವೋ?


ನೀವು ಮಾಡಬೇಕಾದ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಾದ ಇಸ್ರಾಯೇಲರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡಬೇಕು. ಅದು ಯೆಹೋವ ದೇವರ ಬಿಡುಗಡೆಯ ವರ್ಷ ಎಂದು ಪ್ರಕಟವಾಗಿರುವುದರಿಂದ ತನ್ನ ನೆರೆಯವನಿಂದಲೂ, ತನ್ನ ಸಹೋದರನಿಂದಲೂ ಸಾಲವನ್ನು ಕೇಳಬಾರದು.


ವರ್ಷಕ್ಕೆ 4 ಗ್ರಾಂ ಬೆಳ್ಳಿಯನ್ನು ನಮ್ಮ ದೇವರ ಆಲಯದ ಸೇವೆಗಾಗಿ ಕೊಡಬೇಕೆಂಬ ನಿಯಮವನ್ನು ಪಾಲಿಸಿಕೊಳ್ಳುತ್ತೇವೆ.


ಯಾರನ್ನೂ ಉಪದ್ರವಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸೆ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆಯಿರುವವನಿಗೆ ಬಟ್ಟೆಯನ್ನು ಹೊದಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು