Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:12 - ಕನ್ನಡ ಸಮಕಾಲಿಕ ಅನುವಾದ

12 ಅದಕ್ಕವರು, “ನಾವು ಹಿಂದಕ್ಕೆ ಕೊಡುತ್ತೇವೆ. ಅವರಿಂದ ಏನೂ ಕೇಳುವುದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ,” ಎಂದರು. ಆಗ ನಾನು ಯಾಜಕರನ್ನು ಕರೆದು, ಅವರು ಈ ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತೆಗೆದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ಅವರು, “ನಾವು ಅವರಿಂದ ತೆಗೆದುಕೊಂಡದ್ದನ್ನು ಹಿಂದಕ್ಕೆ ಕೊಡುತ್ತೇವೆ, ಅವರಿಂದ ಏನೂ ಕೇಳುವುದಿಲ್ಲ, ನೀನು ಹೇಳಿದಂತೆಯೇ ಮಾಡುತ್ತೇವೆ” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಸಿ ಈ ಮಾತಿನಂತೆ ನಡೆಯುವುದಾಗಿ ಅವರಿಂದ ಪ್ರಮಾಣ ಮಾಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರು, “ಹಿಂದಕ್ಕೆ ಕೊಡುತ್ತೇವೆ; ಅವರಿಂದ ಏನೂ ಕೇಳುವುದಿಲ್ಲ. ನೀವು ಹೇಳಿದಂತೆಯೇ, ಮಾಡುತ್ತೇವೆ,” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಯಿಸಿದೆ; ಯಾಜಕರ ಮುಂದೆ, ತಾವು ಕೊಟ್ಟ ಮಾತಿನಂತೆ ನಡೆಯುವುದಾಗಿ ಪ್ರಮಾಣ ಮಾಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು - ಹಿಂದಕ್ಕೆ ಕೊಡುತ್ತೇವೆ; ಅವರಿಂದ ಏನೂ ಕೇಳುವದಿಲ್ಲ. ನೀನು ಹೇಳಿದಂತೆಯೇ ಮಾಡುತ್ತೇವೆ ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರಿಸಿ ಈ ಮಾತಿನಂತೆ ನಡೆಯುವದಾಗಿ ಅವರಿಂದ ಪ್ರಮಾಣ ಮಾಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಶ್ರೀಮಂತರೂ ಅಧಿಕಾರಿಗಳೂ, “ನಾವು ಹಿಂದಕ್ಕೆ ಕೊಡುತ್ತೇವೆ. ಅವರಿಂದ ನಾವು ಹೆಚ್ಚೇನೂ ಕೇಳುವುದಿಲ್ಲ. ನೆಹೆಮೀಯನೇ, ನೀನು ಹೇಳಿದಂತೆಯೇ ನಾವು ಮಾಡುತ್ತೇವೆ” ಎಂದರು. ಆಗ ನಾನು ದೇವರ ಮುಂದೆ ಅವರಿಂದ ಪ್ರತಿಜ್ಞೆ ಮಾಡಿಸಲು ಯಾಜಕರನ್ನು ಕರೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:12
15 ತಿಳಿವುಗಳ ಹೋಲಿಕೆ  

ಆಗ ಎಜ್ರನು ಎದ್ದು, ಮಹಾಯಾಜಕರೂ ಲೇವಿಯರೂ ಸಮಸ್ತ ಇಸ್ರಾಯೇಲರೂ ಈ ಮಾತಿನ ಪ್ರಕಾರವಾಗಿ ಮಾಡಲು, ಅವರು ಆಣೆಯಿಡುವ ಹಾಗೆ ಮಾಡಿದನು. ಅವರು ಆಣೆ ಇಟ್ಟರು.


ಆದರೆ ಜಕ್ಕಾಯನು ನಿಂತುಕೊಂಡು ಕರ್ತದೇವರಿಗೆ, “ಸ್ವಾಮೀ, ಇಗೋ, ನನ್ನ ಸ್ವತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಟ್ಟುಬಿಡುತ್ತೇನೆ. ನಾನು ಯಾರಿಗಾದರೂ ಏನಾದರೂ ಮೋಸಮಾಡಿ ಅವರಿಂದ ತೆಗೆದುಕೊಂಡಿದ್ದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಆದರೆ ಯೇಸು ಸುಮ್ಮನಿದ್ದರು. ಆಗ ಮಹಾಯಾಜಕನು ಉತ್ತರವಾಗಿ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ನಮಗೆ ಇದನ್ನು ಹೇಳು: ನೀನು ದೇವಪುತ್ರನಾದ ಕ್ರಿಸ್ತನೋ?” ಎಂದನು.


ಆಗ ನಾನು ಅವರನ್ನು ಗದರಿಸಿ, ಶಪಿಸಿ, ಅವರಲ್ಲಿ ಕೆಲವರನ್ನು ಹೊಡೆದು, ಅವರ ಕೂದಲನ್ನು ಕಿತ್ತು, “ನೀವು ನಿಮ್ಮ ಪುತ್ರಿಯರನ್ನು ಅವರ ಪುತ್ರರಿಗೂ, ಅವರ ಪುತ್ರಿಯರನ್ನು ನಿಮ್ಮ ಪುತ್ರರಿಗೂ, ಮದುವೆಮಾಡಿಕೊಡಬೇಡಿರಿ, ಎಂದು ದೇವರ ಹೆಸರಿನಲ್ಲಿ ಅವರಿಂದ ಪ್ರಮಾಣಮಾಡಿಸಿದೆನು.


ಬೇರೆ ದೇಶದ ಜನರು ಸಬ್ಬತ್ ದಿನದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲು ತೆಗೆದುಕೊಂಡು ಬಂದರೆ, ನಾವು ಅವುಗಳನ್ನು ಸಬ್ಬತ್ ದಿನದಲ್ಲಾದರೂ, ಪರಿಶುದ್ಧ ದಿನದಲ್ಲಾದರೂ ಅವರಿಂದ ಕೊಂಡುಕೊಳ್ಳುವುದಿಲ್ಲ. ಮತ್ತು ನಾವು ಏಳನೆಯ ವರ್ಷದಲ್ಲಿ ಭೂಮಿ ಕೆಲಸ ಮಾಡುವುದನ್ನು ಬಿಡುತ್ತೇವೆ ಮತ್ತು ಎಲ್ಲಾ ಸಾಲಗಳನ್ನು ರದ್ದುಗೊಳಿಸುತ್ತೇವೆ.


ತಮ್ಮ ಸಹೋದರರಾದ ತಮ್ಮ ಶ್ರೇಷ್ಠರ ಸಂಗಡ ಕೂಡಿಕೊಂಡು ದೇವರ ಸೇವಕ ಮೋಶೆಯ ಕೈಯಿಂದ ಕೊಟ್ಟ ದೇವರ ನಿಯಮದಂತೆ ನಡೆಯುತ್ತೇವೆಂದೂ, ನಮ್ಮ ಕರ್ತ ಆಗಿರುವ ಯೆಹೋವ ದೇವರ ಆಜ್ಞೆಗಳನ್ನೂ, ಅವರ ನ್ಯಾಯಗಳನ್ನೂ, ಅವರ ಕಟ್ಟಳೆಗಳನ್ನೂ, ಎಲ್ಲವನ್ನೂ ಕೈಗೊಂಡು ಮಾಡುತ್ತೇವೆಂದೂ ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು;


ಆಗ ಸಭೆಯೆಲ್ಲಾ ಉತ್ತರವಾಗಿ ದೊಡ್ಡ ಶಬ್ದದಿಂದ, “ನೀನು ಸರಿಯಾಗಿ ಹೇಳಿದೆ! ನೀನು ಹೇಳಿದ ಪ್ರಕಾರವೇ ನಾವು ಮಾಡಬೇಕು.


ಅವರ ಹೊಲ, ದ್ರಾಕ್ಷಿತೋಟ, ಓಲಿವ್ ಎಣ್ಣೆಮರಗಳ ತೋಪು, ಮನೆ ಇವುಗಳನ್ನು ಹಿಂದಕ್ಕೆ ಕೊಟ್ಟು ಬಿಡಿ; ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೆ ಶೇಕಡಾ ಇಷ್ಟೆಂದು ವಸೂಲಿ ಮಾಡುವ ಹಕ್ಕನ್ನೂ ಕೂಡ ದಯವಿಟ್ಟು ಈ ದಿನವೇ ರದ್ದುಗೊಳಿಸಿ,” ಎಂದು ಹೇಳಿದೆ.


ನಾವು ನಮ್ಮ ಪುತ್ರಿಯರನ್ನು ಇತರ ಜನರಿಗೆ ಕೊಡುವುದಿಲ್ಲ, ನಮ್ಮ ಪುತ್ರರಿಗೆ ಅವರ ಪುತ್ರಿಯರನ್ನು ತೆಗೆದುಕೊಳ್ಳುವುದಿಲ್ಲ ಎಂದು ಆಣೆ ಮಾಡುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು