Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:16 - ಕನ್ನಡ ಸಮಕಾಲಿಕ ಅನುವಾದ

16 ಈ ಸುದ್ದಿ ಸುತ್ತಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈ ಸುದ್ದಿಯು ನಮ್ಮ ವಿರೋಧಿಗಳಾದ ಸುತ್ತಣ ಎಲ್ಲಾ ಜನಾಂಗದವರಿಗೆ ತಲುಪಿದಾಗ ಅವರು ಭಯವುಳ್ಳವರಾಗಿ ಸೊಕ್ಕನ್ನು ಬಿಟ್ಟು ಬಹಳ ಮನಗುಂದಿ ತಗ್ಗಿ ಹೋದರು. ಈ ಕಾರ್ಯವು ದೇವರ ಸಹಾಯದಿಂದಲೇ ಪೂರ್ಣಗೊಂಡಿತು ಎಂಬುದು ಅವರಿಗೆ ತಿಳಿದುಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈ ಸುದ್ದಿ ಸುತ್ತ-ಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈ ಸುದ್ದಿಯು ನಮ್ಮ ವಿರೋಧಿಗಳಾದ ಸುತ್ತಣ ಎಲ್ಲಾ ಜನಾಂಗಗಳವರಿಗೆ ಮುಟ್ಟಿದಾಗ ಅವರು ಭಯವುಳ್ಳವರಾಗಿ ಸೊಕ್ಕನ್ನು ಬಿಟ್ಟು ಬಹಳ ಮನಗುಂದಿದವರಾದರು. ಈ ಕಾರ್ಯವು ನಮ್ಮ ದೇವರಿಂದಲೇ ಪೂರೈಸಿತು ಎಂದು ಅವರಿಗೆ ಮಂದಟ್ಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಮ್ಮ ವೈರಿಗಳೆಲ್ಲಾ ಕೆಲಸ ಸಂಪೂರ್ಣವಾದದ್ದನ್ನು ಕೇಳಿದರು. ನಮ್ಮ ಸುತ್ತಮುತ್ತಲಿನ ಪ್ರಾಂತ್ಯಗಳವರಿಗೂ ದೇಶಗಳವರಿಗೂ ಈ ಸುದ್ದಿಮುಟ್ಟಿತು. ಆಗ ಅವರ ಧೈರ್ಯವು ಕುಗ್ಗಿತು. ಯಾಕೆಂದರೆ ಈ ಮಹಾಕಾರ್ಯವನ್ನು ನಮ್ಮ ದೇವರ ಸಹಾಯದಿಂದಲೇ ನಾವು ಮಾಡಿದ್ದೇವೆಂದು ಅವರಿಗೆ ಅರ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:16
16 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಯೆಹೋವ ದೇವರು ಇಸ್ರಾಯೇಲರು ದಾಟಿಹೋಗುವವರೆಗೆ ಅವರ ಮುಂದೆ ಯೊರ್ದನ್ ನದಿಯನ್ನು ಒಣಗಿ ಹೋಗುವಂತೆ ಮಾಡಿದ್ದನ್ನು ಯೊರ್ದನ್ ನದಿ ಪಶ್ಚಿಮದ ಆಚೆದಡದಲ್ಲಿ ವಾಸಿಸಿದ್ದ ಅಮೋರಿಯರ ಸಕಲ ಅರಸರು ಮತ್ತು ಸಮುದ್ರದ ಆಚೆಯಲ್ಲಿ ವಾಸಿಸಿದ್ದ ಕಾನಾನ್ಯರ ಸಕಲ ಅರಸರು ಕೇಳಿದಾಗ ಅವರ ಹೃದಯವು ಕುಂದಿಹೋಯಿತು. ಇಸ್ರಾಯೇಲರ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.


ಆಗ ನಮ್ಮ ಬಾಯಿ ನಗೆಯಿಂದಲೂ, ನಮ್ಮ ಬಾಯಿ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಜನಾಂಗಗಳು, “ಯೆಹೋವ ದೇವರು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ,” ಎಂದು ಹೇಳಿದರು.


ಯೆರೂಸಲೇಮಿನ ಗೋಡೆಯ ದುರಸ್ತಿಕಾರ್ಯ ಮುಂದುವರಿದಿದೆ ಹಾಗು ಅದರ ಸಂದುಗಳು ಮತ್ತೆ ಮುಚ್ಚಿಕೊಳ್ಳುತ್ತಿವೆ ಎಂದು ಸನ್ಬಲ್ಲಟನೂ ಟೋಬೀಯನೂ ಅರಬಿಯರೂ ಅಮ್ಮೋನ್ಯರೂ ಅಷ್ಡೋದ್ಯರೂ ಕೇಳಿದಾಗ ಬಹು ಕೋಪಗೊಂಡರು.


ನಾವು ಗೋಡೆಯನ್ನು ಪುನಃ ಕಟ್ಟುವ ವರ್ತಮಾನವನ್ನು ಸನ್ಬಲ್ಲಟನು ಕೇಳಿದಾಗ, ಅವನು ಕೋಪಗೊಂಡು, ಯೆಹೂದ್ಯರಿಗೆ ಗೇಲಿಮಾಡಿ,


ಇಸ್ರಾಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬಾ ವಿಚಲಿತರಾದರು.


ಆದ್ದರಿಂದ, ಈಗ ನಾನು ನಿಮಗೆ ಹೇಳುವುದೇನೆಂದರೆ, ಈ ಜನರಿಂದ ದೂರವಾಗಿರಿ! ಅವರನ್ನು ಬಿಟ್ಟುಬಿಡಿರಿ! ಏಕೆಂದರೆ ಅವರ ಉದ್ದೇಶ ಅಥವಾ ಕಾರ್ಯವು ಮನುಷ್ಯರಿಂದ ಬಂದದ್ದಾಗಿದ್ದರೆ, ಅದೇ ವ್ಯರ್ಥವಾಗುವುದು.


ನಿಶ್ಚಯವಾಗಿ ಯಾಕೋಬನಲ್ಲಿ ಕಣಿಕೇಳುವದು ಇಲ್ಲ. ಇಸ್ರಾಯೇಲರಲ್ಲಿ ಶಕುನನೋಡುವದು ಇಲ್ಲ. ‘ನೋಡಿರಿ, ದೇವರು ಎಂತಹ ಮಹತ್ಕಾರ್ಯವನ್ನು ಮಾಡಿದ್ದಾರೆ,’ ಎಂದು ಯಾಕೋಬನ ವಿಷಯವಾಗಿಯೂ, ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.


ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟು ಕಷ್ಟದಿಂದ ಅವರು ಹೋಗುವಂತೆ ಮಾಡಿದರು. ಆಗ ಈಜಿಪ್ಟಿನವರು, “ಇಸ್ರಾಯೇಲರ ಎದುರಿನಿಂದ ಓಡಿಹೋಗೋಣ. ಏಕೆಂದರೆ ಯೆಹೋವ ದೇವರು ಈಜಿಪ್ಟಿನವರಿಗೆ ವಿರೋಧವಾಗಿ ಯುದ್ಧಮಾಡುತ್ತಾರೆ,” ಎಂದು ಹೇಳಿಕೊಂಡರು.


ಹೇಗಿದ್ದರೂ ಆ ದಿವಸಗಳಲ್ಲಿ ಯೆಹೂದದಲ್ಲಿದ್ದ ಶ್ರೇಷ್ಠರು ಟೋಬೀಯನ ಬಳಿಗೆ ಬಹಳ ಪತ್ರಗಳನ್ನು ಕಳುಹಿಸಿದರು. ಟೋಬೀಯನಿಂದ ಉತ್ತರ ಅವರಿಗೆ ಬರುತ್ತಿದ್ದವು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’


“ಯೆಹೋವ ದೇವರು ನಿಮಗೆ ದೇಶವನ್ನು ಕೊಟ್ಟಿದ್ದಾರೆಂದೂ, ನಿಮ್ಮ ನಿಮಿತ್ತ ನಮಗೆ ಮಹಾ ಭೀತಿಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.


ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕುಂದಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ನಿಮ್ಮ ದೇವರಾದ ಯೆಹೋವ ದೇವರೇ ಮೇಲಿರುವ ಪರಲೋಕದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾರೆ.


ಇದು ನಿಮ್ಮ ಕೈ ಕೆಲಸ ಎಂದು ಅವರಿಗೆ ಗೊತ್ತಾಗಲಿ, ಇದು ನಿನ್ನಿಂದಲೇ ಆಯಿತೆಂದು ಅವರು ತಿಳಿದುಕೊಳ್ಳಲಿ.


ಚೀಯೋನನ್ನು ದ್ವೇಷಿಸುವವರೆಲ್ಲರು ನಾಚಿಕೆಪಟ್ಟು ಹಿಂದಿರುಗಲಿ.


ಯೆಹೋವ ದೇವರು ಯೆರೂಸಲೇಮನ್ನು ಕಟ್ಟುತ್ತಾರೆ, ಚದರಿಹೋದ ಇಸ್ರಾಯೇಲನ್ನು ಕೂಡಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು