Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:6 - ಕನ್ನಡ ಸಮಕಾಲಿಕ ಅನುವಾದ

6 ಅದರಲ್ಲಿ ಹೀಗೆ ಬರೆದಿತ್ತು: “ಗೆಷೆಮ್ ಎಂಬವನು ನನಗೆ ತಿಳಿಸಿದ ಪ್ರಕಾರ ನೀನೂ, ಯೆಹೂದ್ಯರೂ ತಿರುಗಿಬೀಳಲು ಯೋಚಿಸುತ್ತೀರಿ. ಆದಕಾರಣ ಈ ಮಾತುಗಳ ಪ್ರಕಾರ ನೀನು ಅವರಿಗೆ ಅರಸನಾಗಿರುವ ಹಾಗೆ ಗೋಡೆಯನ್ನು ಪುನಃ ಕಟ್ಟಿಸುತ್ತಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದರಲ್ಲಿ “ಗೆಷೆಮ್ ಎಂಬುವನು ನನಗೆ ತಿಳಿಸಿದ ಪ್ರಕಾರ, ನೀನೂ ಮತ್ತು ಯೆಹೂದ್ಯರೂ ತಿರುಗಿ ಬೀಳಬೇಕೆಂದಿದ್ದೀರಿ; ಆದುದರಿಂದಲೇ ನೀನು ಆ ಗೋಡೆಯನ್ನು ಕಟ್ಟಿಸುತ್ತಿರುವೆ ಮತ್ತು ನೀನು ಅವರಿಗೆ ಅರಸನಾಗಬೇಕೆಂದಿರುವೆಯೆಂಬ ಸುದ್ದಿಯು ಜನರಲ್ಲಿ ಹಬ್ಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದರಲ್ಲಿ, “ಗೆಷೆಮ್ ಎಂಬವನು ನನಗೆ ತಿಳಿಸಿದ ಪ್ರಕಾರ ನೀನೂ ಯೆಹೂದ್ಯರೂ ನನ್ನ ಮೇಲೆ ದಾಳಿಮಾಡಬೇಕೆಂದಿದ್ದೀರಿ; ಆದುದರಿಂದಲೇ, ನೀನು ಆ ಗೋಡೆಯನ್ನು ಕಟ್ಟಿಸುತ್ತಿರುವೆ. ನೀನು ಅವರ ಅರಸನಾಗುವೆ ಎಂಬ ಸುದ್ದಿ ಜನರಲ್ಲಿ ಹಬ್ಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದರಲ್ಲಿ - ಗೆಷೆಮ್ ಎಂಬವನು ನನಗೆ ತಿಳಿಸಿದ ಪ್ರಕಾರ ನೀನೂ ಯೆಹೂದ್ಯರೂ ತಿರುಗಿಬೀಳಬೇಕೆಂದಿದ್ದೀರಿ; ಆದದರಿಂದಲೇ ನೀನು ಆ ಗೋಡೆಯನ್ನು ಕಟ್ಟಿಸುತ್ತೀ. ಮತ್ತು ನೀನು ಅವರ ಅರಸನಾಗುವಿಯೆಂಬ ಸುದ್ದಿಯು ಜನರಲ್ಲಿ ಹಬ್ಬಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅದರಲ್ಲಿ, “ಒಂದು ಸುದ್ದಿಯು ಹರಡುತ್ತಲಿದೆ. ಎಲ್ಲಾ ಕಡೆಗಳಲ್ಲಿ ಜನರು ಅದರ ವಿಷಯವಾಗಿ ಮಾತಾಡುತ್ತಿದ್ದಾರೆ. ಆ ಸುದ್ದಿಯು ಸತ್ಯವೆಂದು ಗೆಷೆಮನು ನನಗೆ ಹೇಳಿದನು. ನೀನು ಮತ್ತು ಯೆಹೂದ್ಯರು ಅರಸನಿಗೆ ವಿರುದ್ಧವಾಗಿ ದಂಗೆ ಏಳಲು ಯೋಚಿಸುತ್ತಿದ್ದೀರೆಂಬ ವದಂತಿ ಇದೆ. ಅದಕ್ಕೋಸ್ಕರವಾಗಿಯೇ ನೀವು ಕೋಟೆಗೋಡೆಯನ್ನು ಕಟ್ಟುತ್ತಿದ್ದೀರಿ. ನೀನು ಯೆಹೂದ್ಯರ ಅರಸನಾಗುವೆ ಎಂದೂ ಜನರಲ್ಲಿ ಸುದ್ದಿ ಹಬ್ಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:6
16 ತಿಳಿವುಗಳ ಹೋಲಿಕೆ  

ಆದರೆ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ಯ ದಾಸನಾದ ಟೋಬೀಯನೂ, ಅರಬಿಯನಾದ ಗೆಷೆಮನೂ ಇದನ್ನು ಕೇಳಿದಾಗ, ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ, “ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರುಗಿಬೀಳುವಿರೋ?” ಎಂದರು.


ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ. ಆಗ ನೀವು ಕೆಟ್ಟದ್ದನ್ನು ಮಾಡುವವರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಒಳ್ಳೆಯ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೊಳ್ಳುವರು.


“ಒಳ್ಳೆಯದಾಗುವಂತೆ ಕೆಟ್ಟದ್ದನ್ನು ಮಾಡೋಣ,” ಎಂದು ನಾವು ಹೇಳುತ್ತಿರುವುದಾಗಿ, ಕೆಲವರು ನಮ್ಮ ಬಗ್ಗೆ ದೂಷಿಸಿ ಹೇಳುವ ಪ್ರಕಾರ ನಾವೇಕೆ ಹೇಳಬಾರದು? ಅಂಥವರಿಗೆ ದಂಡನೆಯ ತೀರ್ಪಾಗುವುದು ನ್ಯಾಯವೇ!


ಅದಾಗಿ, ತಮ್ಮ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು, ಯೆರೂಸಲೇಮನ್ನು ಸೇರಿ, ರಾಜಕಂಟಕವಾದ ಆ ದುಷ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಮತ್ತೆ ಕಟ್ಟುವುದಕ್ಕೆ ಪ್ರಾರಂಭಿಸಿ, ಪೌಳಿಗೋಡೆಯ ಅಸ್ತಿವಾರವನ್ನು ಮುಗಿಸಿದ್ದಾರೆ ಎಂಬುದಾಗಿ ನಾವು ರಾಜರಿಗೆ ಅರಿಕೆ ಮಾಡಿಕೊಳ್ಳುತ್ತೇವೆ.


ಮಾನ ಅವಮಾನಗಳಿಂದಲೂ ಕೀರ್ತಿ ಅಪಕೀರ್ತಿಗಳಿಂದಲೂ ಸತ್ಯವಂತರಾಗಿದ್ದರೂ ಮೋಸಗಾರರೂ ಎಂದೆಣಿಸಿಕೊಂಡವರಾಗಿದ್ದೇವೆ.


ಪಿಲಾತನು ಆ ಮಾತುಗಳನ್ನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದನು. ಹೀಬ್ರೂ ಭಾಷೆಯಲ್ಲಿ “ಗಬ್ಬಥಾ” ಎಂದು ಕರೆಯಲಾದ “ಕಲ್ಲು ಹಾಸಿದ ಕಟ್ಟೆ” ಎಂಬ ಕಟ್ಟೆಯ ಮೇಲಿದ್ದ ನ್ಯಾಯಾಸನದ ಮೇಲೆ ಕುಳಿತುಕೊಂಡನು.


ಅವರು ಯೇಸುವಿನ ಮೇಲೆ ದೂರು ಹೇಳಲಾರಂಭಿಸಿ, “ಈ ನಮ್ಮ ಜನಾಂಗವು ದಂಗೆಯೇಳುವಂತೆಯೂ ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದೂ ಹೇಳಿ ಕೈಸರನಿಗೆ ತೆರಿಗೆ ಕೊಡದಂತೆ ಈತನು ಅಡ್ಡಿಮಾಡುತ್ತಿರುವುದನ್ನೂ ನಾವು ಕಂಡಿದ್ದೇವೆ,” ಎಂದರು.


“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ, ಹಿಂಸಿಸಿ ನಿಮ್ಮ ಮೇಲೆ ಎಲ್ಲಾ ವಿಧವಾದ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.


ಏಕೆಂದರೆ ಅನೇಕರ ಚಾಡಿಯನ್ನು ಕೇಳಿದೆನು. “ಸುತ್ತಲೂ ಭಯವಿದೆ. ಅವನನ್ನು ಖಂಡಿಸಿರಿ! ಅವನನ್ನು ಖಂಡಿಸೋಣ!” ನನ್ನ ಆಪ್ತರೆಲ್ಲರೂ ನಾನು ಕುಂಟುವುದನ್ನು ನೋಡಿಕೊಳ್ಳುತ್ತಾ ಒಂದು ವೇಳೆ ಅವನು ಮೋಸಗೊಂಡಾನು. “ಆಗ ನಾವು ಅವನನ್ನು ಗೆದ್ದು, ಅವನಲ್ಲಿ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.”


ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರ ಗ್ರಂಥದಲ್ಲಿ ಪರಿಶೋಧಿಸಬೇಕೆಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣ ರಾಜಕಂಟಕವಾದ ಪಟ್ಟಣ. ಅರಸರಿಗೂ, ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥ ಪಟ್ಟಣ. ಇದು ಪೂರ್ವಕಾಲದಿಂದಲೂ ದೇಶದ್ರೋಹ ಮಾಡುತ್ತಾ ಬಂದಿದೆ ಎಂದೂ ಹಾಗು ಆ ಕಾರಣದಿಂದಲೇ ನೆಲಸಮವಾಯಿತೆಂದೂ ಆ ಚರಿತ್ರ ಗ್ರಂಥದಲ್ಲಿ ಕಂಡುಬರುತ್ತದೆ.


ಐದನೆಯ ಸಾರಿ ಸನ್ಬಲ್ಲಟನು ತನ್ನ ದೂತನ ಕೈಯಲ್ಲಿ ಮುಚ್ಚದಿದ್ದ ಒಂದು ಪತ್ರವನ್ನು ಕಳುಹಿಸಿದನು.


ಇದಲ್ಲದೆ, ಯೆಹೂದದಲ್ಲಿ ಅರಸನು ಇದ್ದಾನೆಂದೂ ಯೆರೂಸಲೇಮಿನಲ್ಲಿ ನಿನ್ನನ್ನು ಕುರಿತು ಕೂಗುವುದಕ್ಕೆ ನೀನು ಪ್ರವಾದಿಗಳನ್ನು ನೇಮಿಸಿದ್ದಿ ಎಂಬುದಾಗಿಯೂ ಜನಾಂಗಗಳಲ್ಲಿ ಸುದ್ದಿ ಉಂಟು. ಈಗ ಈ ವರ್ತಮಾನ ಅರಸನಿಗೆ ತಿಳಿಸಲಾಗುವುದು. ಆದಕಾರಣ ನಾವು ಕೂಡಿಕೊಂಡು ಯೋಚನೆ ಮಾಡಿಕೊಳ್ಳೋಣ ಬಾ.”


ನಾನು ಭಯಪಟ್ಟು ಹೀಗೆ ಮಾಡಿ ಪಾಪಮಾಡುವಂತೆಯೂ ಅವರು ನನ್ನನ್ನು ನಿಂದಿಸುವುದಕ್ಕೆ ಅಪಕೀರ್ತಿಯ ಕಾರಣವು ಅವರಿಗೆ ಸಿಕ್ಕುವಂತೆಯೂ ಶೆಮಾಯನಿಗೆ ಲಂಚಕೊಟ್ಟಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು