Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:1 - ಕನ್ನಡ ಸಮಕಾಲಿಕ ಅನುವಾದ

1 ನಾನು ಗೋಡೆಯನ್ನು ಪುನಃ ಕಟ್ಟಿಸಿ, ಬಾಗಿಲುಗಳನ್ನು ನಿಲ್ಲಿಸಿ, ತರುವಾಯ ಬಾಗಿಲು ಕಾಯುವವರನ್ನು, ಹಾಡುಗಾರರನ್ನು, ಲೇವಿಯರನ್ನು ನೇಮಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಗೋಡೆಯನ್ನು ಕಟ್ಟಿ ಮುಗಿಸಿದ ನಂತರ ನಾನು ಬಾಗಿಲುಗಳನ್ನು ಇರಿಸಿದೆನು; ದ್ವಾರಪಾಲಕರನ್ನೂ, ಗಾಯಕರನ್ನೂ, ಲೇವಿಯರನ್ನೂ ನೇಮಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಗೋಡೆಯನ್ನು ಕಟ್ಟಿ ಮುಗಿಸಿದನಂತರ ನಾನು ಕದಗಳನ್ನು ಹಚ್ಚಿಸಿದೆ; ದ್ವಾರಪಾಲಕರನ್ನೂ ಗಾಯಕರನ್ನೂ ಲೇವಿಯರನ್ನೂ ನೇಮಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಗೋಡೆಯನ್ನು ಕಟ್ಟಿ ತೀರಿಸಿದ ನಂತರ ನಾನು ಕದಗಳನ್ನು ಹಚ್ಚಿಸಿದೆನು; ದ್ವಾರಪಾಲಕರೂ ಗಾಯಕರೂ ಲೇವಿಯರೂ ನೇವಿುಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಗೋಡೆಯ ಕೆಲಸ ಪೂರ್ತಿಯಾದ ಬಳಿಕ ದ್ವಾರಗಳಿಗೆ ಬಾಗಿಲುಗಳನ್ನು ಇಡಲು ಪ್ರಾರಂಭಿಸಿದೆವು; ಬಾಗಿಲುಗಳಿಗೆ ಕಾವಲುಗಾರರನ್ನು ನೇಮಿಸಿದೆವು. ದೇವಾಲಯದಲ್ಲಿ ಬೇಕಾಗಿರುವ ಗಾಯಕರನ್ನು ಮತ್ತು ಯಾಜಕರಿಗೆ ಬೇಕಾದ ಸಹಾಯಕರನ್ನು ಆರಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:1
12 ತಿಳಿವುಗಳ ಹೋಲಿಕೆ  

ಹೀಗೆ ಗೋಡೆಯು ಐವತ್ತೆರಡು ದಿವಸಗಳಲ್ಲಿ ಏಲುಲ್ ತಿಂಗಳದ ಇಪ್ಪತ್ತೈದನೆಯ ದಿವಸದಲ್ಲಿ ಮುಗಿಯಿತು.


ನಾನು ಹೆಬ್ಬಾಗಿಲುಗಳಲ್ಲಿ ಬಾಗಿಲುಗಳನ್ನು ಇಡುವುದಕ್ಕಿಂತ ಮುಂಚೆ ನಾನು ಗೋಡೆಯಲ್ಲಿ ಒಂದು ಸಂದನ್ನೂ ಬಿಡದೆ ಪುನಃ ಕಟ್ಟಿದೆನೆಂದು ಸನ್ಬಲ್ಲಟನೂ, ಟೋಬೀಯನೂ, ಅರಬಿಯನಾದ ಗೆಷೆಮನೂ, ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗ,


ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜಕರ, ಲೇವಿಯರ ಸರತಿಗಳನ್ನು ನೇಮಿಸಿದನು. ದಹನಬಲಿಗಳನ್ನೂ ಮತ್ತು ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕೂ, ಸೇವಿಸುವುದಕ್ಕೂ ಯೆಹೋವ ದೇವರ ಪಾಳೆಯದ ಬಾಗಿಲುಗಳಲ್ಲಿ ಸ್ತೋತ್ರ ಮಾಡುವುದಕ್ಕೂ, ಕೊಂಡಾಡುವುದಕ್ಕೂ ಯಾಜಕರನ್ನೂ, ಲೇವಿಯರನ್ನೂ ನೇಮಿಸಿದನು.


ಲೇವಿಯರ ಮುಖ್ಯಸ್ಥರಾದ ಹಷಬ್ಯನೂ, ಶೇರೇಬ್ಯನೂ; ಕದ್ಮಿಯೇಲನ ಮಗನಾದ ಯೇಷೂವನೂ, ಅವರಿಗೆ ಎದುರಾದ ತಂಡವಾಗಿ ನಿಂತ ಅವರ ಸಹೋದರರೂ, ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಕೃತಜ್ಞತಾಸ್ತುತಿ ಮಾಡುವುದಕ್ಕೆ ವರ್ಗ ವರ್ಗಗಳಾಗಿದ್ದರು.


ಯೆರೂಸಲೇಮಿನಲ್ಲಿ ವಾಸವಾಗಿದ್ದ ಸಂಸ್ಥಾನಪ್ರಧಾನರು ಯಾರೆಂದರೆ: ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರೂ, ಸೊಲೊಮೋನನ ಸೇವಕರ ಮಕ್ಕಳೂ, ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು.


ಏಕೆಂದರೆ ಪರಿಶುದ್ಧ ಸ್ಥಾನದ ಸಲಕರಣೆಗಳೂ, ಸೇವೆ ಮಾಡುವ ಯಾಜಕರೂ, ದ್ವಾರಪಾಲಕರೂ, ಹಾಡುಗಾರರೂ ಇರುವ ಕೊಟ್ಟಡಿಗಳಿಗೆ ಇಸ್ರಾಯೇಲರೂ, ಲೇವಿಯರ ಮಕ್ಕಳೂ, ಕಾಣಿಕೆಯಾದ ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ತರಬೇಕು. “ನಾವು ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯಮಾಡುವುದಿಲ್ಲ,” ಎಂದು ಬರೆದುಕೊಟ್ಟರು.


ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೆಯ ವರ್ಷದ, ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ, ಉಳಿದ ಅವರ ಸಹೋದರರಾದ ಯಾಜಕರೂ, ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ, ಕೆಲಸವನ್ನು ಪ್ರಾರಂಭಿಸಿ ಇಪ್ಪತ್ತು ವರ್ಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಯೆಹೋವ ದೇವರ ಆಲಯದ ಕೆಲಸ ಮಾಡುವವರ ಮೇಲೆ ಮೇಲ್ವಿಚಾರಕರನ್ನಾಗಿ ನೇಮಿಸಿದರು.


ಹಾಗೆಯೇ ಅವರು ಬಂದು ಪಟ್ಟಣದ ಬಾಗಿಲು ಕಾಯುವವನನ್ನು ಕರೆದು ಅವನಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು, ಅಲ್ಲಿ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ,” ಎಂದರು.


ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ, ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀಯನೂ ನನ್ನನ್ನು ಭಯಪಡಿಸುವುದಕ್ಕೆ ಪತ್ರಗಳನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು