Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:70 - ಕನ್ನಡ ಸಮಕಾಲಿಕ ಅನುವಾದ

70 ಕುಟುಂಬಗಳ ಕೆಲವು ಮುಖ್ಯಸ್ಥರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ರಾಜ್ಯಪಾಲನು ಬೊಕ್ಕಸಕ್ಕೆ 8.4 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ, 50 ಪಾತ್ರೆಗಳನ್ನೂ, 530 ಯಾಜಕರ ಅಂಗಿಗಳನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

70 ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕಾರ್ಯಗಳಿಗಾಗಿ ಧನ ಸಹಾಯ ಮಾಡಿದರು. ತಿರ್ಷಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು ಸಾವಿರ ಬಂಗಾರದ ನಾಣ್ಯಗಳು, ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

70 ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕ್ಕೆಬೇಕಾದ ದ್ರವ್ಯಸಹಾಯ ನೀಡಿದರು. ತಿರ್ಷಾತಾ ಎನಿಸಿಕೊಳ್ಳುವ ರಾಜ್ಯಪಾಲ ಭಂಡಾರಕ್ಕೆ ಕೊಟ್ಟದ್ದು - ಎಂಟು ಕಿಲೋಗ್ರಾಂ ಬಂಗಾರ. ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

70 ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕ್ಕೋಸ್ಕರ ದ್ರವ್ಯಸಹಾಯಮಾಡಿದರು. ತಿರ್ಷಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು - ಸಾವಿರ ಬಂಗಾರದ ಪವನುಗಳು, ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

70 ಇವರ ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕ್ಕಾಗಿ ಹಣವನ್ನು ದಾನವಾಗಿ ಕೊಟ್ಟರು. ರಾಜ್ಯಪಾಲನು ಹತ್ತೊಂಭತ್ತು ಪೌಂಡು ಬಂಗಾರವನ್ನು. ಐವತ್ತು ಬೋಗುಣಿಗಳನ್ನು ಮತ್ತು ಐನೂರ ಮೂವತ್ತು ಯಾಜಕರ ವಸ್ತ್ರಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:70
15 ತಿಳಿವುಗಳ ಹೋಲಿಕೆ  

ರಾಜಪಾಲನಾದ ನೆಹೆಮೀಯನೂ, ನಿಯಮಶಾಸ್ತ್ರಿಯೂ, ಯಾಜಕನೂ ಆದ ಎಜ್ರನೂ, ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಜನರೆಲ್ಲರಿಗೆ: “ಈ ದಿನವು ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಪರಿಶುದ್ಧವಾದುದರಿಂದ ದುಃಖಿಸದೆ, ಅಳದೆ ಇರಿ,” ಎಂದರು. ಏಕೆಂದರೆ ಜನರೆಲ್ಲರು ದೇವರ ನಿಯಮದ ಮಾತುಗಳನ್ನು ಕೇಳಿದಾಗ ಅತ್ತರು.


ಕಾವಲುಗಾರರ ಅಧಿಪತಿಯು ಬೋಗುಣಿಗಳನ್ನೂ, ಅಗ್ನಿ ಪಾತ್ರೆಗಳನ್ನೂ, ಬಟ್ಟಲುಗಳನ್ನೂ ಬೋಗುಣಿಗಳನ್ನೂ, ದೀಪಸ್ತಂಭಗಳನ್ನೂ, ಸೌಟುಗಳನ್ನೂ, ಪಾನಾರ್ಪಣೆಯ ಪಾತ್ರೆ ಬಂಗಾರ ಬೆಳ್ಳಿಗಳಿಂದ ಮಾಡಿದ ಎಲ್ಲವನ್ನೂ ತೆಗೆದುಕೊಂಡನು.


ಮುದ್ರೆ ಹಾಕಿದವರು ಯಾರೆಂದರೆ: ಅಧಿಪತಿಯಾದ ಹಕಲ್ಯನ ಮಗ ನೆಹೆಮೀಯನು. ಚಿದ್ಕೀಯ,


ಆದ್ದರಿಂದ ಊರೀಮ್, ತುಮ್ಮೀಮ್ ಮುಖಾಂತರ ದೈವನಿರ್ಣಯವನ್ನು ತಿಳಿಸಬಲ್ಲ ಯಾಜಕನು ದೊರೆಯುವ ತನಕ, ಇವರು ಮಹಾಪರಿಶುದ್ಧವಾದ ಪದಾರ್ಥಗಳನ್ನು ತಿನ್ನಬಾರದೆಂದು ರಾಜ್ಯಪಾಲನು ಆದೇಶಿಸಿದನು.


ಇದಲ್ಲದೆ ಹೂರಾಮನು ಪಾತ್ರೆಗಳನ್ನೂ, ಸಲಿಕೆಗಳನ್ನೂ, ಬಟ್ಟಲುಗಳನ್ನೂ ಮಾಡಿದನು. ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನು ಒಪ್ಪಿಸಿದ ಎಲ್ಲಾ ಕೆಲಸಗಳನ್ನು ಹೂರಾಮನು ಮಾಡಿ ತೀರಿಸಿದನು:


ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ, ಮಂದಿರದಲ್ಲಿ ಬಲಗಡೆ ಐದನ್ನೂ, ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬಟ್ಟಲುಗಳನ್ನು ಮಾಡಿಸಿದನು.


ಅದೇ ಪ್ರಕಾರ ಮುಳ್ಳುಗಳೂ, ಪಾತ್ರೆಗಳೂ, ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿಗೋಸ್ಕರ, ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ; ಬೆಳ್ಳಿಯ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಕೊಟ್ಟನು.


ಪಾತ್ರೆಗಳು, ಸಲಿಕೆಗಳು, ಬೋಗುಣಿಗಳು. ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನಿಗೆ ಹೂರಾಮನು ಮಾಡಿದ ಈ ಸಲಕರಣೆಗಳೆಲ್ಲಾ ಹೊಳೆಯುವ ಕಂಚಿನವುಗಳಾಗಿದ್ದವು.


ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿದನು ಮತ್ತು ರಕ್ತದಲ್ಲಿ ಮಿಕ್ಕ ಅರ್ಧವನ್ನು ಬಲಿಪೀಠದ ಮೇಲೆ ಚಿಮುಕಿಸಿದನು.


ಹಿಸ್ಸೋಪ ಗಿಡದ ಕಟ್ಟನ್ನು ತೆಗೆದುಕೊಂಡು, ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ, ಬಾಗಿಲಿನ ಮೇಲೆ ಅಡ್ಡ ಪಟ್ಟಿಗೂ, ಅದರ ಪಕ್ಕದಲ್ಲಿರುವ ಎರಡು ನಿಲುವು ಕಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವವರೆಗೆ ಮನೆಯ ಬಾಗಿಲನ್ನು ಬಿಟ್ಟುಹೋಗಬಾರದು.


435 ಒಂಟೆಗಳು, 6,720 ಕತ್ತೆಗಳು ಇದ್ದವು.


ಇದಲ್ಲದೆ ಮುಖ್ಯವಾದ ಪಿತೃಗಳಲ್ಲಿ ಕೆಲವರು ಕೆಲಸದ ಬೊಕ್ಕಸಕ್ಕೆ 170 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ, 1.2 ಮೆಟ್ರಿಕ್ ಟನ್ ಬೆಳ್ಳಿಯನ್ನು ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು