Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:15 - ಕನ್ನಡ ಸಮಕಾಲಿಕ ಅನುವಾದ

15 ಅದರಲ್ಲಿ, “ಪರ್ಣಶಾಲೆಗಳಿಗಾಗಿ ಬೆಟ್ಟಕ್ಕೆ ಹೋಗಿ ಓಲಿವ್, ಕಾಡು ಓಲಿವ್, ಸುಗಂಧ, ಖರ್ಜೂರ ಮುಂತಾದ ದಟ್ಟವಾಗಿರುವ ಗಿಡದ ಕೊಂಬೆಗಳನ್ನೂ ತೆಗೆದುಕೊಂಡು ಬನ್ನಿರಿ ಎಂದೂ, ತಮ್ಮ ಸಕಲ ಪಟ್ಟಣಗಳಲ್ಲಿಯೂ, ಯೆರೂಸಲೇಮಿನಲ್ಲಿಯೂ ಬಹಿರಂಗವಾಗಿ ಸಾರಬೇಕು,” ಎಂದೂ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದು ಅವರ ಎಲ್ಲಾ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯೂ ಡಂಗುರದಿಂದ ಸಾರಲ್ಪಡಬೇಕು ಎಂಬುದಾಗಿ ಬರೆದಿರುವ ಶಾಸನವು ಮೋಶೆಗೆ ಯೆಹೋವನಿಂದ ದೊರಕಿದ ಧರ್ಮನಿಯಮಗಳಲ್ಲಿ ಸಿಕ್ಕಿತು. ಅದರಲ್ಲಿ, “ಆ ಬಿಡಾರಗಳಿಗಾಗಿ ಜನರು ಗುಡ್ಡಕ್ಕೆ ಹೋಗಿ ಒಲೀವ್ ಮರ, ಕಾಡು ಒಲೀವ್, ಸುಗಂಧ, ಖರ್ಜೂರ ಮುಂತಾದ ಮರಗಳು ಅಲ್ಲದೆ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ನಿಯಮದ ಪ್ರಕಾರ ಆ ಪರ್ಣಕುಟೀರ ನಿರ್ಮಾಣಕ್ಕಾಗಿ ಜನರು ಗುಡ್ಡಕ್ಕೆ ಹೋಗಿ, ಒಲೀವ, ಕಾಡು ಓಲೀವ್, ಸುಗಂಧ, ಖರ್ಜೂರ ಮುಂತಾದ ಮರಗಳ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರಬೇಕಾಗಿತ್ತು. ‘ಇದಕ್ಕಾಗಿ ಅವರ ಎಲ್ಲ ಪಟ್ಟಣಗಳಲ್ಲಿಯು ಹಾಗು ಜೆರುಸಲೇಮಿನಲ್ಲಿಯು ಡಂಗುರದಿಂದ ಪ್ರಕಟಿಸಬೇಕು’ ಎಂಬುದಾಗಿ ಬರೆದಿರುವ ಶಾಸನವೊಂದು ಮೋಶೆಗೆ ಸರ್ವೇಶ್ವರನಿಂದ ದೊರಕಿದ ಧರ್ಮಶಾಸ್ತ್ರದಲ್ಲಿ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈ ನಿಯಮದ ಪ್ರಕಾರ ಆ ಪರ್ಣಶಾಲೆಗಳಿಗಾಗಿ ಜನರು ಗುಡ್ಡಕ್ಕೆ ಹೋಗಿ ಒಲೀವ, ಕಾಡು ಒಲೀವ, ಸುಗಂಧ, ಖರ್ಜೂರ ಮುಂತಾದ ಮರಗಳ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರುವ ಹಾಗೆ ಅವರ ಎಲ್ಲಾ ಪಟ್ಟಣಗಳಲ್ಲಿಯೂ ಯೆರೂಸಲೇವಿುನಲ್ಲಿಯೂ ಡಂಗುರದಿಂದ ಪ್ರಕಟಿಸಬೇಕು ಎಂಬದಾಗಿ ಬರೆದಿರುವ ಶಾಸನವು ಮೋಶೆಗೆ ಯೆಹೋವನಿಂದ ದೊರಕಿದ ಧರ್ಮಶಾಸ್ತ್ರದಲ್ಲಿ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:15
9 ತಿಳಿವುಗಳ ಹೋಲಿಕೆ  

ಮೊದಲನೆಯ ದಿವಸದಲ್ಲಿ ನೀವು ಸುಂದರವಾದ ಮರಗಳ ರೆಂಬೆಗಳನ್ನೂ, ಖರ್ಜೂರ ಮರಗಳ ರೆಂಬೆಗಳನ್ನೂ, ದಟ್ಟವಾದ ಮರಗಳ ರೆಂಬೆಗಳನ್ನೂ, ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳವರೆಗೆ ನಿಮ್ಮ ದೇವರಾಗಿರುವ ಯೆಹೋವ ದೇವರ ಎದುರಿನಲ್ಲಿ ಸಂತೋಷ ಪಡಬೇಕು.


ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಮತ್ತು ಗುಡಾರಗಳ ಹಬ್ಬದಲ್ಲಿಯೂ ವರ್ಷಕ್ಕೆ ಮೂರು ಸಾರಿ ನಿಮ್ಮ ಎಲ್ಲಾ ಪುರುಷರು, ನಿಮ್ಮ ಯೆಹೋವ ದೇವರ ಮುಂದೆ ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಯೆಹೋವ ದೇವರ ಸಮ್ಮುಖಕ್ಕೆ ಬರೀ ಕೈಯಿಂದ ಬರಬಾರದು.


“ ‘ಇವು ಯೆಹೋವ ದೇವರ ಹಬ್ಬಗಳು: ನೀವು ನೇಮಕವಾದ ಕಾಲಗಳಲ್ಲಿ ನಿಮ್ಮ ಪವಿತ್ರ ಸಭಾ ಕೂಟಗಳಲ್ಲಿ ಈ ಹಬ್ಬಗಳನ್ನು ಪ್ರಕಟಿಸಬೇಕು.


ಇದಾದನಂತರ ಯಾರೂ ಎಣಿಸಲಾಗದಂಥ ಮಹಾ ಜನಸಮೂಹವನ್ನು ಕಂಡೆನು. ಅವರು ಪ್ರತಿ ರಾಷ್ಟ್ರ, ಕುಲ, ಜನ ಮತ್ತು ಭಾಷೆಯವರಾಗಿದ್ದು, ಯಜ್ಞದ ಕುರಿಮರಿ ಆಗಿರುವವರ ಮುಂದೆಯೂ ಸಿಂಹಾಸನದ ಮುಂದೆಯೂ ನಿಂತಿದ್ದರು. ಅವರು ಬಿಳಿ ನಿಲುವಂಗಿಗಳನ್ನು ಧರಿಸಿದ್ದವರಾಗಿ, ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ಖರ್ಜೂರದ ಗರಿಗಳನ್ನು ತೆಗೆದುಕೊಂಡು ಅವರನ್ನು ಎದುರುಗೊಳ್ಳಲು ಹೊರಗೆ ಬಂದು, “ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಇಸ್ರಾಯೇಲಿನ ಅರಸನಿಗೆ ಶುಭವಾಗಲಿ!” ಎಂದು ಕೂಗಿದರು.


ಅವರು ಯೆರೂಸಲೇಮಿಗೆ ಸಮೀಪಿಸಿ ಓಲಿವ್ ಗುಡ್ಡದ ಬೇತ್ಫಗೆ ಬಂದಾಗ, ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ,


ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ತಿರುಗಿ ಬರಲು, ಅದರ ಬಾಯಿಯಲ್ಲಿ ಓಲಿವ್ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದಿದೆಯೆಂದು ತಿಳಿದುಕೊಂಡನು.


ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬನು, ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಬಣ್ಣದ ಹಾಗು ಬಿಳಿಯ ಕುದುರೆಗಳು ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು