Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:17 - ಕನ್ನಡ ಸಮಕಾಲಿಕ ಅನುವಾದ

17 ಈ ಪ್ರಕಾರ ಸೆರೆಯಿಂದ ತಿರುಗಿ ಬಂದ ಸಭೆಯವರೆಲ್ಲರು ಪರ್ಣಶಾಲೆಗಳನ್ನು ಹಾಕಿ, ಅದರಲ್ಲಿ ವಾಸವಾಗಿದ್ದರು. ನೂನನ ಮಗ ಯೆಹೋಶುವನ ದಿನವು ಮೊದಲುಗೊಂಡು ಆ ದಿವಸದವರೆಗೂ ಇಸ್ರಾಯೇಲರು ಹಾಗೆ ಮಾಡಿರಲಿಲ್ಲ. ಅಲ್ಲಿ ಅವರಿಗೆ ಬಹಳ ಸಂತೋಷವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೂನನ ಮಗನಾದ ಯೆಹೋಶುವನ ಕಾಲದಿಂದ ಆ ವರೆಗೂ ಇಸ್ರಾಯೇಲರು ಹೀಗೆ ಮಾಡಿರಲಿಲ್ಲ. ಸೆರೆಯಿಂದ ಹಿಂತಿರುಗಿ ಬಂದ ಸರ್ವ ಸಮೂಹದವರಾದರೋ ಬಿಡಾರಗಳನ್ನು ಮಾಡಿಕೊಂಡು ಅವುಗಳಲ್ಲಿ ವಾಸಮಾಡುತ್ತಾ ಬಹಳ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನೂನನ ಮಗ ಯೆಹೋಶುವನ ಕಾಲದಿಂದ ಆವರೆಗೂ ಇಸ್ರಯೇಲರು ಹೀಗೆ ಮಾಡಿರಲಿಲ್ಲ. ಸೆರೆಯಿಂದ ಹಿಂತಿರುಗಿಬಂದ ಸರ್ವಸಮಾಜದವರು ಪರ್ಣಕುಟೀರಗಳನ್ನು ಮಾಡಿಕೊಂಡು, ಅವುಗಳಲ್ಲಿ ವಾಸಿಸುತ್ತಾ, ಬಹು ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೂನನ ಮಗನಾದ ಯೆಹೋಶುವನ ಕಾಲದಿಂದ ಆವರೆಗೂ ಇಸ್ರಾಯೇಲ್ಯರು ಹೀಗೆ ಮಾಡಿದ್ದಿಲ್ಲ. ಸೆರೆಯಿಂದ ತಿರಿಗಿ ಬಂದ ಸರ್ವಸಮೂಹದವರಾದರೋ ಪರ್ಣಶಾಲೆಗಳನ್ನು ಮಾಡಿಕೊಂಡು ಅವುಗಳಲ್ಲಿ ವಾಸಿಸುತ್ತಾ ಬಹು ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸೆರೆವಾಸದಿಂದ ಮರಳಿಬಂದ ಇಸ್ರೇಲರು ಬಿಡಾರಗಳನ್ನು ಹಾಕಿಕೊಂಡು ಅವುಗಳಲ್ಲಿ ವಾಸಿಸಿದರು. ನೂನನ ಮಗನಾದ ಯೆಹೋಶುವನ ಕಾಲದಿಂದ ಇಂದಿನವರೆಗೂ ಇಸ್ರೇಲರು ಇಂಥ ಪರ್ಣಶಾಲೆಗಳ ಹಬ್ಬವನ್ನು ಆಚರಿಸಲಿಲ್ಲ. ಪ್ರತಿಯೊಬ್ಬರೂ ಬಹು ಸಂತೋಷಗೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:17
13 ತಿಳಿವುಗಳ ಹೋಲಿಕೆ  

ದಿನಂಪ್ರತಿ ಮೋಶೆಯ ಆಜ್ಞೆಯ ಪ್ರಕಾರ ವಿಶ್ರಾಂತಿಯ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಯೂ ವರುಷಕ್ಕೆ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಗುಡಾರಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು.


ಇದಲ್ಲದೆ ದೇವರ ನಿಯಮದಲ್ಲಿ ಬರೆದಿರುವಂತೆ ಅವರು ಗುಡಾರಗಳ ಹಬ್ಬವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ಪ್ರತಿದಿನದ ದಹನಬಲಿಗಳನ್ನು ಅರ್ಪಿಸಿದರು.


ಈ ಎಲ್ಲಾ ಜನರು ಮರಣ ಹೊಂದುವಾಗಲೂ ವಿಶ್ವಾಸದಿಂದ ಜೀವಿಸುವವರಾಗಿದ್ದರು. ವಾಗ್ದಾನದ ಸಂಗತಿಗಳನ್ನು ಅವರು ಹೊಂದಲಿಲ್ಲ. ಅವುಗಳನ್ನು ಅವರು ದೂರದಿಂದಲೇ ನೋಡಿ ಸ್ವಾಗತಿಸಿದರು. ತಾವು ಭೂಮಿಯ ಮೇಲೆ ಪರದೇಶದವರೂ ಅಪರಿಚಿತರೂ ಆಗಿದ್ದೇವೆಂದು ಒಪ್ಪಿಕೊಂಡರು.


ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗಲೂ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರು ಸಹ ಗುಡಾರಗಳಲ್ಲಿ ವಾಸಿಸಿದರು.


ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ದೇವರು ಬೇರೊಂದು ದಿವಸವನ್ನು ಕುರಿತು ಹೇಳುತ್ತಿರಲಿಲ್ಲವಲ್ಲ.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


ಪ್ರವಾದಿಯಾದ ಸಮುಯೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿರಲಿಲ್ಲ. ಇಸ್ರಾಯೇಲಿನ ಸಮಸ್ತ ಅರಸರಲ್ಲಿ ಯೋಷೀಯನೂ, ಯಾಜಕರೂ, ಲೇವಿಯರೂ, ಸಿದ್ಧವಾಗಿದ್ದ ಯೆಹೂದ ಹಾಗೂ ಇಸ್ರಾಯೇಲರೆಲ್ಲರೂ, ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ.


ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು. ಇಸ್ರಾಯೇಲಿನ ಅರಸನಾದ ದಾವೀದನ ಮಗ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥಾ ಆಚರಣೆಯು ನಡೆದಿರಲಿಲ್ಲ.


ಆ ದಿವಸದಲ್ಲಿ ಮಹಾ ಸಂತೋಷದಿಂದ ಯೆಹೋವ ದೇವರ ಮುಂದೆ ತಿಂದು ಕುಡಿದರು. ಎರಡನೆಯ ಸಾರಿ ದಾವೀದನ ಮಗ ಸೊಲೊಮೋನನನ್ನು ಅರಸನನ್ನಾಗಿ ಸ್ವೀಕರಿಸಿದರು. ಯೆಹೋವ ದೇವರ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕನನ್ನು ಯಾಜಕನಾಗಿಯೂ ಅಭಿಷೇಕಿಸಿದರು.


ಯೆಹೋವ ದೇವರ ಸೇವಕನಾದ ಮೋಶೆಯ ಮರಣದ ತರುವಾಯ, ನೂನನ ಮಗ ಮತ್ತು ಮೋಶೆಯ ಸೇವಕ ಆಗಿರುವ ಯೆಹೋಶುವನಿಗೆ ಯೆಹೋವ ದೇವರು:


ನಿಮ್ಮ ದೇವರಾದ ಯೆಹೋವ ದೇವರಿಗೆ ಏಳು ದಿವಸ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು. ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಎಲ್ಲಾ ಆದಾಯದಲ್ಲಿಯೂ, ನಿಮ್ಮ ಎಲ್ಲಾ ಕೆಲಸದಲ್ಲಿಯೂ ಆಶೀರ್ವದಿಸುವುದರಿಂದ ನೀವು ಪರಿಪೂರ್ಣ ಸಂತೋಷದಿಂದ ಇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು