Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:2 - ಕನ್ನಡ ಸಮಕಾಲಿಕ ಅನುವಾದ

2 ಹೀಗೆಯೇ ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸ್ತ್ರೀಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ ಯಾಜಕನಾದ ಎಜ್ರನು ದೇವರ ನಿಯಮವನ್ನು ತೆಗೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾಜಕನಾದ ಎಜ್ರನು ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಮೊದಲ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯಾಜಕ ಎಜ್ರನು, ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ, ಏಳನೆಯ ತಿಂಗಳಿನ ಪ್ರಥಮ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದು ಬೆಳಗಿನಿಂದ ಮಧ್ಯಾಹ್ನದವರೆಗೂ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾಜಕನಾದ ಎಜ್ರನು ಗ್ರಹಿಸಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಪ್ರಥಮ ದಿನದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹೀಗೆ ಆ ವರ್ಷದ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಎಜ್ರನು ಧರ್ಮಶಾಸ್ತ್ರವನ್ನು ಆ ಜನರ ಮುಂದೆ ತಂದನು. ಆ ಜನಸಮೂಹದಲ್ಲಿ ಧರ್ಮಶಾಸ್ತ್ರಕ್ಕೆ ಕಿವಿಗೊಟ್ಟು ಗ್ರಹಿಸಿಕೊಳ್ಳಬಲ್ಲ ಸ್ತ್ರೀಪುರುಷರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:2
14 ತಿಳಿವುಗಳ ಹೋಲಿಕೆ  

“ಇಸ್ರಾಯೇಲರೊಂದಿಗೆ ಮಾತನಾಡಿ: ‘ಏಳನೆಯ ತಿಂಗಳಿನಲ್ಲಿ ಮೊದಲನೆಯ ದಿನದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥವಾದ ಸಬ್ಬತ್ ದಿನವಾಗಿರಬೇಕು. ಆ ದಿನ ಪರಿಶುದ್ಧ ಸಭೆಯ ಕೂಟವೂ ಇರಬೇಕು.


“ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡ ತಕ್ಕದ್ದು. ದೈವ ಬೋಧನೆಯನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು, ಏಕೆಂದರೆ ಅವನು ಸೇನಾಧೀಶ್ವರ ಯೆಹೋವ ದೇವರ ದೂತನು.


“ ‘ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ನೀವು ಮಾಡಬಾರದು. ಅದು ನಿಮಗೆ ತುತೂರಿಗಳನ್ನು ಊದುವ ದಿವಸವಾಗಿರುವುದು.


ಏಕೆಂದರೆ ಆರಂಭ ಕಾಲದಿಂದಲೂ ಪ್ರತಿಯೊಂದು ಪಟ್ಟಣದಲ್ಲಿ ಮೋಶೆಯ ಗ್ರಂಥವನ್ನು ಬೋಧಿಸಲಾಗುತ್ತದೆ ಹಾಗೂ ಪ್ರತಿ ಸಬ್ಬತ್ ದಿನ ಸಭಾಮಂದಿರಗಳಲ್ಲಿ ಓದಲಾಗುತ್ತದೆ,” ಎಂದು ಹೇಳಿದನು.


ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಮತ್ತು ಯಾರಿಗೆ ಬೋಧನೆಯನ್ನು ತಿಳಿದುಕೊಳ್ಳುವ ಹಾಗೆ ಮಾಡುತ್ತಾನೆ? ಆಗತಾನೇ ಹಾಲು ಬಿಟ್ಟ ಕೂಸುಗಳಿಗೋ, ಎಳೆಯ ಮಕ್ಕಳಿಗೋ?


ಅರಸನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆ ಮಾಡುವ ಲೇವಿಯರ ವಶದಲ್ಲಿ ಇರುವ ಈ ದೇವರ ನಿಯಮ ಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕ ರೂಪವಾಗಿ ಬರೆಯಿಸಿಕೊಳ್ಳಬೇಕು.


ರಾಜಪಾಲನಾದ ನೆಹೆಮೀಯನೂ, ನಿಯಮಶಾಸ್ತ್ರಿಯೂ, ಯಾಜಕನೂ ಆದ ಎಜ್ರನೂ, ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಜನರೆಲ್ಲರಿಗೆ: “ಈ ದಿನವು ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಪರಿಶುದ್ಧವಾದುದರಿಂದ ದುಃಖಿಸದೆ, ಅಳದೆ ಇರಿ,” ಎಂದರು. ಏಕೆಂದರೆ ಜನರೆಲ್ಲರು ದೇವರ ನಿಯಮದ ಮಾತುಗಳನ್ನು ಕೇಳಿದಾಗ ಅತ್ತರು.


ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ ಇಸ್ರಾಯೇಲರು ಉಪವಾಸ ಮಾಡಿ, ಗೋಣಿತಟ್ಟನ್ನು ಉಟ್ಟುಕೊಂಡು, ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು.


ಮೋಶೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಮಹಿಳೆಯರಿಗೂ, ಮಕ್ಕಳಿಗೂ, ಅನ್ಯದೇಶೀಯರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಓದಿದನು.


ಎಜ್ರನು ಮೊದಲನೆಯ ದಿವಸದಿಂದ ಕಡೇ ದಿವಸದವರೆಗೂ ದಿನದಿನವೂ ದೇವರ ನಿಯಮದ ಗ್ರಂಥವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೆಯ ದಿವಸದಲ್ಲಿ ಪದ್ಧತಿಯ ಪ್ರಕಾರ ಸಭೆಯು ಸೇರಿತ್ತು.


ತಮ್ಮ ಸಹೋದರರಾದ ತಮ್ಮ ಶ್ರೇಷ್ಠರ ಸಂಗಡ ಕೂಡಿಕೊಂಡು ದೇವರ ಸೇವಕ ಮೋಶೆಯ ಕೈಯಿಂದ ಕೊಟ್ಟ ದೇವರ ನಿಯಮದಂತೆ ನಡೆಯುತ್ತೇವೆಂದೂ, ನಮ್ಮ ಕರ್ತ ಆಗಿರುವ ಯೆಹೋವ ದೇವರ ಆಜ್ಞೆಗಳನ್ನೂ, ಅವರ ನ್ಯಾಯಗಳನ್ನೂ, ಅವರ ಕಟ್ಟಳೆಗಳನ್ನೂ, ಎಲ್ಲವನ್ನೂ ಕೈಗೊಂಡು ಮಾಡುತ್ತೇವೆಂದೂ ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು;


ಅದೇ ದಿವಸದಲ್ಲಿ ಜನರು ಕೇಳುವಂತೆ ಮೋಶೆಯ ನಿಯಮ ಗ್ರಂಥವನ್ನು ಗಟ್ಟಿಯಾಗಿ ಓದುವಾಗ, “ಅಮ್ಮೋನಿಯರೂ, ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದು,” ಎಂದು ಅದರಲ್ಲಿ ಬರೆದದ್ದು ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು