Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:14 - ಕನ್ನಡ ಸಮಕಾಲಿಕ ಅನುವಾದ

14 ನೀವು ಪರಿಶುದ್ಧ ಸಬ್ಬತ್ ದಿನವನ್ನು ಅವರಿಗೆ ತಿಳಿಸಿ, ನಿಮ್ಮ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ, ಕಟ್ಟಳೆಗಳನ್ನೂ, ನಿಯಮಗಳನ್ನೂ ಕೊಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿನ್ನ ಸೇವಕನಾದ ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ, ಆಜ್ಞಾವಿಧಿನಿಯಮಗಳನ್ನೂ ಅವರಿಗೆ ಕಲಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕಲಿಸಿದಿರಿ ಅವರಿಗೆ ಆಜ್ಞಾವಿಧಿ ಧರ್ಮಗಳನು ಪ್ರಕಟಿಸಿದಿರಿ ನಿಮಗೆ ಮೀಸಲಾದ ವಿಶ್ರಾಂತಿ ದಿನವನು; ನಿಮ್ಮ ದಾಸ ಮೋಶೆಯ ಮುಖಾಂತರ ಸಾಧಿಸಿದಿರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿನ್ನ ಸೇವಕನಾದ ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ ಆಜ್ಞಾವಿಧಿಧರ್ಮಗಳನ್ನು ಕಲಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವರಿಗೆ ನಿನ್ನ ವಿಶೇಷ ದಿನವಾದ ಸಬ್ಬತ್ತನ್ನು ತಿಳಿಸಿದೆ. ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಕಟ್ಟಳೆಗಳನ್ನು ತಿಳಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:14
17 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಯೆಹೋವ ದೇವರು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ, ಅವರಿಗೂ ಗುರುತಾಗಿರುವುದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.


ಅನಂತರ ದೇವರು ಏಳನೆಯ ದಿನವನ್ನು ಆಶೀರ್ವದಿಸಿ, ಅದನ್ನು ಪವಿತ್ರ ದಿನವನ್ನಾಗಿ ಮಾಡಿದರು. ಏಕೆಂದರೆ ಆ ದಿನದಲ್ಲಿ ದೇವರು ಸೃಷ್ಟಿಸಿದ ತಮ್ಮ ಎಲ್ಲಾ ಕೆಲಸಗಳಿಂದ ವಿಶ್ರಮಿಸಿಕೊಂಡರು.


ನನ್ನ ಸಬ್ಬತ್ ದಿನಗಳನ್ನು ಪರಿಶುದ್ಧ ಮಾಡಿರಿ, ನಾನೇ ನಿಮ್ಮ ದೇವರಾದ ಯೆಹೋವ ದೇವರು ಎಂದು ಅವು ನಿಮಗೂ ನನಗೂ, ನೀವು ತಿಳಿಯುವ ಹಾಗೆ ಗುರುತುಗಳಾಗಿರುವುವು.”


ನೋಡಿರಿ, ಯೆಹೋವ ದೇವರಾದ ನಾನು ನಿಮಗೆ ಸಬ್ಬತ್ ದಿನವನ್ನು ಕೊಟ್ಟಿದ್ದರಿಂದಲೇ, ಆರನೆಯ ದಿನದಲ್ಲಿ ನಿಮಗೆ ಎರಡು ದಿನಗಳಿಗೆ ಸಾಕಾಗುವಷ್ಟು ಆಹಾರ ಕೊಟ್ಟಿದ್ದೇನೆ. ಪ್ರತಿಯೊಬ್ಬನೂ ತನ್ನ ತನ್ನ ಸ್ಥಳದಲ್ಲಿ ಇರಲಿ. ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟುಹೋಗಬಾರದು,” ಎಂದರು.


ಅದಕ್ಕೆ ಮೋಶೆ, “ಯೆಹೋವ ದೇವರು ಆಜ್ಞಾಪಿಸಿದ ಮಾತು ಇದೇ: ‘ನಾಳೆ ಯೆಹೋವ ದೇವರಿಗೆ ಪರಿಶುದ್ಧ ಸಬ್ಬತ್ ದಿನವಾಗಿದೆ. ಇಂದೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನವರೆಗೆ ಇಟ್ಟುಕೊಳ್ಳಿರಿ,’ ” ಎಂದನು.


ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.


“ದಯಮಾಡಿ ನಿಮ್ಮ ಸೇವಕನಾದ ಮೋಶೆಗೆ ಹೇಳಿದ ಈ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ. ಮೋಶೆಯ ಮುಖಾಂತರ, ‘ನೀವು ದ್ರೋಹ ಮಾಡಿದರೆ, ನಾನು ನಿಮ್ಮನ್ನು ಜನಾಂಗಗಳ ನಡುವೆ ಚದರಿಸಿಬಿಡುವೆನು.


ನೀನಾದರೋ ಇಲ್ಲಿ ನನ್ನ ಸಂಗಡ ನಿಂತುಕೋ. ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸೊತ್ತಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞಾನಿಯಮ ಮತ್ತು ನ್ಯಾಯಗಳನ್ನು ನಿಮಗೆ ಹೇಳುವೆನು.”


ಇಸ್ರಾಯೇಲರು ಈಜಿಪ್ಟಿನೊಳಗಿಂದ ಹೊರಟ ಮೇಲೆ ಮೋಶೆಯು ಇಸ್ರಾಯೇಲರಿಗೆ ನುಡಿದ ಸಾಕ್ಷಿಗಳೂ, ನಿಯಮಗಳೂ, ನ್ಯಾಯಗಳೂ ಇವೇ.


ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಯೆಹೋವ ದೇವರು ನನಗೆ ಆಜ್ಞಾಪಿಸಿದ ಆಜ್ಞಾವಿಧಿಗಳನ್ನೂ ನಿಮಗೆ ಬೋಧಿಸಿದ್ದೇನೆ.


ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲರಿಗಾಗಿ ಕೊಟ್ಟ ಆಜ್ಞೆಗಳು ಇವೇ.


ಯೆಹೋವ ದೇವರು ಮೋಶೆಗೆ, “ಬೆಟ್ಟವನ್ನೇರಿ, ನನ್ನ ಬಳಿಗೆ ಬಂದು ಇಲ್ಲೇ ಇರು. ನಿಯಮವನ್ನು ಹಾಗು ಆಜ್ಞೆಗಳನ್ನು ನೀನು ಜನರಿಗೆ ಬೋಧನೆಮಾಡುವಂತೆ ಬರೆದಿರುವ ಕಲ್ಲಿನ ಹಲಗೆಗಳನ್ನು ನಾನು ನಿನಗೆ ಕೊಡುತ್ತೇನೆ,” ಎಂದು ಹೇಳಿದರು.


“ ‘ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತಾಯಿಗೂ ತನ್ನ ತಂದೆಗೂ ಭಯಪಟ್ಟು, ನನ್ನ ವಿಶ್ರಾಂತಿಯ ದಿನಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ವರ್ಷಕ್ಕೆ 4 ಗ್ರಾಂ ಬೆಳ್ಳಿಯನ್ನು ನಮ್ಮ ದೇವರ ಆಲಯದ ಸೇವೆಗಾಗಿ ಕೊಡಬೇಕೆಂಬ ನಿಯಮವನ್ನು ಪಾಲಿಸಿಕೊಳ್ಳುತ್ತೇವೆ.


ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು, ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು