Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:15 - ಕನ್ನಡ ಸಮಕಾಲಿಕ ಅನುವಾದ

15 ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿದಿರಿ. ನಿಮ್ಮ ಉನ್ನತ ಹಸ್ತದಿಂದ ವಾಗ್ದಾನ ಮಾಡಿದ ದೇಶದಲ್ಲಿ ನೀವು ಅವರನ್ನು ಸೇರಿಸಿ, ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಹೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರಿಗೆ ಹಸಿವಾದಾಗ ಪರಲೋಕದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ, ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹಸಿದಿದ್ದಾಗ ಅವರಿಗಿತ್ತಿರಿ ಉಣವನು ಆಗಸದಿಂದ ಬಾಯಾರಿದ್ದಾಗ ನೀರ ಬರಮಾಡಿದಿರಿ ಬಂಡೆಯೊಳಗಿಂದ ವಾಗ್ದತ್ತ ನಾಡ ಸೇರಿ ಸ್ವಾಧೀನಪಡಿಸಿಕೊಂಡರು ನಿಮ್ಮಾಜ್ಞೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವರು ಹಸಿದಿದ್ದಾಗ ಪರಲೋಕದಿಂದ ಊಟವನ್ನು ಅವರಿಗೆ ದಯಪಾಲಿಸಿದೆ. ಅವರು ಬಾಯಾರಿದಾಗ ಬಂಡೆಯಿಂದ ಅವರಿಗೆ ನೀರನ್ನು ಕೊಟ್ಟೆ. ನೀನು ಅವರಿಗೆ, ‘ಬನ್ನಿ, ಈ ದೇಶವನ್ನು ತೆಗೆದುಕೊಳ್ಳಿರಿ’ ಎಂದು ಹೇಳಿದೆ. ನಿನ್ನ ಪರಾಕ್ರಮವನ್ನು ತೋರಿಸಿದೆ. ಅವರಿಗಾಗಿ ಭೂಮಿಯನ್ನು ತೆಗೆದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:15
23 ತಿಳಿವುಗಳ ಹೋಲಿಕೆ  

ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ಹೋಗಿ ಯೆಹೋವ ದೇವರಾದ ನಾನು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ,” ಎಂದು ಹೇಳಿದರು.


ಅಲ್ಲಿ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು, ನೀನು ಬಂಡೆಯನ್ನು ಹೊಡೆಯಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವುದು,” ಎಂದರು. ಮೋಶೆಯು ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.


ಆಗ ಯೆಹೋವ ದೇವರು ಮೋಶೆಗೆ, “ನಾನು ರೊಟ್ಟಿಯನ್ನು ನಿಮಗಾಗಿ ಆಕಾಶದಿಂದ ಸುರಿಸುತ್ತೇನೆ. ಜನರು ಹೊರಗೆ ಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದದ್ದನ್ನು ಕೂಡಿಸಲಿ. ಇದರಿಂದ ಅವರು ನನ್ನ ಆಜ್ಞೆಗಳನ್ನು ಕೈಗೊಳ್ಳುವರೋ, ಇಲ್ಲವೋ ಎಂಬುದನ್ನು ಪರೀಕ್ಷಿಸುತ್ತೇನೆ.


ಆದರೂ ಹಾಲೂ ಜೇನೂ ಹರಿಯುವಂಥ ದೇಶಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಮರುಭೂಮಿಯಲ್ಲಿ ಅವರಿಗೆ ನನ್ನ ಕೈಯೆತ್ತಿ ಪ್ರಮಾಣಮಾಡಿದೆನು.


ದೇವರು ಬಂಡೆಯನ್ನು ನೀರಿನ ಕೆರೆಯಾಗಿಯೂ, ಕಗ್ಗಲ್ಲನ್ನು ನೀರಿನ ಬುಗ್ಗೆಯಾಗಿ ಮಾರ್ಪಡಿಸುತ್ತಾರೆ.


ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ ಯೆಹೋವ ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾನೆಂದು ನಿಮಗೆ ಬೋಧಿಸುವಂತೆ ದೇವರು ನಿಮ್ಮನ್ನು ಹಸಿವೆಯಿಂದ ಬಳಲುವಂತೆ ಮಾಡಿದರು. ನೀವು ತಿಳಿಯದಂಥ ಮತ್ತು ನಿಮ್ಮ ಪಿತೃಗಳು ತಿಳಿಯದಂಥ ಮನ್ನವನ್ನು ನಿಮಗೆ ಉಣ್ಣಲು ಕೊಟ್ಟರು.


ಇದಲ್ಲದೆ ನೀವು ಅವರಿಗೆ ಬೋಧಿಸುವ ನಿಮ್ಮ ಒಳ್ಳೆಯ ಆತ್ಮವನ್ನು ಕೊಟ್ಟಿರಿ. ಅವರ ಬಾಯಿಂದ ನಿಮ್ಮ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದ ಅವರಿಗೆ ನೀರನ್ನು ಕೊಟ್ಟಿರಿ.


ನಿಮ್ಮ ದೇವರಾದ ಯೆಹೋವ ದೇವರು ದೇಶವನ್ನು ನಿಮಗೆ ಕೊಟ್ಟಿದ್ದಾರೆ, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಹೇಳಿದ ಪ್ರಕಾರ ಅದನ್ನು ಏರಿ ಸ್ವಾಧೀನಮಾಡಿಕೊಳ್ಳಿರಿ. ಭಯಪಡಬೇಡಿರಿ, ಧೈರ್ಯವಾಗಿರಿ,” ಎಂದೆನು.


ಯೆಫುನ್ನೆಯ ಮಗ ಕಾಲೇಬನೂ, ನೂನನ ಮಗ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡುವುದಕ್ಕೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವೆಲ್ಲರೂ ಬಾರದೆ ಇರುವಿರಿ.


ಅದಕ್ಕೆ ಅಬ್ರಾಮನು ಸೊದೋಮಿನ ಅರಸನಿಗೆ, “ಭೂಮಿ ಆಕಾಶವನ್ನು ಸ್ವಾಧೀನ ಪಡಿಸಿಕೊಂಡಿರುವ ಮಹೋನ್ನತ ದೇವರಾಗಿರುವ ಯೆಹೋವ ದೇವರ ಕಡೆಗೆ ನನ್ನ ಕೈ ಎತ್ತಿ ಪ್ರಮಾಣ ಮಾಡುತ್ತೇನೆ.


ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕೊಡುವೆನೆಂದು ಕೈಯನ್ನೆತ್ತಿ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸೊತ್ತಾಗಿ ಕೊಡುವೆನೆಂದು ಹೇಳಿದ ಯೆಹೋವ ದೇವರು ನಾನೇ,’ ಎಂದು ಹೇಳು,” ಎಂದರು.


ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗೊಣಗುಟ್ಟಿ, “ನಮ್ನನ್ನೂ, ನಮ್ಮ ಮಕ್ಕಳನ್ನೂ, ನಮ್ಮ ಪಶುಗಳನ್ನೂ ದಾಹದಿಂದ ಕೊಲ್ಲುವುದಕ್ಕಾಗಿ ಏಕೆ ಈಜಿಪ್ಟಿನೊಳಗಿಂದ ಇಲ್ಲಿಗೆ ಬರಮಾಡಿದೆ,” ಎಂದರು.


ದೇವರು ಅವರನ್ನು ಮರುಭೂಮಿಯಲ್ಲಿ ನಡಿಸಿದಾಗ, ಅವರಿಗೆ ದಾಹವಾಗಲಿಲ್ಲ. ದೇವರು ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದರು. ದೇವರು ಬಂಡೆಯನ್ನು ಸೀಳಲು, ನೀರು ರಭಸದಿಂದ ಹೊರಗೆ ಬಂತು.


ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು. ಆದರೆ ಅವರು ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ನಿಯಮದಲ್ಲಿ ನಡೆದುಕೊಳ್ಳಲಿಲ್ಲ. ಮಾಡಬೇಕೆಂದು ನೀವು ಅವರಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಲಿಲ್ಲ. ಆದ್ದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು