Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:19 - ಕನ್ನಡ ಸಮಕಾಲಿಕ ಅನುವಾದ

19 “ಆದರೆ ನೀವು ನಿಮ್ಮ ಬಹು ಕರುಣೆಯಿಂದ ಮರುಭೂಮಿಯಲ್ಲಿ ಅವರನ್ನು ಕೈಬಿಡಲಿಲ್ಲ. ಹಗಲಿನಲ್ಲಿ ಅವರಿಗೆ ಮೇಘಸ್ತಂಭವು ದಾರಿ ತೋರಿಸದೆ ಇರಲಿಲ್ಲ. ರಾತ್ರಿಯಲ್ಲಿ ಅವರಿಗೆ ಬೆಳಕನ್ನೂ, ಅವರು ನಡೆಯತಕ್ಕ ಮಾರ್ಗವನ್ನೂ ತೋರಿಸುವ ಅಗ್ನಿ ಸ್ತಂಭವು ಅವರನ್ನು ಬಿಟ್ಟುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕರುಣಾನಿಧಿಯಾದ ನೀನು ಅವರನ್ನು ಅರಣ್ಯದಲ್ಲಿ ಕೈಬಿಡಲಿಲ್ಲ, ಹಗಲಿನಲ್ಲಿ ಅವರಿಗೆ ದಾರಿ ತೋರಿಸುತ್ತಿದ್ದ ಮೇಘಸ್ತಂಭವೂ, ರಾತ್ರಿವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕುಕೊಡುತ್ತಿದ್ದ ಅಗ್ನಿಸ್ತಂಭವೂ, ಅವರನ್ನು ಬಿಟ್ಟುಹೋಗದಂತೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೀಗಿದ್ದರು ನೀವಾದಿರಿ ಅವರಿಗೆ ಕರುಣಾನಿಧಿ ತೊರೆದುಬಿಡಲಿಲ್ಲ ನೀವವರನು ಮರುಭೂಮಿಯಲಿ. ಬಿಟ್ಟುಹೋಗಲಿಲ್ಲ ದಾರಿತೋರಿದಾ ಮೇಘಸ್ತಂಭ ಹಗಲಲಿ ಮುನ್ನಡೆಯಿತು ಬೆಳಕನೀಯುತಾ ಅಗ್ನಿಸ್ತಂಭ ಇರುಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕರುಣಾನಿಧಿಯಾದ ನೀನು ಅವರನ್ನು ಅರಣ್ಯದಲ್ಲಿ ಕೈಬಿಡಲಿಲ್ಲ, ಹಗಲಿನಲ್ಲಿ ಅವರಿಗೆ ದಾರಿ ತೋರಿಸುತ್ತಿದ್ದ ಮೇಘ ಸ್ತಂಭವೂ ರಾತ್ರಿವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕು ಕೊಡುತ್ತಿದ್ದ ಅಗ್ನಿಸ್ತಂಭವೂ ಅವರನ್ನು ಬಿಟ್ಟುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀನು ತುಂಬಾ ಕನಿಕರವುಳ್ಳ ದೇವರು. ಆದ್ದರಿಂದ ಅವರನ್ನು ಮರುಭೂಮಿಯಲ್ಲಿಯೇ ಬಿಡಲಿಲ್ಲ. ಹಗಲಿನಲ್ಲಿ ಅವರಿಂದ ಎತ್ತರವಾದ ಮೋಡವನ್ನು ತೆಗೆದುಬಿಡಲಿಲ್ಲ. ನೀನು ಅವರನ್ನು ಮುನ್ನಡೆಸಿಕೊಂಡೇ ಹೋದೆ. ರಾತ್ರಿಯಲ್ಲಿ ಅವರಿಂದ ಅಗ್ನಿಸ್ತಂಭವನ್ನು ತೆಗೆದುಬಿಡಲಿಲ್ಲ. ಅವರ ದಾರಿಗೆ ಬೆಳಕನ್ನು ನೀಡುತ್ತಾ ಅವರು ಹೋಗತಕ್ಕ ದಾರಿಯಲ್ಲಿ ಮುನ್ನಡೆಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:19
23 ತಿಳಿವುಗಳ ಹೋಲಿಕೆ  

ಅವರಿಗಾಗಿ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಅತಿಶಯವಾದ ಪ್ರೀತಿಯ ಪ್ರಕಾರ,


ಆದ್ದರಿಂದ ನೀವು ಬಾಧಿಸುವ ವಿರೋಧಿಗಳ ಕೈಗೆ ಅವರನ್ನು ಒಪ್ಪಿಸಿದಿರಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿಮಗೆ ಮೊರೆಯಿಟ್ಟಾಗ, ನೀವು ಪರಲೋಕದಿಂದ ಕೇಳಿ, ನಿಮ್ಮ ಮಹಾ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವುದಕ್ಕೆ ರಕ್ಷಕರನ್ನು ಅವರಿಗೆ ಕಳುಹಿಸಿದಿರಿ.


“ನಾನು ಯೆಹೋವ ದೇವರು. ನಾನು ಬದಲಾಗುವುದಿಲ್ಲ. ಆದ್ದರಿಂದ ನೀವು ಯಾಕೋಬಿನ ವಂಶಜರೇ, ನಾಶವಾಗುವುದಿಲ್ಲ.


ಇದಲ್ಲದೆ ಹಗಲಿನಲ್ಲಿ ಮೇಘಸ್ತಂಭದಿಂದಲೂ, ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭದಿಂದಲೂ ಅವರನ್ನು ನಡೆಸಿದಿರಿ.


ನನ್ನ ದೇವರೇ, ನೀವು ಕಿವಿಗೊಟ್ಟು ಕೇಳಿರಿ. ನಿಮ್ಮ ಕಣ್ಣುಗಳನ್ನು ತೆರೆದು ನಮ್ಮ ನಾಶವನ್ನೂ, ನಿಮ್ಮ ಹೆಸರಿನಿಂದ ಕರೆಯಲಾಗುವ ಈ ಹಾಳಾಗಿರುವ ಪಟ್ಟಣವನ್ನೂ ನೋಡಿರಿ. ಏಕೆಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿಮ್ಮ ಮಹಾ ಕರುಣೆಗಾಗಿಯೇ ನಮ್ಮ ವಿಜ್ಞಾಪನೆಗಳನ್ನು ನಿಮ್ಮ ಮುಂದೆ ಅರ್ಪಿಸುತ್ತೇವೆ.


ನಾವು ಆತನಿಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದರೂ, ನಮ್ಮ ಕರ್ತದೇವರು ಕರುಣೆಯುಳ್ಳವರೂ ಕ್ಷಮಿಸುವವರೂ ಆಗಿದ್ದಾರೆ.


ಅವರು ಈ ದೇಶದ ನಿವಾಸಿಗಳಿಗೆ ಅದನ್ನು ಹೇಳುವರು. ನೀವು ಈ ಜನರ ಸಂಗಡ ಇದ್ದೀಯೆಂದೂ, ಯೆಹೋವ ದೇವರಾದ ನೀವೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀರಿ ಎಂದೂ ನೀವು ಹಗಲು ಹೊತ್ತಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀರಿ ಎಂದೂ ನೀವಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಎಂದೂ ಅವರು ಈಗಾಗಲೇ ಕೇಳಿದ್ದಾರೆ.


ಆದರೂ ನಾನು ನನ್ನ ಕೈಯನ್ನು ಹಿಂತೆಗೆದು, ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಹೊರಗೆ ಬರಮಾಡಿದೆನೋ, ಆ ಜನಾಂಗಗಳ ದೃಷ್ಟಿಯಲ್ಲಿ ನನ್ನ ಹೆಸರು ಅಪವಿತ್ರವಾಗದ ಹಾಗೆ, ನನ್ನ ಹೆಸರಿಗೋಸ್ಕರವೇ ಕೆಲಸ ಮಾಡಿದೆನು.


ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ, ಆ ಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.


ನಾವು ನಾಶವಾಗದೇ ಉಳಿದಿರುವುದು ಯೆಹೋವ ದೇವರ ಮಹಾ ಪ್ರೀತಿಯಿಂದಲೇ. ಏಕೆಂದರೆ ಅವರ ಅನುಕಂಪಗಳು ಮುಗಿಯುವುದಿಲ್ಲ.


“ಯಾಕೋಬೇ, ಇಸ್ರಾಯೇಲೇ! ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನೀನು ನನ್ನ ಸೇವಕನಾಗಿದ್ದೀ. ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು. ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.


ಆದರೂ ನೀವು ನಿಮ್ಮ ಮಹಾ ಕರುಣೆಯಲ್ಲಿ ಅವರನ್ನು ನಾಶಮಾಡಲಿಲ್ಲ. ಅವರನ್ನು ಕೈಬಿಡಲೂ ಇಲ್ಲ. ಏಕೆಂದರೆ ನೀವು ಕೃಪೆಯೂ, ಕರುಣೆಯೂ ಉಳ್ಳ ದೇವರಾಗಿದ್ದೀರಿ.


ಏಕೆಂದರೆ ಇಸ್ರಾಯೇಲರ ಎಲ್ಲಾ ಪ್ರಯಾಣಗಳಲ್ಲಿ ಅವರ ಕಣ್ಣುಗಳ ಮುಂದೆ ಹಗಲಿನಲ್ಲಿ ಯೆಹೋವ ದೇವರ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು.


ಏಕೆಂದರೆ ಯೆಹೋವ ದೇವರು ತಮ್ಮ ಮಹತ್ತಾದ ಹೆಸರಿಗೋಸ್ಕರ ತಮ್ಮ ಜನರನ್ನು ಕೈಬಿಡುವುದಿಲ್ಲ. ನಿಮ್ಮನ್ನು ತಮ್ಮ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾರಲ್ಲಾ?


ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ, ಇಸ್ರಾಯೇಲರು ತಮ್ಮ ಪ್ರಯಾಣಕ್ಕಾಗಿ ಮುಂದೆ ಹೊರಡುತ್ತಿದ್ದರು.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ತಗ್ಗಿಸಿ, ನೀವು ದೇವರ ಆಜ್ಞೆಗಳನ್ನು ಕಾಪಾಡುವಿರೋ ಇಲ್ಲವೋ ಎಂದು ನಿಮ್ಮ ಹೃದಯವನ್ನು ಪರೀಕ್ಷಿಸುವುದಕ್ಕೆ ನಿಮ್ಮನ್ನು ನಡೆಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಿರಿ.


ತಮ್ಮ ಜನರನ್ನು ಮರುಭೂಮಿಯಲ್ಲಿ ನಡೆಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು. ನಾನು ಅವರನ್ನು ಮರುಭೂಮಿಯಲ್ಲಿ ಅಂತ್ಯಗೊಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು