Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:28 - ಕನ್ನಡ ಸಮಕಾಲಿಕ ಅನುವಾದ

28 “ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದಕಾರಣ ಅವರ ಶತ್ರುಗಳು ಅವರನ್ನು ಮತ್ತೆ ಆಳುವಂತೆ ಶತ್ರು ಕೈಗೆ ಅವರನ್ನು ಒಪ್ಪಿಸಿದಿರಿ. ಆದರೆ ಅವರು ತಿರುಗಿ ನಿಮ್ಮನ್ನು ಕೂಗಿಕೊಳ್ಳಲು, ನೀವು ಪರಲೋಕದಿಂದ ಕೇಳಿ, ನಿಮ್ಮ ಅನುಕಂಪಕ್ಕೆ ಅನುಸಾರವಾಗಿ ಅವರನ್ನು ಅನೇಕ ಸಾರಿ ವಿಮೋಚಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಉಪಶಮನವನ್ನು ಪಡೆದ ಮೇಲೆ ಅವರು ತಿರುಗಿ ದ್ರೋಹಿಗಳಾಗಿ ನಡೆಯುತ್ತಿರುವುದನ್ನು ನೀನು ಕಂಡು ಅವರ ಮೇಲೆ ದೊರೆತನ ನಡೆಸತಕ್ಕ ವೈರಿಗಳ ಕೈಗೆ ಅವರನ್ನು ಒಪ್ಪಿಸಿದೆ. ಆಗ ಅವರು ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು ಪುನಃ ಪರಲೋಕದಿಂದ ನೀನು ಕೇಳಿ ನಿನ್ನ ಕರುಣಾತಿಶಯದಿಂದ ಅವರನ್ನು ಅನೇಕಾವರ್ತಿ ರಕ್ಷಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಶಾಂತಿ ಸವಿದದ್ದೇ ದ್ರೋಹಿಗಳಾಗಿ ನಡೆದರು ಮತ್ತೆ ನೀವಿತ್ತಿರವರನು ದೊರೆತನ ನಡೆಸುವ ವೈರಿಗಳ ಕೈಗೆ. ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು, ಆಲಿಸಿದಿರಿ ಪರದಿಂದ ರಕ್ಷಿಸಿದಿರಿ ಪದೇ ಪದೇ ಅಪರಿಮಿತ ಕರುಣೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಉಪಶಮನವನ್ನು ಪಡೆದ ಮೇಲೆ ಅವರು ತಿರಿಗಿ ದ್ರೋಹಿಗಳಾಗಿ ನಡೆಯುತ್ತಿರುವದನ್ನು ನೀನು ಕಂಡು ಅವರ ಮೇಲೆ ದೊರೆತನ ನಡಿಸತಕ್ಕ ವೈರಿಗಳ ಕೈಗೆ ಅವರನ್ನು ಒಪ್ಪಿಸಿದಿ. ಆಗ ಅವರು ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು ಪರಲೋಕದಿಂದ ನೀನು ಕೇಳಿ ನಿನ್ನ ಕರುಣಾತಿಶಯದಿಂದ ಅವರನ್ನು ಅನೇಕಾವರ್ತಿ ರಕ್ಷಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಮ್ಮ ಪೂರ್ವಿಕರಿಗೆ ವಿಶ್ರಾಂತಿ ಸಿಕ್ಕಿದ ಕೂಡಲೇ ಅವರು ಮತ್ತೆ ದುಷ್ಕೃತ್ಯಗಳನ್ನು ಮಾಡಲಾರಂಭಿಸಿದರು. ಆದ್ದರಿಂದ ಆ ವೈರಿಗಳು ಅವರನ್ನು ಸೋಲಿಸಿ ಶಿಕ್ಷಿಸುವಂತೆ ನೀನು ಮಾಡಿದೆ. ಅವರು ನಿನ್ನ ಸಹಾಯಕ್ಕಾಗಿ ಮೊರೆಯಿಟ್ಟರು. ಪರಲೋಕದಲ್ಲಿ ನೀನು ಅವರ ಮೊರೆಯನ್ನು ಕೇಳಿ ಅವರಿಗೆ ಸಹಾಯಮಾಡಿದೆ. ನೀನು ದಯಾಳು! ಈ ರೀತಿ ಅನೇಕಸಲ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:28
12 ತಿಳಿವುಗಳ ಹೋಲಿಕೆ  

“ಯೆಹೋವ ದೇವರೇ, ಹೀಗೆಯೇ ನಿಮ್ಮ ಶತ್ರುಗಳೆಲ್ಲರೂ ನಾಶವಾಗಲಿ. ಆದರೆ ಅವರನ್ನು ಪ್ರೀತಿ ಮಾಡುವವರು ಪರಾಕ್ರಮದಿಂದ ಹೊರಡುವ ಸೂರ್ಯನ ಹಾಗೆಯೇ ಇರಲಿ.” ಅನಂತರ ದೇಶವು ನಲವತ್ತು ವರ್ಷ ವಿಶ್ರಾಂತಿಯಲ್ಲಿತ್ತು.


ನೀವು ವಾಸಮಾಡುವ ಪರಲೋಕದಿಂದ ಕೇಳಿ, ಮನ್ನಿಸಿ, ನಡೆಸಿರಿ. ಮನುಷ್ಯನ ಹೃದಯವನ್ನು ತಿಳಿದಿರುವ ನೀವು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರ ಪ್ರತಿಫಲಕೊಡಿರಿ. ಏಕೆಂದರೆ ನೀವೊಬ್ಬರೇ ಸಮಸ್ತ ಜನರ ಹೃದಯಗಳನ್ನು ತಿಳಿದವರಾಗಿದ್ದೀರಿ.


ಏಹೂದನು ಮರಣಹೊಂದಿದನಂತರ ಇಸ್ರಾಯೇಲರು ತಿರುಗಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು.


ಹೀಗೆ ಆ ದಿವಸದಲ್ಲಿ ಮೋವಾಬ್ ಇಸ್ರಾಯೇಲರ ಆಳಿಕೆಗೆ ಅಧೀನವಾಗಿತ್ತು. ದೇಶವು ಎಂಬತ್ತು ವರ್ಷ ವಿಶ್ರಾಂತಿಗೊಂಡಿತು.


ಆಕಾಶದಿಂದ ಕೆಳಗೆ ನೋಡಿರಿ, ನಿಮ್ಮ ಪವಿತ್ರವೂ ಮಹಿಮೆಯೂ ಆದ ನಿಮ್ಮ ಸಿಂಹಾಸನದಿಂದ ದೃಷ್ಟಿಸಿ ನೋಡಿರಿ. ನಿಮ್ಮ ಆಸಕ್ತಿಯೂ, ನಿಮ್ಮ ಪರಾಕ್ರಮವೂ, ನಿಮ್ಮ ಹೃದಯದ ಘೋಷವೂ, ನಮ್ಮ ವಿಷಯವಾದ ನಿಮ್ಮ ಕರುಣೆ ಕನಿಕರಗಳೂ ಎಲ್ಲಿ? ಬಿಗಿಹಿಡಿದುಕೊಂಡಿದ್ದೀರೋ?


ನಮ್ಮ ವೈರಿಗಳಿಂದ ನಮ್ಮನ್ನು ಬಿಡಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ಆ ನ್ಯಾಯಾಧಿಪತಿಯ ಮರಣದ ನಂತರ, ಅವರು ತಿರುಗಿ ಮಾರ್ಗತಪ್ಪಿ, ಅನ್ಯದೇವರುಗಳನ್ನು ಹಿಂಬಾಲಿಸಿ ಹೋಗಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದು, ತಮ್ಮ ಹಿರಿಯರಿಗಿಂತ ಅಧಿಕ ಭ್ರಷ್ಟರಾದರು. ಅವರು ತಮ್ಮ ದುರ್ಮಾರ್ಗಗಳನ್ನೂ ಹಟಮಾರಿತನವನ್ನೂ ಬಿಡಲೇ ಇಲ್ಲ.


ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅವರು ಅಧೀನರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು