Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:32 - ಕನ್ನಡ ಸಮಕಾಲಿಕ ಅನುವಾದ

32 “ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಅರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದು ಎಣಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಓ ನಮ್ಮ ದೇವರೇ, ನೀವು ಮಹೋನ್ನತರು, ಶಕ್ತಿಸಾಮರ್ಥ್ಯರು, ಭಯಭಕ್ತಿಗೆ ಪಾತ್ರರು, ಕೃಪಾವಾಗ್ದಾನಗಳ ನೆರವೇರಿಸುವವರು. ಅಲ್ಪವೆಂದೆಣಿಸಬೇಡಿ - ನಮ್ಮ ರಾಜರು, ರಾಜ್ಯಪಾಲರು. ಯಾಜಕರು, ಪ್ರವಾದಿಗಳು, ಹಿರಿಯರು, ಪ್ರಜೆಗಳು ಸಹಿಸಬೇಕಾಗಿಬಂದಿರುವ ಈ ಕಷ್ಟಕಾರ್ಪಣ್ಯಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನಮ್ಮ ದೇವರೇ, ಮಹೋನ್ನತನೂ ಪರಾಕ್ರವಿುಯೂ ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೆ ನಮ್ಮ ಅರಸರಿಗೂ ಪ್ರಭುಗಳಿಗೂ ಯಾಜಕರಿಗೂ ಪ್ರವಾದಿಗಳಿಗೂ ಹಿರಿಯರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದೆಣಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:32
42 ತಿಳಿವುಗಳ ಹೋಲಿಕೆ  

ನಾನು ನನ್ನ ಪ್ರಾರ್ಥನೆಯಲ್ಲಿ: “ಪರಲೋಕ ದೇವರಾದ ಯೆಹೋವ ದೇವರೇ, ನೀವು ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿದ್ದೀರಿ. ನಿಮ್ಮನ್ನು ಪ್ರೀತಿಸಿ ನಿಮ್ಮ ಆಜ್ಞೆಗಳಿಗೆ ವಿಧೇಯರಾಗಿರುವವರೊಂದಿಗೆ, ನಿಮ್ಮ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವವರೇ, ಭಯಭಕ್ತಿಗೆ ಪಾತ್ರರಾದ ದೇವರೇ,


ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರು ಒಬ್ಬರೇ ದೇವರು; ಅವರೇ ನಂಬಿಗಸ್ತರಾದ ದೇವರು; ತಮ್ಮನ್ನು ಪ್ರೀತಿಸಿ, ತಮ್ಮ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಅವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಸಾವಿರ ತಲೆಗಳವರೆಗೂ ತೋರಿಸುವರು.


ಯೆಹೋವ ದೇವರೇ, ನಮ್ಮ ಅರಸರಿಗೂ ನಮ್ಮ ರಾಜಕುಮಾರರಿಗೂ, ನಮ್ಮ ಪೂರ್ವಜರಿಗೂ, ನಮಗೂ ನಾಚಿಕೆಯಾಗಿದೆ. ಏಕೆಂದರೆ ನಿಮಗೆ ವಿರುದ್ಧವಾಗಿ ನಾವು ಪಾಪಮಾಡಿದ್ದೇವೆ.


ನಾನು ನನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥಿಸಿ, ಅರಿಕೆಮಾಡಿದೆನು: “ಕರ್ತನೇ, ಮಹೋನ್ನತ ಮತ್ತು ಅದ್ಭುತ ದೇವರೇ, ನಿಮ್ಮನ್ನು ಪ್ರೀತಿಮಾಡಿ, ನಿಮ್ಮ ಆಜ್ಞೆಗಳನ್ನು ಕೈಗೊಂಡು ನಡೆಯುವವರಿಗೆ ಒಡಂಬಡಿಕೆಯ ಪ್ರೀತಿಯನ್ನೂ ಇಟ್ಟು ನೆರವೇರಿಸುವವರೇ,


ನಿಮ್ಮ ಹೆಸರಿನಲ್ಲಿ ನಮ್ಮ ಅರಸರಿಗೂ, ನಮ್ಮ ರಾಜಕುಮಾರರಿಗೂ, ನಮ್ಮ ಪೂರ್ವಜರಿಗೂ ದೇಶದ ಎಲ್ಲಾ ಜನರಿಗೂ ಮಾತನಾಡಿದ ನಿಮ್ಮ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡಲಿಲ್ಲ.


ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ. ಮಾನವರ ಪರವಾಗಿ ಮಾಡಿರುವ ದೇವರ ಕಾರ್ಯಗಳು ಅತಿಶಯವಾಗಿವೆ.


ನೀವು ದೇವರಿಗೆ, “ನಿಮ್ಮ ಕೃತ್ಯಗಳು ಅತಿಶಯವಾದವುಗಳಾಗಿವೆ. ನಿಮ್ಮ ಶತ್ರುಗಳು ನಿಮ್ಮೆದುರಿನಲ್ಲಿ ಮುದುರಿ ಬೀಳುವಷ್ಟು ನಿಮ್ಮ ಶಕ್ತಿ ದೊಡ್ಡದಾಗಿದೆ.


ಏಕೆಂದರೆ ಮಹೋನ್ನತರಾದ ಯೆಹೋವ ದೇವರು ಭಯಭಕ್ತಿಗೆ ಪಾತ್ರರೂ ಭೂಮಿಯ ಮೇಲೆಲ್ಲಾ ಮಹಾರಾಜರೂ ಆಗಿದ್ದಾರೆ.


“ನಮ್ಮ ದುಷ್ಕಾರ್ಯ ಹಾಗೂ ನಮ್ಮ ಮಹಾ ಅಪರಾಧಕ್ಕಾಗಿ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ, ನಮ್ಮ ದೇವರಾಗಿರುವ ನೀವು ನಮ್ಮ ಪಾಪಗಳಿಗಿಂತ ಕಡಿಮೆ ಶಿಕ್ಷೆ ನೀಡಿದ್ದೀರಿ ಮತ್ತು ನಮ್ಮಲ್ಲಿ ಈ ರೀತಿಯಾಗಿ ಇಷ್ಟುಮಂದಿಯನ್ನು ಉಳಿಸಿದ್ದೀರಿ.


ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದರು. ತರುವಾಯ ಅವನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ ಅವನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ಸಹಾಯಮಾಡಲು ಯೂಫ್ರೇಟೀಸ್ ನದಿಯವರೆಗೆ ಹೋದನು. ಅರಸನಾದ ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದಾಗ, ನೆಕೋ ಅವನನ್ನು ಎದುರಿಸಿ ಮೆಗಿದ್ದೋವಿನಲ್ಲಿ ಕೊಂದುಹಾಕಿದನು.


ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಅವನ ವಿರುದ್ಧ ಬಂದದ್ದರಿಂದ, ಹೋಶೇಯನು ಅವನಿಗೆ ಸೇವಕನಾಗಿ ಅವನಿಗೆ ಕಪ್ಪವನ್ನು ಕೊಟ್ಟನು.


ಇಸ್ರಾಯೇಲಿನ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನು ಬಂದು, ಇಯ್ಯೋನ್, ಆಬೇಲ್ ಬೇತ್ ಮಾಕಾ, ಯಾನೋಹ, ಕೆದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಎಲ್ಲಾ ಭೂಮಿಯನ್ನು ವಶಮಾಡಿಕೊಂಡು, ಜನರನ್ನು ಸೆರೆಯಾಗಿ ಅಸ್ಸೀರಿಯಾ ದೇಶಕ್ಕೆ ಒಯ್ದನು.


ಅಸ್ಸೀರಿಯಾ ದೇಶದ ಅರಸನಾದ ಪೂಲನು ಇಸ್ರಾಯೇಲ್ ದೇಶದ ಮೇಲೆ ಯುದ್ಧಕ್ಕೆ ಬಂದನು. ಆಗ ಮೆನಹೇಮನು ಅವನ ಬೆಂಬಲವನ್ನು ಪಡೆಯಲು ಮತ್ತು ರಾಜ್ಯವನ್ನು ದೃಢಪಡಿಸಲು ಪೂಲನಿಗೆ ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.


ಹೀಗೆ ಪ್ರಾರ್ಥಿಸಿದನು: “ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಮೇಲಿರುವ ಆಕಾಶದಲ್ಲಾದರೂ, ಕೆಳಗಿರುವ ಭೂಮಿಯಲ್ಲಾದರೂ ನಿಮ್ಮ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣ ಹೃದಯದಿಂದ ನಿಮಗೆ ನಡೆದುಕೊಳ್ಳುವಂಥ ಸೇವಕರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸುವವರೇ,


ಅವರಿಗೆ ಹೆದರಬೇಡಿರಿ. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಭಯಭಕ್ತಿಗೆ ಯೋಗ್ಯರಾದ ಮಹಾ ದೇವರಾಗಿ ನಿಮ್ಮ ಮಧ್ಯದಲ್ಲಿದ್ದಾರೆ.


ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು, ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.


ನಾನು ಸಹ ನಿಮಗೆ ವಿರೋಧವಾಗಿ ನಡೆದು, ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ, ಏಳರಷ್ಟು ಶಿಕ್ಷಿಸುವೆನು.


“ ‘ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ, ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ಬಾಧಿಸುವೆನು.


“ ‘ಹೀಗೂ ನನ್ನ ಮಾತನ್ನು ಕೇಳದೆ ಹೋದರೆ, ನಾನು ನಿಮ್ಮನ್ನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ಶಿಕ್ಷಿಸುವೆನು.


ಇಸ್ರಾಯೇಲರಿಗೋಸ್ಕರ ಯೆಹೋವ ದೇವರು ಫರೋಹನಿಗೂ ಈಜಿಪ್ಟಿನವರಿಗೂ ಮಾಡಿದ್ದೆಲ್ಲವನ್ನೂ, ಅವರಿಗೆ ಒದಗಿದ ಎಲ್ಲಾ ಸಂಕಟವನ್ನೂ ಯೆಹೋವ ದೇವರು ತಮ್ಮನ್ನು ಹೇಗೆ ತಪ್ಪಿಸಿದನೆಂಬುದನ್ನೂ ಮೋಶೆಯು ತನ್ನ ಮಾವನಿಗೆ ತಿಳಿಯಪಡಿಸಿದನು.


ಅವರು ಜೆರುಬ್ಬಾಬೆಲನ ಬಳಿಗೂ, ಕುಟುಂಬಗಳ ಮುಖ್ಯಸ್ಥರ ಬಳಿಗೂ ಬಂದು ಅವರಿಗೆ, “ನಾವು ನಿಮ್ಮ ಹಾಗೆ ನಿಮ್ಮ ದೇವರನ್ನು ಹುಡುಕುತ್ತೇವೆ. ನಮ್ಮನ್ನು ಇಲ್ಲಿಗೆ ಬರಮಾಡಿದ ಅಸ್ಸೀರಿಯದ ಅರಸನಾದ ಏಸರ್‌ಹದ್ದೋನ್ ಎಂಬವನ ದಿವಸಗಳು ಮೊದಲುಗೊಂಡು, ಅವರಿಗೆ ನಾವೂ ಬಲಿಯನ್ನು ಅರ್ಪಿಸುತ್ತಾ ಇದ್ದೇವೆ, ಕಟ್ಟುವುದರಲ್ಲಿ ನಾವು ಸಹಾಯ ಮಾಡುತ್ತೇವೆ,” ಎಂದರು.


ಮತ್ತು ಮಹಾ ಶ್ರೀಮತ್ ಆಸೆನಪ್ಪರನು ಕರೆದುತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಯೂಫ್ರೇಟೀಸ್ ನದಿಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು, ಬರೆಯುವುದು ಏನೆಂದರೆ:


ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.


ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದುಕೊಂಡರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನೂ, ಕರುಣೆಯನ್ನೂ ನಿಮಗೋಸ್ಕರ ನೆರವೇರಿಸುವರು.


ಅವರು ನಿಮ್ಮನ್ನು ಪ್ರೀತಿಸಿ, ನಿಮ್ಮನ್ನು ಆಶೀರ್ವದಿಸಿ, ನಿಮ್ಮನ್ನು ಅಭಿವೃದ್ಧಿಗೊಳಿಸಿ ಮತ್ತು ನಿಮಗೆ ಕೊಡುತ್ತೇನೆಂದು ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ದೇಶದಲ್ಲಿ ನಿಮ್ಮ ಗರ್ಭದ ಫಲವನ್ನೂ ಅಂದರೆ, ಭೂಮಿಯ ಹುಟ್ಟುವಳಿಯನ್ನೂ, ನಿಮ್ಮ ಧಾನ್ಯವನ್ನೂ, ನಿಮ್ಮ ಹೊಸ ದ್ರಾಕ್ಷಾರಸವನ್ನೂ, ನಿಮ್ಮ ಎಣ್ಣೆಯನ್ನೂ, ನಿಮ್ಮ ಪಶುಗಳನ್ನೂ, ನಿಮ್ಮ ಕುರಿಗಳ ಮಂದೆಗಳನ್ನೂ ಆಶೀರ್ವದಿಸುವರು.


ಹೋಶೇಯನ ಒಂಬತ್ತನೆಯ ವರ್ಷದಲ್ಲಿ ಅಸ್ಸೀರಿಯದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡನು. ಅವನು ಇಸ್ರಾಯೇಲನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಯೆಹೋವ ದೇವರು ಪ್ರವಾದಿಗಳಾದ ತಮ್ಮ ಸೇವಕರ ಮುಖಾಂತರ ಎಚ್ಚರಿಸಿದ ಹಾಗೆ, ಇಸ್ರಾಯೇಲನ್ನು ದೇವರು ತಮ್ಮ ಸಮ್ಮುಖದಿಂದ ತೆಗೆದುಹಾಕಿದರು. ಹೀಗೆ ಇಸ್ರಾಯೇಲರು ಬಹು ಕಾಲದವರೆಗೂ ತಮ್ಮ ದೇಶದಿಂದ ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಇರಬೇಕಾಯಿತು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು