Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:16 - ಕನ್ನಡ ಸಮಕಾಲಿಕ ಅನುವಾದ

16 ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು, ಯೆಹೂದ ಗೋತ್ರದವರ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೆಹೂದದ ಗೋತ್ರದವರ ಮರುಭೂಮಿಗೆ ಬಂದು, ಅಲ್ಲಿನ ಜನರ ಸಂಗಡ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೋಶೆಯ ಮಾವನಾದ ಕೇನ್ಯನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕೇನ್ಯನೂ ಮೋಶೆಯ ಮಾವನೂ ಆದ ಹೋಬಾಬನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ ಕುಲದವರ ಜೊತೆಯಲ್ಲಿ ಆರಾದಿನ ದಕ್ಷಿಣದಲ್ಲಿರುವ ಯೆಹೂದ ಮರುಭೂಮಿಗೆ ಬಂದು ಅಲ್ಲಿಯ ಜನರ ಸಂಗಡ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕೇನ್ಯನೂ ಮೋಶೆಯ ಮಾವನೂ ಆದ [ಹೋಬಾಬನ] ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಕೇನ್ಯರು (ಕೇನ್ಯರು ಮೋಶೆಯ ಮಾವನ ಗೋತ್ರದವರಾಗಿದ್ದರು.) ಖರ್ಜೂರ ನಗರವನ್ನು (ಜೆರಿಕೊವನ್ನು) ಬಿಟ್ಟು ಯೆಹೂದ್ಯರ ಸಂಗಡ ಹೋದರು. ಅವರು ನೆಗೆವಿನಲ್ಲಿ ಅರಾದ್ ನಗರದ ಹತ್ತಿರವಿದ್ದ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:16
26 ತಿಳಿವುಗಳ ಹೋಲಿಕೆ  

ಮೋಶೆಯ ಅಳಿಯನಾದ ಹೊಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರನು ಕೇನ್ಯರನ್ನು ಬಿಟ್ಟು, ತನ್ನನ್ನು ಪ್ರತ್ಯೇಕಿಸಿ, ಕೆದೆಷಿನ ಬಳಿಯಲ್ಲಿರುವ ಚಾನನ್ನೀಮ್ ಎಂಬ ಊರಲ್ಲಿ ಅಲ್ಲೋನ್ ಮರದ ಬಳಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು.


ಕೇನ್ಯರಿಗೆ, “ಇಸ್ರಾಯೇಲರು ಈಜಿಪ್ಟಿನಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ, ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ, ನೀವು ಅವರ ಮಧ್ಯದಲ್ಲಿಂದ ಹೊರಟು ಹೋಗಿರಿ,” ಎಂದು ಹೇಳಿದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.


ನೆಗೆವನ್ನೂ ಖರ್ಜೂರಗಳ ಪಟ್ಟಣವಾದ ಯೆರಿಕೋ ಕಣಿವೆಯ ಬಯಲನ್ನೂ, ಚೋಗರ್ ಊರಿನ ತನಕ ತೋರಿಸಿದರು.


ನೆಗೆವನಲ್ಲಿ ವಾಸಿಸುವ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಇಸ್ರಾಯೇಲರು ಅತಾರೀಮ್ ಮಾರ್ಗವಾಗಿ ಬರುತ್ತಿದ್ದಾರೆಂದು ಕೇಳಿ, ಅವರ ಸಂಗಡ ಯುದ್ಧಮಾಡಿ, ಅವರಲ್ಲಿ ಕೆಲವರನ್ನು ಸೆರೆಹಿಡಿದನು.


ಅವನು ಅಮ್ಮೋನನ ಮತ್ತು ಅಮಾಲೇಕ್ಯರನ್ನು ಕೂಡಿಸಿಕೊಂಡು ಬಂದು, ಇಸ್ರಾಯೇಲರನ್ನು ಹೊಡೆದು, ಖರ್ಜೂರ ಗಿಡಗಳಿರುವ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.


ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಏಕೆಂದರೆ ಯಾಬೀನನೆಂಬ ಹಾಚೋರಿನ ಅರಸನಿಗೂ, ಕೇನ್ಯನಾದ ಹೆಬೆರನ ಮನೆಗೂ ನಡುವೆ ಶಾಂತಿ ಇತ್ತು.


“ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು. ಅವರನ್ನು ಯೆಹೋವ ದೇವರ ಆಲಯದ ಒಂದು ಕೋಣೆಯೊಳಕ್ಕೆ ಕರೆದು, ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು.”


ಅದೇ ಕಾಲದಲ್ಲಿ ಅರಸನಾದ ಆಹಾಜನು ಅಸ್ಸೀರಿಯದ ಅರಸರ ಬಳಿಗೆ ಕಳುಹಿಸಿ ಸಹಾಯ ಬೇಡಿಕೊಂಡನು.


ಆರನೆಯವನಾದ ಓಚೆಮನನ್ನೂ, ಏಳನೆಯವನಾದ ದಾವೀದನಿಗೆ ತಂದೆಯಾಗಿದ್ದನು.


ಹೊರ್ಮಾದ ಅರಸನು. ಅರಾದಿನ ಅರಸನು.


ತರುವಾಯ ಮೋಶೆಯು ತನ್ನ ಮಾವ ಇತ್ರೋವನಿಗೆ ಸಾಗಕಳುಹಿಸಿದಾಗ, ಅವನು ಸ್ವದೇಶಕ್ಕೆ ಹೊರಟುಹೋದನು.


ಮೋಶೆಯ ಮಾವ ಇತ್ರೋವನು ದಹನಬಲಿಯನ್ನೂ, ಯಜ್ಞಗಳನ್ನೂ ದೇವರಿಗಾಗಿ ತೆಗೆದುಕೊಂಡು ಬಂದನು. ಆರೋನನೂ, ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನವನ್ನು ಮಾಡುವುದಕ್ಕೆ ಬಂದರು.


ಮೋಶೆಗೆ ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ, ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.


ದೇವರು ಮೋಶೆಗೂ, ತಮ್ಮ ಜನರಾದ ಇಸ್ರಾಯೇಲರಿಗೂ ಮಾಡಿದವುಗಳೆಲ್ಲವನ್ನೂ ಯೆಹೋವ ದೇವರು ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದದ್ದನ್ನೂ, ಮಿದ್ಯಾನಿನ ಯಾಜಕನೂ, ಮೋಶೆಯ ಮಾವನೂ ಆಗಿದ್ದ ಇತ್ರೋವನಿಗೆ ಮುಟ್ಟಿತು.


ಇದಾದ ಮೇಲೆ ಮೋಶೆಯು ತನ್ನ ಮಾವನಾದ ಇತ್ರೋವನ ಬಳಿಗೆ ಬಂದು ಅವನಿಗೆ, “ಈಜಿಪ್ಟಿನಲ್ಲಿರುವ ನನ್ನ ಸಹೋದರರ ಬಳಿಗೆ ಹಿಂದಿರುಗಿ ಹೋಗಿ, ಅವರು ಇನ್ನೂ ಜೀವದಿಂದ ಇದ್ದಾರೋ ಎಂಬುದನ್ನು ನೋಡುವೆನು,” ಎಂದನು. ಇತ್ರೋವನು ಮೋಶೆಗೆ, “ಸಮಾಧಾನದಿಂದ ಹೋಗು,” ಎಂದನು.


ಮೋಶೆಯು ತನ್ನ ಮಾವನೂ ಮಿದ್ಯಾನಿನ ಯಾಜಕನೂ ಆದ ಇತ್ರೋವನ ಮಂದೆಯನ್ನು ಮೇಯಿಸುತ್ತಿದ್ದನು. ಮರುಭೂಮಿಯ ಹಿಂಭಾಗಕ್ಕೆ ನಡೆಸಿಕೊಂಡು ಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.


ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನು ಯೂದಾಯ ಪ್ರಾಂತದ ಅರಣ್ಯಕ್ಕೆ ಬಂದು,


ಅದಕ್ಕೆ ಅವಳು ಅವನಿಗೆ, “ನನಗೆ ಒಂದು ಸಹಾಯಮಾಡಬೇಕು. ಮೊದಲು ದಕ್ಷಿಣ ಹೊಲವನ್ನು ನೀನು ನನಗೆ ಕೊಟ್ಟೆ; ನೀರಿನ ಬುಗ್ಗೆಗಳನ್ನು ಸಹ ನನಗೆ ಕೊಡು,” ಎಂದಳು. ಆಗ ಕಾಲೇಬನು ಅವಳಿಗೆ ಮೇಲಿನ ಹಾಗೂ ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು.


ಆಗ ಆಕೀಷನು, “ಈ ಹೊತ್ತು ಎಲ್ಲಿ ಸುಲಿದುಕೊಂಡಿರಿ?” ಎಂದಾಗ ದಾವೀದನು, “ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ, ಯೆರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ, ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು,” ಎಂದನು.


ರಾಕಾಲಿನವರು, ಯೆರಹ್ಮೇಲ್ಯರು, ಕೇನ್ಯರು,


ಅನಂತರ ಯೆಹೋವ ದೇವರು ಅವನಿಗೆ, “ಅಬ್ರಹಾಮನಿಗೂ ಅವನ ಸಂತತಿಗೂ ಕೊಡುತ್ತೇನೆಂದು ನಾನು ಇಸಾಕನಿಗೂ, ಯಾಕೋಬನಿಗೂ ಪ್ರಮಾಣ ಮಾಡಿದ ದೇಶವು ಇದೇ. ಇದನ್ನು ನಿನಗೆ ತೋರಿಸಿದೆನು. ಆದರೆ ನೀನು ಅಲ್ಲಿಗೆ ಸೇರುವುದಿಲ್ಲ,” ಎಂದು ಹೇಳಿದರು.


ಬೆನ್ಯಾಮೀನನ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರಕಿರುವ ಪಟ್ಟಣಗಳ ವಿವರ: ಯೆರಿಕೋ, ಬೇತ್ ಹೊಗ್ಲಾ, ಏಮೆಕ್ ಕೆಚ್ಚೀಚ್ ತಗ್ಗು,


ಯಾಬೇಚಿನಲ್ಲಿ ವಾಸಿಸುವ ಬರಹಗಾರರ ಕುಟುಂಬದವರಾದ ತಿರ್ರಾತ್ಯರು, ಶಿಮೆಯಾತ್ಯರು, ಸೂಕಾತ್ಯರು ಇವರು ರೇಕಾಬನ ಮನೆಯವರ ಮೂಲ ಪುರುಷನಾಗಿರುವ ಹಮ್ಮತನಿಂದ ಉತ್ಪನ್ನರಾದ ಕೇನ್ಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು