Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:2 - ಕನ್ನಡ ಸಮಕಾಲಿಕ ಅನುವಾದ

2 ಅದಕ್ಕೆ ಯೆಹೋವ ದೇವರು, “ಯೆಹೂದ ಗೋತ್ರದವರು ಹೋಗಲಿ; ನಾನು ಆ ದೇಶವನ್ನು ಇವರ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ಅವರಿಗೆ “ಯೆಹೂದ್ಯರು ಹೋಗಲಿ; ಇಗೋ, ದೇಶವನ್ನು ಅವರಿಗೆ ಒಪ್ಪಿಸಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಯೆಹೂದ ಕುಲ ಹೋಗಲಿ; ಇಗೋ, ನಾಡನ್ನು ಅವರ ಕೈಗೆ ಒಪ್ಪಿಸಿದ್ದೇನೆ,” ಎಂದರು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ಅವರಿಗೆ - ಯೆಹೂದ್ಯರು ಹೋಗಲಿ; ಇಗೋ, ದೇಶವನ್ನು ಅವರಿಗೆ ಒಪ್ಪಿಸಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಇಸ್ರೇಲರಿಗೆ, “ಯೆಹೂದ ಕುಲದವರು ಹೋಗಲಿ. ಅವರು ಈ ದೇಶವನ್ನು ವಶಪಡಿಸಿಕೊಳ್ಳುವಂತೆ ನಾನು ಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:2
11 ತಿಳಿವುಗಳ ಹೋಲಿಕೆ  

ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜರೂ ಆಗಿರುವವರು ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನು ಬಿಚ್ಚುವುದಕ್ಕೆ ಜಯವೀರರಾಗಿದ್ದಾರೆ,” ಎಂದು ಹೇಳಿದನು.


ಹೀಗೆ ನಮ್ಮ ಕರ್ತ ಯೇಸು ಯೂದಾ ಗೋತ್ರಕ್ಕೆ ಸೇರಿದವರೆಂದು ತಿಳಿದ ಸಂಗತಿಯಾಗಿದೆ. ಈ ಗೋತ್ರವನ್ನು ಸಂಬಂಧಿಸಿ ಮೋಶೆಯು ಯಾಜಕರ ವಿಷಯವಾಗಿ ಏನನ್ನೂ ಹೇಳಲಿಲ್ಲ.


ಮೊದಲನೆಯ ದಿವಸದಲ್ಲಿ ತನ್ನ ಕಾಣಿಕೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅಮ್ಮೀನಾದಾಬನ ಮಗ ನಹಶೋನನು.


ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ, ಸೂರ್ಯೋದಯದ ಕಡೆಗೆ ಯೆಹೂದ ದಂಡಿನ ಧ್ವಜದ ಬಳಿಯಲ್ಲಿ ತಮ್ಮ ಸೈನ್ಯಗಳ ಪ್ರಕಾರ ಇಳಿದುಕೊಳ್ಳಬೇಕು. ಯೆಹೂದ ಮಕ್ಕಳಿಗೆ ಅಮ್ಮೀನಾದಾಬನ ಮಗ ನಹಶೋನನು ಸೈನ್ಯಾಧಿಪತಿ.


ಯೆಹೂದ ಗೋತ್ರದವರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, “ನೀವು ನಮ್ಮ ಸಂಗಡ ನಮ್ಮ ಪ್ರಾಂತಕ್ಕೆ ಬನ್ನಿರಿ, ಕಾನಾನ್ಯರ ಮೇಲೆ ಯುದ್ಧ ಮಾಡೋಣ. ಹಾಗೆಯೇ ನಾವು ನಿಮ್ಮ ಸಂಗಡ ನಿಮ್ಮ ಪ್ರಾಂತಕ್ಕೆ ಬರುತ್ತೇವೆ,” ಎಂದರು. ಹೀಗೆ ಸಿಮೆಯೋನ್ಯರು ಅವರ ಸಂಗಡ ಹೋದರು.


ಅವರು ಯೆಹೋಶುವನಿಗೆ, “ನಿಶ್ಚಯವಾಗಿ ಯೆಹೋವ ದೇವರು ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ. ದೇಶದ ನಿವಾಸಿಗಳೆಲ್ಲರೂ ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ,” ಎಂದರು.


ಆಗ ಇಸ್ರಾಯೇಲರು ಬೇತೇಲಿಗೆ ಹೋಗಿ, ತಮ್ಮಲ್ಲಿ ಮೊದಲು ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕಾದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಯೆಹೂದ ಗೋತ್ರದವರು ಮೊದಲು ಹೋಗಬೇಕು,” ಎಂದರು.


ಆರೋನನ ಮೊಮ್ಮಗನೂ, ಎಲಿಯಾಜರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದದರಿಂದಲೂ, ಇಸ್ರಾಯೇಲರು, “ನಮ್ಮ ಸಹೋದರರಾದ ಬೆನ್ಯಾಮೀನ್ಯರಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವುದಕ್ಕೆ ಹೋಗಬೇಕೋ ಬೇಡವೋ?” ಎಂದು ದೇವರನ್ನು ಕೇಳಿಕೊಂಡರು. ಯೆಹೋವ ದೇವರು, “ಹೋಗಿರಿ, ಏಕೆಂದರೆ ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು