Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:22 - ಕನ್ನಡ ಸಮಕಾಲಿಕ ಅನುವಾದ

22 ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಏರಿಹೋದರು. ಯೆಹೋವ ದೇವರು ಅವರ ಸಂಗಡ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇವರ ಹಾಗೆಯೇ ಜೋಸೆಫನ ಕುಲದವರು ಹೊರಟು ಬೇತೇಲಿಗೆ ಬಂದರು. ಸರ್ವೇಶ್ವರಸ್ವಾಮಿ ಅವರೊಂದಿಗೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22-23 ಯೋಸೇಫನ ಕುಲದವರು ಲೂಜ್ ಎಂಬ ಬೇತೇಲ್ ನಗರದ ಮೇಲೆ ಧಾಳಿಮಾಡಲು ಹೋದರು. ಯೆಹೋವನು ಯೋಸೇಫನ ಕುಲದವರ ಸಂಗಡ ಇದ್ದನು. ಯೋಸೇಫನ ಕುಲದವರು ಬೇತೇಲ್ ನಗರಕ್ಕೆ ಕೆಲವು ಜನ ಗೂಢಚಾರರನ್ನು ಕಳುಹಿಸಿದರು. ಇವರು ಬೇತೇಲ್ ನಗರವನ್ನು ವಶಪಡಿಸಿಕೊಳ್ಳುವ ಮಾರ್ಗಗಳ ಬಗ್ಗೆ ಯೋಚಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:22
12 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಯೆಹೂದ ಗೋತ್ರದವರ ಸಂಗಡ ಇದ್ದುದರಿಂದ, ಅವರು ಬೆಟ್ಟದ ಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿಣದ ರಥಗಳಿದ್ದುದರಿಂದ, ಅವರು ಅವರನ್ನು ಹೊರಡಿಸಲಾರದೆ ಹೋದರು.


ಜೆಬುಲೋನ್ ಕುಲದಿಂದ 12,000, ಯೋಸೇಫನ ಕುಲದಿಂದ 12,000, ಬೆನ್ಯಾಮೀನ್ ಕುಲದಿಂದ ಮುದ್ರೆಹಾಕಿಸಿಕೊಂಡವರು 12,000 ಜನರು.


ಗಾಜವೂ, ಮನಸ್ಸೆಯ ಸಂತಾನದವರ ಮೇರೆಯಲ್ಲಿರುವ ಬೇತ್ ಷೆಯಾನೂ, ತಾನಕವೂ, ಮೆಗಿದ್ದೋ, ದೋರ್ ಮತ್ತು ಇವುಗಳ ಗ್ರಾಮಗಳು ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸವಾಗಿದ್ದರು.


ಯೆಹೋವ ದೇವರು ಅವನ ಸಂಗಡ ಇದ್ದರು. ಹಿಜ್ಕೀಯನು ಯಾವ ಕಡೆಗೆ ಹೋದರೂ ಅವನಿಗೆ ಸಫಲವಾಯಿತು. ಅವನು ಅಸ್ಸೀರಿಯದ ಅರಸನನ್ನು ಸೇವಿಸದೆ, ಅವನ ಮೇಲೆ ತಿರುಗಿಬಿದ್ದನು.


ಯೋಸೇಫನ ಮಕ್ಕಳಾದ ಮನಸ್ಸೆಯೂ, ಎಫ್ರಾಯೀಮನೂ ಎರಡು ಗೋತ್ರಗಳಾಗಿದ್ದರು. ಲೇವಿಯರಿಗೆ ದೇಶದಲ್ಲಿ ಪಾಲುಕೊಡಲಿಲ್ಲ. ಆದರೆ ವಾಸಮಾಡುವ ಪಟ್ಟಣಗಳನ್ನೂ, ದನಕುರಿಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ, ಪ್ರಾಂತಗಳನ್ನೂ ಮಾಡಿಕೊಟ್ಟರು.


ಯೋಸೇಫನ ಮಕ್ಕಳಾದ ಎಫ್ರಾಯೀಮನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.


ಯೋಸೇಫನ ಗೋತ್ರದಲ್ಲಿ, ಎಫ್ರಾಯೀಮ್‌ನಿಂದ ಅಮ್ಮೀಹೂದನ ಮಗ ಎಲೀಷಾಮಾ, ಮನಸ್ಸೆ ಗೋತ್ರದಿಂದ ಪೆದಾಚೂರನ ಮಗನಾದ ಗಮಲಿಯೇಲ್,


ಆದರೆ ಅವನ ಬಿಲ್ಲು ಸ್ಥಿರವಾಗಿ ನಿಲ್ಲುವುದು. ಅವನ ಬಲವಾದ ತೋಳುಗಳು ಚುರುಕಾಗಿ ನಿಂತವು. ಇದಕ್ಕೆ ಕಾರಣ ಯಾಕೋಬನಿಗೆ ಸರ್ವಶಕ್ತರಾಗಿರುವ ದೇವರ ಹಸ್ತವೇ; ಇದಕ್ಕೆ ಕಾರಣ ಇಸ್ರಾಯೇಲನ ಬಂಡೆಯಾಗಿರುವ ಕುರುಬ.


ಯೆಹೋಶುವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆಯ್ದುಕೊಂಡು, ಆ ಪಟ್ಟಣದ ಪಶ್ಚಿಮ ಕಡೆಯಲ್ಲಿ ಬೇತೇಲಿಗೂ, ಆಯಿ ಎಂಬ ಪಟ್ಟಣದ ನಡುವೆ ಹೊಂಚಿಹಾಕಿಕೊಂಡಿರಲು ಅವರನ್ನು ಇಟ್ಟನು.


ಬೆನ್ಯಾಮೀನ್ಯರಿಗೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಯೆಬೂಸಿಯರು ಈ ದಿನದವರೆಗೂ ಬೆನ್ಯಾಮೀನರ ಸಂಗಡ ವಾಸವಾಗಿದ್ದಾರೆ.


ಆದರೆ ಮೊದಲು ಲೂಜ್ ಎಂದು ಹೆಸರಿದ್ದ ಬೇತೇಲೆಂಬ ಪಟ್ಟಣವನ್ನು ಸಂಚರಿಸಿ ನೋಡಲು, ಯೋಸೇಫನ ಮನೆಯವರನ್ನು ಕಳುಹಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು