Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:27 - ಕನ್ನಡ ಸಮಕಾಲಿಕ ಅನುವಾದ

27 ಮನಸ್ಸೆಯ ಗೋತ್ರದವರು ಬೇತ್ ಷೆಯಾನರನ್ನೂ, ಅವರ ಊರುಗಳವರನ್ನೂ; ತಾನಕದವರನ್ನೂ, ಅವರ ಊರುಗಳವರನ್ನೂ; ದೋರಿನವರನ್ನೂ, ಅವರ ಊರುಗಳವರನ್ನೂ; ಇಬ್ಲೆಯಾಮಿನವರನ್ನೂ, ಅವರ ಊರುಗಳವರನ್ನೂ, ಮೆಗಿದ್ದೋನಿನವರನ್ನೂ, ಅವರ ಊರುಗಳವರನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಆ ದೇಶದಲ್ಲಿ ವಾಸಿಸಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮನಸ್ಸೆಯವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ವಾಸವಾಗಿದ್ದವರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ದೃಢಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಮನಸ್ಸೆಕುಲದವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳನ್ನೂ ಅವುಗಳ ಗ್ರಾಮಗಳನ್ನೂ ಸ್ವಾಧೀನಮಾಡಿಕೊಳ್ಳಲಿಲ್ಲ, ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ನಿರ್ಧರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮನಸ್ಸೆಯವರು ಬೇತ್‍ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳನ್ನೂ ಅವುಗಳ ಗ್ರಾಮಗಳನ್ನೂ ಸ್ವಾಧೀನಮಾಡಿಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬೇತ್‌ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ನಗರಗಳಲ್ಲಿ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಪಟ್ಟಣಗಳಲ್ಲಿ ಕಾನಾನ್ಯರು ವಾಸವಾಗಿದ್ದರು. ಕಾನಾನ್ಯರನ್ನು ಈ ನಗರಗಳಿಂದ ಹೊರದೂಡುವುದು ಮನಸ್ಸೆ ಕುಲದವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಕಾನಾನ್ಯರು ನೆಲೆನಿಂತರು. ಅವರು ತಮ್ಮ ಮನೆಗಳನ್ನು ಬಿಡಲು ಸಮ್ಮತಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:27
16 ತಿಳಿವುಗಳ ಹೋಲಿಕೆ  

“ಯೆಹೋವ ದೇವರು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ರಕ್ತದಿಂದ ತನ್ನ ಖಡ್ಗವನ್ನು ಹಿಂದೆಗೆಯುವವನಿಗೆ ಶಾಪವಾಗಲಿ.


ಸೌಲನೂ, ಅವನ ಜನರೂ ಅಗಾಗನನ್ನೂ ಮೇಲ್ತರವಾದ ಕುರಿಗಳನ್ನೂ ದನಗಳನ್ನೂ ಕುರಿಮರಿಗಳನ್ನೂ, ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದರು. ಆದರೆ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.


“ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸಮೀಪವಾದ ತಾನಕದಲ್ಲಿ ಯುದ್ಧಮಾಡಿದರು. ಅವರು ಬೆಳ್ಳಿ ದ್ರವ್ಯಗಳನ್ನು ತೆಗೆದುಕೊಳ್ಳಲಿಲ್ಲ.


ಯೆಹೋಶುವನು ಮರಣ ಹೊಂದಿದ ಬಳಿಕ ಇಸ್ರಾಯೇಲರು, “ಕಾನಾನ್ಯರೊಡನೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವ ದೇವರನ್ನು ಕೇಳಿದರು.


ಮನಸ್ಸೆಯ ಅರ್ಧಗೋತ್ರದಲ್ಲಿ, ತಾನಕನ್ನೂ ಗತ್ ರಿಮ್ಮೋನನ್ನೂ ಹೀಗೆ ಎರಡು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.


ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ದಂಡಿಸಿ ಸಂಪೂರ್ಣವಾಗಿ ತೆಗೆದುಹಾಕಿಬಿಡುವರು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು. ಅವರಿಗೆ ದಯೆ ತೋರಿಸಬಾರದು.


ಅವರ ಸಂಗಡ, ಅವರ ದೇವರುಗಳ ಸಂಗಡ ಯಾವ ಒಡಂಬಡಿಕೆಯನ್ನು ಮಾಡಿಕೊಳ್ಳಬಾರದು.


ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ, ಅಲ್ಲಿ ಒಂದು ಪಟ್ಟಣವನ್ನು ಕಟ್ಟಿ, ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಈವರೆಗೂ ಅದಕ್ಕೆ ಅದೇ ಹೆಸರಿದೆ.


ಇಸ್ರಾಯೇಲರು ಬಲಗೊಂಡಾಗ, ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ, ಅವರನ್ನು ದಾಸತ್ವಕ್ಕೆ ಕಾನಾನ್ಯರಿಗೆ ನೇಮಕ ಮಾಡಿದರು.


ಯೆಹೂದದ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು, ಬೇತ್ ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ ರಥದಲ್ಲಿ, “ಅವನನ್ನು ಸಹ ಸಂಹರಿಸಿರಿ,” ಎಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿಹೋಗುವ ಅಹಜ್ಯನನ್ನು ಮಾರ್ಗದಲ್ಲಿ ರಥದಲ್ಲಿ ಹೊಡೆದರು. ಅವನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.


ಬೆನ್ಯಾಮೀನ್ಯರಿಗೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಯೆಬೂಸಿಯರು ಈ ದಿನದವರೆಗೂ ಬೆನ್ಯಾಮೀನರ ಸಂಗಡ ವಾಸವಾಗಿದ್ದಾರೆ.


ಸೌಲನ ಆಯುಧಗಳನ್ನು ಅಷ್ಟೋರೆತ್ ಮಂದಿರದಲ್ಲಿ ಇಟ್ಟು, ಅವನ ಶವವನ್ನು ಬೇತ್ ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು.


ಇಸ್ರಾಯೇಲರು ಸಂಹರಿಸದೆ ಉಳಿಸಿದ್ದ ಅವರ ಮಕ್ಕಳನ್ನೂ ಸೊಲೊಮೋನನು ಇಂದಿನವರೆಗೂ ದಾಸತ್ವಕ್ಕಾಗಿ ನೇಮಿಸಿದನು.


ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ಸಹಾಯಮಾಡಲು ಯೂಫ್ರೇಟೀಸ್ ನದಿಯವರೆಗೆ ಹೋದನು. ಅರಸನಾದ ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದಾಗ, ನೆಕೋ ಅವನನ್ನು ಎದುರಿಸಿ ಮೆಗಿದ್ದೋವಿನಲ್ಲಿ ಕೊಂದುಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು