Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:4 - ಕನ್ನಡ ಸಮಕಾಲಿಕ ಅನುವಾದ

4 ಯೆಹೂದ ಗೋತ್ರದವರು ಹೋದಾಗ, ಯೆಹೋವ ದೇವರು ಕಾನಾನ್ಯರನ್ನೂ ಪೆರಿಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಬೆಜೆಕಿನಲ್ಲಿ ಹತ್ತು ಸಾವಿರ ಜನರನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕ್ ಎಂಬ ಸ್ಥಳದಲ್ಲಿ ಹತ್ಯೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ಒಪ್ಪಿ ಯೆಹೂದ ಕುಲದವರ ಜೊತೆ ಯುದ್ಧಕ್ಕೆ ಹೋದರು. ಸರ್ವೇಶ್ವರ ಕಾನಾನ್ಯರನ್ನು ಹಾಗು ಪೆರಿಜ್ಜೀಯರನ್ನು ಅವರ ಕೈವಶ ಮಾಡಲು ಅವರು ಹತ್ತುಸಾವಿರ ಶತ್ರುಗಳನ್ನು ಬೆಜೆಕಿನಲ್ಲಿ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕಿನಲ್ಲಿ ಹತಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಸೋಲಿಸುವುದರಲ್ಲಿ ಯೆಹೂದ್ಯರಿಗೆ ಸಹಾಯ ಮಾಡಿದನು. ಯೆಹೂದ್ಯರು ಬೆಜೆಕ್ ನಗರದಲ್ಲಿ ಹತ್ತು ಸಾವಿರ ಜನರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:4
17 ತಿಳಿವುಗಳ ಹೋಲಿಕೆ  

ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ, ಇಸ್ರಾಯೇಲರು ಮೂರು ಲಕ್ಷ ಜನರೂ, ಯೆಹೂದ್ಯರಲ್ಲಿ ಮೂವತ್ತು ಸಾವಿರ ಜನರೂ ಆಗಿದ್ದರು.


ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ, “ಮೀಕಾಯೆಹುವೇ, ನಾವು ಗಿಲ್ಯಾದಿನ ರಾಮೋತ್ ವಿರುದ್ಧವಾಗಿ ಯುದ್ಧಕ್ಕೆ ಹೋಗಬಹುದೋ ಅಥವಾ ಬೇಡವೋ?” ಎಂದನು. ಆಗ ಅವನು, “ಹೋಗಿ ಜಯ ಹೊಂದಿರಿ. ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು.


ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, ಅವರಿಗೆ, “ನಾನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ, ಬೇಡವೋ?” ಎಂದು ಕೇಳಿದನು. ಅದಕ್ಕವರು, “ಹೋಗು, ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.


ಆದರೆ ಅವರು, ‘ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ,’ ಎಂದು ಹೇಳಿದರೆ ನಾವು ಮೇಲೆ ಹತ್ತಿ ಹೋಗೋಣ. ಏಕೆಂದರೆ ಯೆಹೋವ ದೇವರು ಅವರನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟರೆಂಬುದಕ್ಕೆ ಇದೇ ನಮಗೆ ಗುರುತಾಗಿರುವುದು,” ಎಂದನು.


ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯುವಕನಿಗೆ, “ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿ ಹೋಗೋಣ ಬಾ; ಒಂದು ವೇಳೆ ಯೆಹೋವ ದೇವರು ನಮಗೋಸ್ಕರ ಕಾರ್ಯವನ್ನು ನಡೆಸುವರು. ಏಕೆಂದರೆ ಅನೇಕ ಜನರಿಂದಲಾದರೂ, ಸ್ವಲ್ಪ ಜನರಿಂದಲಾದರೂ ರಕ್ಷಿಸುವುದಕ್ಕೆ ಯೆಹೋವ ದೇವರಿಗೆ ಅಸಾಧ್ಯವಲ್ಲ,” ಎಂದನು.


ಹೀಗಿರುವುದರಿಂದ ನೀವು ಈ ಹೊತ್ತು ತಿಳಿದುಕೊಳ್ಳತಕ್ಕದ್ದೇನೆಂದರೆ, ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡುವರು. ದೇವರು ಅವರನ್ನು ನಿಮ್ಮ ಮುಂದೆ ಸೋಲಿಸುವರು. ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನೀವು ಅವರನ್ನು ಸ್ವಾಧೀನಪಡಿಸಿಕೊಂಡು ಅವರನ್ನು ಬೇಗ ತೆಗೆದುಹಾಕುವಿರಿ.


ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ದಂಡಿಸಿ ಸಂಪೂರ್ಣವಾಗಿ ತೆಗೆದುಹಾಕಿಬಿಡುವರು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು. ಅವರಿಗೆ ದಯೆ ತೋರಿಸಬಾರದು.


ಯೆಹೂದ ಗೋತ್ರದವರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, “ನೀವು ನಮ್ಮ ಸಂಗಡ ನಮ್ಮ ಪ್ರಾಂತಕ್ಕೆ ಬನ್ನಿರಿ, ಕಾನಾನ್ಯರ ಮೇಲೆ ಯುದ್ಧ ಮಾಡೋಣ. ಹಾಗೆಯೇ ನಾವು ನಿಮ್ಮ ಸಂಗಡ ನಿಮ್ಮ ಪ್ರಾಂತಕ್ಕೆ ಬರುತ್ತೇವೆ,” ಎಂದರು. ಹೀಗೆ ಸಿಮೆಯೋನ್ಯರು ಅವರ ಸಂಗಡ ಹೋದರು.


ಅವರು ಬೆಜೆಕಿನಲ್ಲಿ ಅರಸನಾದ ಅದೋನೀಬೆಜೆಕನನ್ನು ಸಂಧಿಸಿ, ಅವನ ವಿರೋಧವಾಗಿ ಯುದ್ಧಮಾಡಿ, ಕಾನಾನ್ಯರನ್ನೂ ಪೆರಿಜೀಯರನ್ನೂ ಕೊಂದುಹಾಕಿದರು.


ನೀವು ನಿಮ್ಮ ಕೈಯಿಂದ ಜನಾಂಗಗಳನ್ನು ಹೊರಡಿಸಿ, ನಮ್ಮ ಪಿತೃಗಳನ್ನು ನೆಲೆಗೊಳಿಸಿದಿರಿ; ನೀವು ವೈರಿಗಳನ್ನು ತೆಗೆದುಹಾಕಿ, ನಮ್ಮ ಪಿತೃಗಳಿಗೆ ಸಮೃದ್ಧಿಯನ್ನುಂಟು ಮಾಡಿದಿರಿ.


ದೇವರು ಜನಾಂಗಗಳನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲರನ್ನು ವಾಸಿಸುವಂತೆ ಮಾಡಿದರು.


ಇಸ್ರಾಯೇಲರು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು,


ಹೀಗೆ ಯೆಫ್ತಾಹನು ಅಮ್ಮೋನಿಯರ ಮೇಲೆ ಯುದ್ಧಮಾಡುವುದಕ್ಕೆ ಅವರೆದುರಿಗೆ ಹೊರಟುಹೋದನು. ಯೆಹೋವ ದೇವರು ಅವರನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು