Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಇಸ್ರಾಯೇಲರು ಯೆಹೋವ ದೇವರಿಗೆ ಕೂಗಿ, “ನಮ್ಮ ದೇವರನ್ನು ಬಿಟ್ಟು, ಬಾಳನನ್ನು ಸೇವಿಸಿದ್ದರಿಂದ, ನಾವು ನಿಮಗೆ ವಿರೋಧವಾಗಿ ಪಾಪಮಾಡಿದೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಅವರು ಯೆಹೋವನಿಗೆ, “ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು, ಬಾಳನ ಪ್ರತಿಮೆಗಳನ್ನು ಪೂಜಿಸಿ, ನಿನಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಅವರು ಸರ್ವೇಶ್ವರನಿಗೆ, “ನಾವು ನಮ್ಮ ದೇವರಾದ ನಿಮ್ಮನ್ನು ಬಿಟ್ಟು ಬಾಳನ ಪ್ರತಿಮೆಗಳನ್ನು ಪೂಜಿಸಿ ನಿಮಗೆ ವಿರುದ್ಧವಾಗಿ ಪಾಪಮಾಡಿದ್ದೇವೆ,” ಎಂದು ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಅವರು ಯೆಹೋವನಿಗೆ - ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು ಬಾಳನ ಪ್ರತಿಮೆಗಳನ್ನು ಪೂಜಿಸಿ ನಿನಗೆ ವಿರುದ್ಧವಾಗಿ ಪಾಪ ಮಾಡಿದ್ದೇವೆ ಎಂದು ಮೊರೆಯಿಡಲು ಆತನು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು. ಅವರು, “ನಾವು ನಿನ್ನ ವಿರುದ್ಧವಾಗಿ ಪಾಪ ಮಾಡಿದ್ದೇವೆ. ನಾವು ನಮ್ಮ ದೇವರನ್ನು ಬಿಟ್ಟು ಸುಳ್ಳುದೇವರಾದ ಬಾಳನನ್ನು ಪೂಜಿಸಿದ್ದೇವೆ” ಎಂದು ಮರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:10
11 ತಿಳಿವುಗಳ ಹೋಲಿಕೆ  

ಇವರು ಅವರ ಸಂಗಡ ಯುದ್ಧಮಾಡಿದರು. ಆದ್ದರಿಂದ ಅವರು ಯೆಹೋವ ದೇವರಿಗೆ ಮೊರೆಯಿಟ್ಟು, ‘ನಾವು ಯೆಹೋವ ದೇವರಾದ ನಿಮ್ಮನ್ನು ಬಿಟ್ಟು ಬಾಳನನ್ನೂ, ಅಷ್ಟೋರೆತನನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀವು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸಿರಿ; ನಾವು ನಿಮ್ಮ ಸೇವೆ ಮಾಡುವೆವು,’ ಎಂದರು.


ಆಗ ಅವರು ಸಹ ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆಯಿಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿದನು.


ಆಗ ಅವರು ಸಹ ಇಕ್ಕಟ್ಟಿನಲ್ಲಿ ಅವರು ಯೆಹೋವ ದೇವರಿಗೆ ಕೂಗಿದರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ರಕ್ಷಿಸಿದರು.


ಆಗ ಅವರು ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆ ಇಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ರಕ್ಷಿಸಿದರು.


ತರುವಾಯ ಇಸ್ರಾಯೇಲರು ಯೆಹೋವ ದೇವರನ್ನು ಕೂಗುವಾಗ, ಯೆಹೋವ ದೇವರು ಇಸ್ರಾಯೇಲರಿಗೆ ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ, ಕಾಲೇಬನ ತಮ್ಮನಾದ ಕೆನಾಜನ ಮಗ ಒತ್ನಿಯೇಲನನ್ನು ಎಬ್ಬಿಸಿದರು.


ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದ ಹಾಗೂ ಬೆನ್ಯಾಮೀನರಿಗೆ ವಿರೋಧವಾಗಿಯೂ, ಎಫ್ರಾಯೀಮರ ಮನೆಗೆ ವಿರೋಧವಾಗಿಯೂ ಯುದ್ಧಮಾಡುವುದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹು ಸಂಕಟವಾಯಿತು.


ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟಾಗಿ ಕೂಡಿಬಂದು, ಯೆಹೋವ ದೇವರ ಮುಂದೆ ನೀರು ತಂದು ಹೊಯ್ದು, ಆ ದಿವಸದಲ್ಲಿ ಉಪವಾಸ ಮಾಡಿ, “ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ” ಎಂದು ಅಲ್ಲಿ ಹೇಳಿದರು. ಸಮುಯೇಲನು ಇಸ್ರಾಯೇಲರಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.


ಅವರು ಮರಕ್ಕೆ, ‘ನೀನು ನನ್ನ ತಂದೆ,’ ಎಂದೂ ಕಲ್ಲಿಗೆ, ‘ನೀನು ನನ್ನನ್ನು ಹೆತ್ತಿದ್ದೀ,’ ಎಂದೂ ಹೇಳುತ್ತಾರಲ್ಲಾ. ಏಕೆಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ಅವರ ಕಷ್ಟಕಾಲದಲ್ಲಿ ಎದ್ದು, ‘ನಮ್ಮನ್ನು ರಕ್ಷಿಸು,’ ಎಂದು ಮೊರೆಯಿಡುವರು.


ಆಗ ಇಸ್ರಾಯೇಲರು ಯೆಹೋವ ದೇವರಿಗೆ ಮೊರೆಯಿಟ್ಟರು. ಅವನಿಗೆ ಒಂಬೈನೂರು ಕಬ್ಬಿಣದ ರಥಗಳಿದ್ದವು. ಅವನು ಇಸ್ರಾಯೇಲರನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.


ಆದಕಾರಣ ಇಸ್ರಾಯೇಲರು ಮಿದ್ಯಾನ್ಯರಿಂದ ಬಹಳ ಬಡವರಾದರು. ಆಗ ಇಸ್ರಾಯೇಲರು ಯೆಹೋವ ದೇವರಿಗೆ ಬೇಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು