Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:9 - ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದ ಹಾಗೂ ಬೆನ್ಯಾಮೀನರಿಗೆ ವಿರೋಧವಾಗಿಯೂ, ಎಫ್ರಾಯೀಮರ ಮನೆಗೆ ವಿರೋಧವಾಗಿಯೂ ಯುದ್ಧಮಾಡುವುದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹು ಸಂಕಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ಅಮ್ಮೋನಿಯರು ಯೊರ್ದನ್ ಹೊಳೆಯನ್ನು ದಾಟಿ, ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಾಯೇಲರಿಗೆ ಬಹಳ ಕಷ್ಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇದಲ್ಲದೆ ಅಮ್ಮೋನಿಯರು ಜೋರ್ಡನ್ ನದಿಯನ್ನು ದಾಟಿ ಯೆಹೂದ, ಬೆನ್ಯಾಮೀನ್, ಎಫ್ರಯಿಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಯೇಲರು ಬಹಳ ಕಷ್ಟಕ್ಕೀಡಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ಅಮ್ಮೋನಿಯರು ಯೊರ್ದನ್ ಹೊಳೆಯನ್ನು ದಾಟಿ ಯೆಹೂದ ಬೆನ್ಯಾಮೀನ್ ಎಫ್ರಾಯೀಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಾಯೇಲ್ಯರಿಗೆ ಬಹಳ ಕಷ್ಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಮ್ಮೋನಿಯರು ಜೋರ್ಡನ್ ನದಿಯನ್ನು ದಾಟಿ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಕುಲಗಳ ಜನರೊಡನೆ ಯುದ್ಧ ಮಾಡಿದರು. ಅಮ್ಮೋನಿಯರು, ಇಸ್ರೇಲರಿಗೆ ಅನೇಕ ಕಷ್ಟಗಳನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:9
13 ತಿಳಿವುಗಳ ಹೋಲಿಕೆ  

ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ, ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು. ದೇಶದ ನಿವಾಸಿಗಳು ಬಹಳವಾಗಿ ಹೆದರಿದ್ದರು.


ಆದರೆ ಕೂಷ್ಯನಾದ ಜೆರಹನು ಅವರಿಗೆ ವಿರೋಧವಾಗಿ ಹೊರಟು, ಮಾರೇಷಾದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ಯುದ್ಧವೀರರೂ, ಮುನ್ನೂರು ರಥಗಳೂ ಇದ್ದವು.


ಆಗ ಸಮುಯೇಲನು ಸೌಲನಿಗೆ, “ನೀನು ನನ್ನನ್ನು ಇಲ್ಲಿ ಬರಮಾಡಿ ವಿಶ್ರಾಂತಿ ಕೆಡಿಸಿದೆ,” ಎಂದನು. ಅದಕ್ಕೆ ಸೌಲನು, “ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ. ಏಕೆಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಮಾಡುತ್ತಾರೆ. ಆದರೆ ದೇವರು ನನ್ನನ್ನು ಬಿಟ್ಟುಹೋದರು. ಅವರು ಪ್ರವಾದಿಗಳ ಮುಖಾಂತರವಾದರೂ, ಸ್ವಪ್ನದ ಮುಖಾಂತರವಾದರೂ ನನಗೆ ಉತ್ತರ ಕೊಡಲಿಲ್ಲ. ಆದ್ದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು,” ಎಂದನು.


ಆ ಜನಾಂಗಗಳಲ್ಲಿ ನಿಮಗೆ ವಿಶ್ರಾಂತಿ ದೊರೆಯುವುದಿಲ್ಲ. ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ಅಲ್ಲಿ ಯೆಹೋವ ದೇವರು ನಿಮಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಂದುವ ಪ್ರಾಣವನ್ನೂ ಕೊಡುವರು.


ಇವರು ಆ ವರ್ಷ ಮೊದಲುಗೊಂಡು ಹದಿನೆಂಟು ವರ್ಷ ಯೊರ್ದನಿಗೆ ಆಚೆ ಗಿಲ್ಯಾದಿನಲ್ಲಿ ಅಮೋರಿಯರ ದೇಶದಲ್ಲಿರುವ ಇಸ್ರಾಯೇಲರನ್ನೆಲ್ಲಾ ಬಾಧಿಸಿ ಕುಂದಿಸಿದರು.


ಆಗ ಇಸ್ರಾಯೇಲರು ಯೆಹೋವ ದೇವರಿಗೆ ಕೂಗಿ, “ನಮ್ಮ ದೇವರನ್ನು ಬಿಟ್ಟು, ಬಾಳನನ್ನು ಸೇವಿಸಿದ್ದರಿಂದ, ನಾವು ನಿಮಗೆ ವಿರೋಧವಾಗಿ ಪಾಪಮಾಡಿದೆವು,” ಎಂದರು.


ಕೆಲವು ದಿವಸಗಳಾದ ಮೇಲೆ ಅಮ್ಮೋನಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಿದರು.


ಯೆಹೋವ ದೇವರು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಯಿಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವುದಕ್ಕೆ ಯೆಹೋವ ದೇವರ ಕೈ ಅವರಿಗೆ ವಿರೋಧವಾಗಿತ್ತು.


ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದ್ದರಿಂದ ಇಸ್ರಾಯೇಲರು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಬಂಡೆಯ ಬಿರುಕುಗಳನ್ನೂ, ಗವಿಗಳನ್ನೂ, ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.


ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದದ್ದರಿಂದ ತಾವು ಇಕ್ಕಟ್ಟಿನಲ್ಲಿ ಇರುವುದನ್ನು ಕಂಡು, ಗವಿಗಳಲ್ಲಿಯೂ, ಮುಳ್ಳಿನ ಪೊದೆಗಳಲ್ಲಿಯೂ, ಗುಡ್ಡಗಳಲ್ಲಿಯೂ, ಕುಣಿಗಳಲ್ಲಿಯೂ ಬಾವಿಗಳಲ್ಲಿಯೂ ಅಡಗಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು