Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:21 - ಕನ್ನಡ ಸಮಕಾಲಿಕ ಅನುವಾದ

21 “ಆಗ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಸೀಹೋನನನ್ನೂ, ಅವನ ಸಕಲ ಜನರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿಕೊಟ್ಟರು. ಇಸ್ರಾಯೇಲರು ಸೀಹೋನನನ್ನೂ, ಅವನ ಸಕಲ ಜನರನ್ನೂ ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇಲರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಸ್ರಾಯೇಲರ ದೇವರಾದ ಯೆಹೋವನು ಸೀಹೋನನನ್ನೂ, ಅವನ ಜನರೆಲ್ಲರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು, ಅವರ ದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಸ್ರಯೇಲರ ದೇವರಾದ ಸರ್ವೇಶ್ವರ ಸೀಹೋನನನ್ನೂ ಅವನ ಜನರೆಲ್ಲರನ್ನೂ ಇಸ್ರಯೇಲರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು ಅವರ ದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಸ್ರಾಯೇಲ್ಯರ ದೇವರಾದ ಯೆಹೋವನು ಸೀಹೋನನನ್ನೂ ಅವನ ಜನರೆಲ್ಲರನ್ನೂ ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು ಅವರ ದೇಶವನ್ನೆಲ್ಲಾ ಸ್ವತಂತ್ರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ಇಸ್ರೇಲರ ದೇವರಾದ ಯೆಹೋವನು ಇಸ್ರೇಲರಿಗೆ ಸೀಹೋನ ಮತ್ತು ಅವನ ಜನರನ್ನು ಸೋಲಿಸಲು ಸಹಾಯ ಮಾಡಿದನು. ಆದ್ದರಿಂದ ಅಮೋರಿಯರ ಪ್ರದೇಶವು ಇಸ್ರೇಲರ ಸ್ವತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:21
8 ತಿಳಿವುಗಳ ಹೋಲಿಕೆ  

ಆದರೆ ಇಸ್ರಾಯೇಲರು ಅವನನ್ನು ಖಡ್ಗದಿಂದ ಹೊಡೆದು, ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೆ ಅಮ್ಮೋನನ ಮಕ್ಕಳ ಮೇರೆಯವರೆಗೂ ಸ್ವಾಧೀನಪಡಿಸಿಕೊಂಡರು. ಏಕೆಂದರೆ ಅಮ್ಮೋನನ ಮಕ್ಕಳ ಮೇರೆಯು ಬಲಿಷ್ಠವಾಗಿತ್ತು.


ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಚಗೆ ಹೊರಟುಬಂದನು.


ಆದರೆ ಸೀಹೋನನು ತನ್ನ ಮೇರೆಯನ್ನು ದಾಟುವುದಕ್ಕೆ ಇಸ್ರಾಯೇಲರನ್ನು ನಂಬದೆ, ತನ್ನ ಜನರನ್ನೆಲ್ಲಾ ಕೂಡಿಸಿ, ಯಹಚಿನಲ್ಲಿ ದಂಡಿಳಿದು, ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡಿದನು.


“ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದವರೆಗೆ ಮರುಭೂಮಿಯಿಂದ ನದಿಯವರೆಗೂ ನಿಮ್ಮ ಮೇರೆಗಳನ್ನು ನೇಮಿಸುವೆನು. ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವಿರಿ.


ಆಗ ಯೆಹೋವ ದೇವರು ಯೆಹೋಶುವನಿಗೆ, “ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಯುದ್ಧ ವೀರರನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.


ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀದನಿಗೂ, ಅವನ ವಂಶದವರಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟರೆಂದು ನಿಮಗೆ ಗೊತ್ತಿಲ್ಲವೋ.


ಇಸ್ರಾಯೇಲರು ಯೆಹೂದದವರ ಎದುರಿನಿಂದ ಓಡಿಹೋದರು. ಹೀಗೆ ದೇವರು ಇಸ್ರಾಯೇಲರನ್ನು ಯೆಹೂದದವರ ಕೈಯಲ್ಲಿ ಒಪ್ಪಿಸಿದರು.


“ಆದರೂ ನನ್ನ ಜನರೇ, ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ, ಅಮೋರಿಯರನ್ನು ನಾನು ನಾಶ ಪಡಿಸಿದೆನು. ನಾನು ಮೇಲೆ ಅದರ ಫಲವನ್ನು ಮತ್ತು ಕೆಳಗೆ ಅದರ ಬೇರನ್ನು ಕಿತ್ತು ಹಾಕುವಂತೆ, ಅವರನ್ನು ನಿರ್ಮೂಲ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು