Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:31 - ಕನ್ನಡ ಸಮಕಾಲಿಕ ಅನುವಾದ

31 ನಾನು ಅಮ್ಮೋನಿಯರನ್ನು ಜಯಿಸಿ ಹಿಂತಿರುಗಿ ಬರುವಾಗ, ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥದ್ದು ಯೆಹೋವ ದೇವರದಾಗಿರುವುದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಾನು ಸುರಕ್ಷಿತವಾಗಿ ಮನೆಗೆ ಸೇರುವಾಗ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನನ್ನ ಮನೆಯ ಬಾಗಿಲಿನಿಂದ ಮೊದಲು ಬರುವಂಥ ಪ್ರಾಣಿಯು ನಿನ್ನದೇ ಎಂದು ಅದನ್ನು ನಿನಗೋಸ್ಕರ ಯಜ್ಞವಾಗಿ ಅರ್ಪಿಸುವೆನು” ಎಂದು ಹರಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ನಾನು ಸುರಕ್ಷಿತವಾಗಿ ಹಿಂದಿರುಗುವಾಗ ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥ ಪ್ರಾಣಿ ತಮಗೆ ಮೀಸಲು ಎಂದೂ ಅದನ್ನು ತಮಗೆ ದಹನಬಲಿದಾನ ಮಾಡುವೆನು” ಎಂದೂ ಹರಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಾನು ಸುರಕ್ಷಿತನಾಗಿ ಮನೆಗೆ ಮುಟ್ಟಿದಾಗ ನನ್ನನ್ನು ಎದುರುಗೊಳ್ಳುವದಕ್ಕಾಗಿ ನನ್ನ ಮನೆಯ ಬಾಗಲಿನಿಂದ ಮೊದಲು ಬರುವಂಥ ಪ್ರಾಣಿಯು ನಿನ್ನದೇ ಎಂದು ಅದನ್ನು ನಿನಗೋಸ್ಕರ ಹೋಮಮಾಡುವೆನು ಎಂದು ಹರಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಾನು ಜಯಶಾಲಿಯಾಗಿ ಬರುವಾಗ ನನ್ನ ಮನೆಯಿಂದ ಹೊರ ಬರುವ ಮೊದಲನೆಯ ಜೀವಿಯನ್ನು ನಿನಗೆ ಕೊಡುತ್ತೇನೆ. ನಾನು ಅದನ್ನು ಯೆಹೋವನ ಸರ್ವಾಂಗಹೋಮಕ್ಕೆ ಆಹುತಿಯಾಗಿ ಕೊಡುವೆನು” ಎಂದು ಹರಕೆ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:31
14 ತಿಳಿವುಗಳ ಹೋಲಿಕೆ  

ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.


ಅದಕ್ಕೆ ಸೌಲನು, “ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ,” ಎಂದನು.


ಇಸ್ರಾಯೇಲರು ಆ ದಿವಸ ಬಹಳ ಬಳಲಿ ಹೋದರು. ಏಕೆಂದರೆ ಸೌಲನು, “ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾಲದವರೆಗೆ ಯಾವನು ಆಹಾರ ತಿನ್ನುತ್ತಾನೋ, ಅವನು ಶಾಪಗ್ರಸ್ತನಾಗಲಿ,” ಎಂದು ಆಣೆ ಇಟ್ಟದ್ದರಿಂದ, ಜನರೆಲ್ಲರು ಆಹಾರದ ರುಚಿ ನೋಡದೆ ಇದ್ದರು.


ಬಾಲಕನಾದ ಸಮುಯೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಯೆಹೋವ ದೇವರ ಸನ್ನಿಧಿಯಲ್ಲಿ ಸೇವೆ ಮಾಡುತ್ತಿದ್ದನು.


ಆದ್ದರಿಂದ ನಾನು ಅವನನ್ನು ಯೆಹೋವ ದೇವರಿಗೆ ಒಪ್ಪಿಸಿದ್ದೇನೆ. ಅವನು ಜೀವಿಸಿರುವವರೆಗೆ ಯೆಹೋವ ದೇವರಿಗೆ ಸಮರ್ಪಿತನಾಗಿರುವನು,” ಎಂದಳು. ಆಮೇಲೆ ಅವರೆಲ್ಲರೂ ಅಲ್ಲಿ ಯೆಹೋವ ದೇವರನ್ನು ಆರಾಧಿಸಿದರು.


ಹರಕೆಮಾಡಿ, “ಸೇನಾಧೀಶ್ವರ ಯೆಹೋವ ದೇವರೇ, ನೀವು ನಿಶ್ಚಯವಾಗಿ ನಿಮ್ಮ ದಾಸಿಯ ದೀನತೆಯನ್ನು ಕಂಡು, ನಿಮ್ಮ ದಾಸಿಯನ್ನು ಮರೆಯದೆ, ನನ್ನನ್ನು ನೆನಸಿ, ನಿಮ್ಮ ದಾಸಿಗೆ ಗಂಡು ಮಗುವನ್ನು ಕೊಟ್ಟರೆ, ಅವನು ಬದುಕುವ ಸಕಲ ದಿವಸಗಳಲ್ಲಿ ಅವನನ್ನು ಯೆಹೋವ ದೇವರಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರಿಕನ ಕತ್ತಿ ಬೀಳುವುದಿಲ್ಲ,” ಎಂದಳು.


ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯು ಸೂಳೆಗಾರಿಕೆಯಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ದೇವ ಮಂದಿರದೊಳಗೆ ತರಬಾರದು. ಏಕೆಂದರೆ ಅವೆರಡನ್ನು ನಿನ್ನ ದೇವರಾದ ಯೆಹೋವ ದೇವರು ದ್ವೇಷಿಸುತ್ತಾರೆ.


ನನ್ನನ್ನು ಸಮಾಧಾನವಾಗಿ ನನ್ನ ತಂದೆಯ ಮನೆಗೆ ತಿರುಗಿ ಬರಮಾಡಿದರೆ, ಯೆಹೋವ ನನಗೆ ದೇವರಾಗಿರುವರು.


ಯೆಫ್ತಾಹನು ಯೆಹೋವ ದೇವರಿಗೆ ಒಂದು ಪ್ರಮಾಣವನ್ನು ಮಾಡಿ, “ನೀನು ಅಮ್ಮೋನಿಯರನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ,


ಹೀಗೆ ಯೆಫ್ತಾಹನು ಅಮ್ಮೋನಿಯರ ಮೇಲೆ ಯುದ್ಧಮಾಡುವುದಕ್ಕೆ ಅವರೆದುರಿಗೆ ಹೊರಟುಹೋದನು. ಯೆಹೋವ ದೇವರು ಅವರನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು