Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 12:5 - ಕನ್ನಡ ಸಮಕಾಲಿಕ ಅನುವಾದ

5 ಗಿಲ್ಯಾದ್ಯರು ಎಫ್ರಾಯೀಮ್ಯರಿಗೆ ಮುಂದುಗಡೆ ಯೊರ್ದನ್ ನದಿ ರೇವುಗಳನ್ನು ಹಿಡಿದರು. ಆಗ ಏನಾಯಿತೆಂದರೆ, ಎಫ್ರಾಯೀಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು, “ದಾಟುತ್ತೇನೆ,” ಎಂದು ಹೇಳಿದರೆ, ಗಿಲ್ಯಾದ್ಯರು, “ನೀನು ಎಫ್ರಾಯೀಮ್ಯನೋ?” ಎಂದು ಅವನನ್ನು ಕೇಳುತ್ತಿದ್ದರು. ಅವನು, “ಇಲ್ಲ,” ಎಂದರೆ, ಅವನಿಗೆ, “ನೀನು ಷಿಬ್ಬೋಲೆತ್ ಅನ್ನು,” ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ಅವರು ಎಫ್ರಾಯೀಮಿಗೆ ಹೋಗುವ ಯೊರ್ದನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಾಯೀಮ್ಯರಲ್ಲೊಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿಸಿರಿ ಎಂದು ಅವರನ್ನು ಕೇಳಿದರೆ ಅವರು, “ನೀನು ಎಫ್ರಾಯೀಮ್ಯನೋ” ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದಲ್ಲದೆ, ಅವರು ತಪ್ಪಿಸಿಕೊಂಡು ಹೋಗದಂತೆ ಎಫ್ರಯಿಮಿಗೆ ಹೋಗುವ ಜೋರ್ಡನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಯಿಮ್ಯರಲ್ಲಿ ಒಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿರಿ ಎಂದು ಅವರನ್ನು ಕೇಳಿದಾಗ ಅವರು, “ನೀನು ಎಫ್ರಯಿಮನೋ?’ ಎಂದು ಕೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಅವರು ಎಫ್ರಾಯೀವಿುಗೆ ಹೋಗುವ ಯೊರ್ದನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಾಯೀಮ್ಯರಲ್ಲೊಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿರಿ ಎಂದು ಅವರನ್ನು ಕೇಳಿದರೆ ಅವರು - ನೀನು ಎಫ್ರಾಯೀಮ್ಯನೋ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಗಿಲ್ಯಾದಿನ ಜನರು ಜೋರ್ಡನ್ ನದಿಯನ್ನು ದಾಟಲು ಅನುಕೂಲವಾದ ಸ್ಥಳಗಳನ್ನೆಲ್ಲಾ ವಶಪಡಿಸಿಕೊಂಡರು. ಅವು ಎಫ್ರಾಯೀಮ್ ಪ್ರದೇಶದೊಳಕ್ಕೆ ಹೋಗುವ ಮಾರ್ಗದಲ್ಲಿಯೇ ಇದ್ದವು. ಯಾವಾಗಲಾದರೂ ಎಫ್ರಾಯೀಮ್ ಕುಲದವರಲ್ಲಿ ಅಳಿದುಳಿದವನೊಬ್ಬ ಅಲ್ಲಿಗೆ ಬಂದು, “ನನ್ನನ್ನು ದಾಟಗೊಡಿರಿ” ಎಂದು ಕೇಳಿದರೆ ಗಿಲ್ಯಾದಿನವರು, “ನೀನು ಎಫ್ರಾಯೀಮಿನವನೇ?” ಎಂದು ಕೇಳುತ್ತಿದ್ದರು. ಅವನು “ಅಲ್ಲ” ಎಂದು ಉತ್ತರಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 12:5
9 ತಿಳಿವುಗಳ ಹೋಲಿಕೆ  

ಅವರಿಗೆ, “ನೀವು ನನ್ನ ಹಿಂದೆ ಬನ್ನಿರಿ. ಏಕೆಂದರೆ ಯೆಹೋವ ದೇವರು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟರು,” ಎಂದನು. ಅವರು ಅವನ ಹಿಂದೆ ಬಂದು, ಮೋವಾಬ್ಯರಿಗೆ ಎದುರಾದ ಯೊರ್ದನ್ ನದಿ ರೇವುಗಳನ್ನು ಹಿಡಿದು, ಒಬ್ಬರನ್ನಾದರೂ ದಾಟಗೊಡದೆ,


ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರೂ ಕಾನಾನ್ ದೇಶಕ್ಕೆ ಎದುರಾಗಿ ಇಸ್ರಾಯೇಲರು ದಾಟಿಬಂದ ಯೊರ್ದನ್ ನದಿ ಪ್ರಾಂತದಲ್ಲಿ ಬಲಿಪೀಠವನ್ನು ಕಟ್ಟಿದರೆಂಬ ಸುದ್ದಿ ಇಸ್ರಾಯೇಲರಿಗೆ ಮುಟ್ಟಿತು.


ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಬೆಟ್ಟದಲ್ಲೆಲ್ಲಾ ದೂತರನ್ನು ಕಳುಹಿಸಿ, “ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ, ಬೇತ್‌ಬಾರದವರೆಗಿರುವ ನೀರನ್ನೂ, ಯೊರ್ದನನ್ನೂ ಅವರಿಗೆ ಮುಂದಾಗಿ ಹಿಡಿಯಿರಿ,” ಎಂದು ಹೇಳಿದನು. ಹಾಗೆಯೇ ಎಫ್ರಾಯೀಮನ ಜನರೆಲ್ಲರೂ ಕೂಡಿಕೊಂಡು, ಬೇತ್‌ಬಾರದವರೆಗೆ ನೀರನ್ನೂ, ಯೊರ್ದನನ್ನೂ ಹಿಡಿದರು.


ಆ ಮನುಷ್ಯರು ಯೊರ್ದನ್ ನದಿ ದಾರಿ ಹಿಡಿದು ಹೋಗಿ ನದಿ ದಾಟುವ ಸ್ಥಳದವರೆಗೂ ಅವರನ್ನು ಹಿಂದಟ್ಟಿದರು. ಅವರನ್ನು ಹಿಂದಟ್ಟುವವರು ಹೊರಟುಹೋದ ಕೂಡಲೆ, ಪಟ್ಟಣದ ಹೆಬ್ಬಾಗಿಲು ಮುಚ್ಚಿದರು.


ಆಗ ಯೆಫ್ತಾಹನು ಗಿಲ್ಯಾದ್ ಜನರೆಲ್ಲರನ್ನು ಕೂಡಿಸಿ, ಎಫ್ರಾಯೀಮ್ಯರ ಸಂಗಡ ಯುದ್ಧಮಾಡಿದನು. ಏಕೆಂದರೆ, “ಎಫ್ರಾಯೀಮ್ಯರನ್ನು ಮನಸ್ಸೆಯವರ ಮಧ್ಯದಲ್ಲಿದ್ದ ಗಿಲ್ಯಾದ್ಯರಾದ ನೀವು ಸ್ವಕುಲವನ್ನು ಬಿಟ್ಟು ತಪ್ಪಿಸಿಕೊಂಡವರಾಗಿದ್ದೀರಿ,” ಎಂದು ಎಫ್ರಾಯೀಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಎಫ್ರಾಯೀಮ್ಯರನ್ನು ಹೊಡೆದರು.


ಆಗ ಅವನು ಹಾಗೆ ಹೇಳಲಾರದೆ, “ಸಿಬ್ಬೋಲೆತ್,” ಎಂದು ಉಚ್ಛರಿಸುವವನನ್ನು ಹಿಡಿದು ಯೊರ್ದನ್ ನದಿ ರೇವುಗಳ ಬಳಿಯಲ್ಲಿ ಕೊಂದುಹಾಕುತ್ತಿದ್ದರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ನಾಶವಾದರು.


ಯೆಹೂದದ ಬೇತ್ಲೆಹೇಮಿನವನಾದ ಯೆಹೂದದ ಗೋತ್ರದ ಲೇವಿಯನಾದಂಥ ಒಬ್ಬ ಪ್ರಾಯದವನಿದ್ದನು. ಅವನು ಅಲ್ಲಿ ಪ್ರವಾಸಿಯಾಗಿದ್ದನು.


ಎಫ್ರಾಯೀಮ್ ಬೆಟ್ಟದ ಪ್ರದೇಶ ರಾಮತಾಯೀಮ್ ಚೋಫಿಮಿನಲ್ಲಿ ಎಲ್ಕಾನ ಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾಯೀಮ್ಯನಾದ ಚೂಫನ ಮೊಮ್ಮಗನೂ ತೋಹುವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು.


ಇದಲ್ಲದೆ, ಅರಸನಾದ ಸೊಲೊಮೋನನಿಗೆ ವಿರೋಧವಾಗಿ ದಂಗೆ ಎದ್ದವರಲ್ಲಿ ಅವನ ಸೇವಕನೂ ಚರೇದ ಪಟ್ಟಣದ ಎಫ್ರಾಯೀಮ್ಯನಾದ ನೆಬಾಟನ ಮಗ ಯಾರೊಬ್ಬಾಮನು ಇದ್ದನು, ಚೆರೂಯಳೆಂಬ ವಿಧವೆಯು ಅವನ ತಾಯಿಯು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು