Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 12:6 - ಕನ್ನಡ ಸಮಕಾಲಿಕ ಅನುವಾದ

6 ಆಗ ಅವನು ಹಾಗೆ ಹೇಳಲಾರದೆ, “ಸಿಬ್ಬೋಲೆತ್,” ಎಂದು ಉಚ್ಛರಿಸುವವನನ್ನು ಹಿಡಿದು ಯೊರ್ದನ್ ನದಿ ರೇವುಗಳ ಬಳಿಯಲ್ಲಿ ಕೊಂದುಹಾಕುತ್ತಿದ್ದರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಅಲ್ಲವೆಂದರೆ ಅವನಿಗೆ, “ನೀನು ಷಿಬ್ಬೋಲೆತ್ ಎಂದು ಹೇಳು” ಎಂದು ಹೇಳುವರು. ಹಾಗೆ ಅನ್ನಲಿಕ್ಕೆ ಬಾರದೆ ಅವನು ಸಿಬ್ಬೋಲೆತ್ ಅನ್ನುವನು. ಕೂಡಲೆ ಅವರು ಅವನನ್ನು ಹಿಡಿದು ಯೊರ್ದನಿನ ಹಾಯಗಡಗಳ (ಕಾಲ್ನಡಿಗೆಯಿಂದ ದಾಟಬಹುದಾದ ನಿರುಳ್ಳಸ್ಥಳ) ಬಳಿಯಲ್ಲೇ ಕೊಂದುಹಾಕುವರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಲ್ವತ್ತೆರಡು ಸಾವಿರ ಜನರು ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನು, “ಇಲ್ಲ” ಎಂದರೆ ಅವನಿಗೆ, “ನೀನು ‘ಷಿಬ್ಬೋಲೆತ್’ ಅನ್ನು” ಎಂದು ಹೇಳುತ್ತಿದ್ದರು. ಹಾಗೆ ಉಚ್ಚಸರಿಸಲಿಕ್ಕೆ ಬಾರದೆ ಅವನು “ಸಿಬ್ಬೋಲೆತ್” ಅನ್ನುತ್ತಿದ್ದನು. ಕೂಡಲೇ ಅವರು ಅವನನ್ನು ಹಿಡಿದು ಜೋರ್ಡನಿನ ಹಾಯಗಡಗಳ ಬಳಿಯಲ್ಲೇ ಕೊಂದುಹಾಕುತ್ತಿದ್ದರು. ಹೀಗೆ ಆ ಕಾಲದಲ್ಲಿ ಎಫ್ರಯಿಮರಲ್ಲಿ ನಾಲ್ವತ್ತೆರಡು ಸಾವಿರ ಜನರು ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ಅಲ್ಲವೆಂದರೆ ಅವನಿಗೆ - ನೀನು ಷಿಬ್ಬೋಲೆತ್ ಅನ್ನು ಎಂದು ಹೇಳುವರು. ಹಾಗೆ ಅನ್ನಲಿಕ್ಕೆ ಬಾರದೆ ಅವನು ಸಿಬ್ಬೋಲೆತ್ ಅನ್ನುವನು. ಕೂಡಲೆ ಅವರು ಅವನನ್ನು ಹಿಡಿದು ಯೊರ್ದನಿನ ಹಾಯಗಡಗಳ ಬಳಿಯಲ್ಲೇ ಕೊಂದುಹಾಕುವರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು ಅವನಿಗೆ, “ಷಿಬ್ಬೋಲೆತ್ ಅನ್ನು” ಎಂದು ಹೇಳುವರು. ಎಫ್ರಾಯೀಮಿನ ಜನರಿಗೆ ಆ ಪದವನ್ನು ಸರಿಯಾಗಿ ಉಚ್ಚರಿಸಲು ಬರುತ್ತಿರಲಿಲ್ಲ. ಅವರು ಆ ಪದವನ್ನು “ಸಿಬ್ಬೋಲೆತ್” ಎಂದು ಉಚ್ಚರಿಸುತ್ತಿದ್ದರು. ಆ ಮನುಷ್ಯನು “ಸಿಬ್ಬೋಲೆತ್” ಅಂದತಕ್ಷಣ ಗಿಲ್ಯಾದಿನ ಜನರಿಗೆ ಅವನು ಎಫ್ರಾಯೀಮ್ಯನೆಂದು ಗೊತ್ತಾಗುತ್ತಿತ್ತು. ಅವರು ಅವನನ್ನು ದಾರಿಯ ತಿರುವುಗಳಲ್ಲೇ ಕೊಂದುಬಿಡುತ್ತಿದ್ದರು. ಅವರು ಎಫ್ರಾಯೀಮಿನ ನಲವತ್ತೆರಡು ಸಾವಿರ ಜನರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 12:6
12 ತಿಳಿವುಗಳ ಹೋಲಿಕೆ  

ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.


ಆಗ ಪೇತ್ರನು ಅದನ್ನು ಮತ್ತೆ ನಿರಾಕರಿಸಿದನು. ಸ್ವಲ್ಪ ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರುಗಿ ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಸಹ ಅವರಲ್ಲಿ ಒಬ್ಬನು, ನೀನು ಗಲಿಲಾಯದವನೇ,” ಎಂದರು.


ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಸಹ ಅವರಲ್ಲಿ ಒಬ್ಬನು. ನಿಜವಾಗಿಯೂ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ,” ಎಂದರು.


ಯೇಸು ಅವರ ಆಲೋಚನೆಗಳನ್ನು ತಿಳಿದು ಅವರಿಗೆ, “ತನಗೆ ವಿರೋಧವಾಗಿ ವಿಭಜಿಸಿಕೊಳ್ಳುವ ಪ್ರತಿಯೊಂದು ರಾಜ್ಯವು ನಾಶವಾಗುವುದು ಮತ್ತು ತನಗೆ ವಿರೋಧವಾಗಿ ವಿಭಾಗವಾಗಿರುವ ಪ್ರತಿಯೊಂದು ಪಟ್ಟಣವಾಗಲಿ ಮನೆಯಾಗಲಿ ನಿಲ್ಲುವುದಿಲ್ಲ.


ಇಸ್ರಾಯೇಲರೇ, ಯೆಹೋವ ದೇವರು ಯೂಫ್ರೇಟೀಸ್ ನದಿ ಮೊದಲುಗೊಂಡು ಈಜಿಪ್ಟ್ ದೇಶದ ನದಿಯವರೆಗೆ ಹೊಡೆಯುವರು, ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಕೂಡಿಸುವರು.


ಜ್ಞಾನಿಯ ಮಾತುಗಳು ಹಿತಕರ. ಆದರೆ ಬುದ್ಧಿಹೀನನ ಮಾತುಗಳು ಅವನಿಗೆ ವಿನಾಶಕರ.


ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಬೇಸರಗೊಂಡ ಸಹೋದರನನ್ನು ಗೆಲ್ಲುವುದು ಕಷ್ಟಕರ; ಅವರ ಕಲಹಗಳು ಕೋಟೆಯ ಬಾಗಿಲಿಗೆ ಅಗುಳಿಗಳಂತೆ ಇವೆ.


ಕಲಹದ ಪ್ರಾರಂಭವು ಆಣೆಕಟ್ಟು ಒಡೆದಂತೆ ಇರುವುದು; ಆದಕಾರಣ ಆ ಕಲಹಕ್ಕೆ ಕೈಹಾಕುವುದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.


ನೀರಿನ ಪ್ರವಾಹವು ನನ್ನ ಮೇಲೆ ಹಾದುಹೋಗದೆ ಇರಲಿ. ಅಗಾಧವು ನನ್ನನ್ನು ನುಂಗದೆ ಇರಲಿ. ಕುಣಿಯು ನನ್ನ ಮೇಲೆ ತನ್ನ ಬಾಯನ್ನು ಮುಚ್ಚದೆ ಇರಲಿ.


ನೆಲವಿಲ್ಲದಿರುವ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತಿದ್ದೇನೆ. ಪ್ರವಾಹಗಳು ನನ್ನ ಮೇಲೆ ಹಾದುಹೋಗುವ ನೀರಿನ ಅಗಾಧಕ್ಕೆ ನಾನು ಬಂದಿದ್ದೇನೆ.


ಗಿಲ್ಯಾದ್ಯರು ಎಫ್ರಾಯೀಮ್ಯರಿಗೆ ಮುಂದುಗಡೆ ಯೊರ್ದನ್ ನದಿ ರೇವುಗಳನ್ನು ಹಿಡಿದರು. ಆಗ ಏನಾಯಿತೆಂದರೆ, ಎಫ್ರಾಯೀಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು, “ದಾಟುತ್ತೇನೆ,” ಎಂದು ಹೇಳಿದರೆ, ಗಿಲ್ಯಾದ್ಯರು, “ನೀನು ಎಫ್ರಾಯೀಮ್ಯನೋ?” ಎಂದು ಅವನನ್ನು ಕೇಳುತ್ತಿದ್ದರು. ಅವನು, “ಇಲ್ಲ,” ಎಂದರೆ, ಅವನಿಗೆ, “ನೀನು ಷಿಬ್ಬೋಲೆತ್ ಅನ್ನು,” ಎಂದು ಹೇಳುತ್ತಿದ್ದರು.


ಯೆಫ್ತಾಹನು ಇಸ್ರಾಯೇಲರಿಗೆ ಆರು ವರ್ಷ ನ್ಯಾಯತೀರಿಸಿದನು. ಅನಂತರ ಗಿಲ್ಯಾದ್ಯನಾದ ಯೆಫ್ತಾಹನು ಮರಣಹೊಂದಿದನು. ಅವನ ಶವವನ್ನು ಗಿಲ್ಯಾದ್ ಪಟ್ಟಣಗಳ ಒಂದರಲ್ಲಿ ಸಮಾಧಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು