Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:1 - ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರು ತಿರುಗಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ, ಯೆಹೋವ ದೇವರು ಅವರನ್ನು ನಾಲ್ವತ್ತು ವರ್ಷದವರೆಗೆ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದುದರಿಂದ ಆತನು ಅವರನ್ನು ನಲ್ವತ್ತು ವರ್ಷಗಳ ಕಾಲ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರು ಮತ್ತೊಮ್ಮೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದುದರಿಂದ ಅವರನ್ನು ನಾಲ್ವತ್ತು ವರ್ಷಗಳ ತನಕ ಫಿಲಿಷ್ಟಿಯರ ಕೈಗೆ ಒಪ್ಪಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಲ್ವತ್ತು ವರುಷಗಳ ತನಕ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲರು ಮತ್ತೆ ಯೆಹೋವನಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಆದ್ದರಿಂದ ಫಿಲಿಷ್ಟಿಯರು ನಲವತ್ತು ವರ್ಷ ಅವರನ್ನು ಆಳುವಂತೆ ಯೆಹೋವನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:1
16 ತಿಳಿವುಗಳ ಹೋಲಿಕೆ  

“ಆದರೆ ಅವರು ತಮ್ಮ ದೇವರಾದ ಯೆಹೋವ ದೇವರನ್ನು ಮರೆತು ಹೋದಾಗ, ದೇವರು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ, ಫಿಲಿಷ್ಟಿಯರಿಗೂ, ಮೋವಾಬ್ ರಾಜನಿಗೂ ಮಾರಿಬಿಟ್ಟರು.


ಇಸ್ರಾಯೇಲರು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ಆದ್ದರಿಂದ ಯೆಹೋವ ದೇವರು ಅವರನ್ನು ಏಳು ವರ್ಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟರು.


ದೇವರು, “ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲ ಕೊಡುವರು.”


ಇಸ್ರಾಯೇಲರು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತು, ಬಾಳನನ್ನೂ ಅಶೇರನನ್ನೂ ಸೇವಿಸಿದರು.


ಇಸ್ರಾಯೇಲರು ಯೆಹೋವ ದೇವರ ಮುಂದೆ ಕೆಟ್ಟತನ ಮಾಡಿ, ಬಾಳನನ್ನು ಸೇವಿಸಿ,


ಇಸ್ರಾಯೇಲರು ಪುನಃ ಯೆಹೋವ ದೇವರ ಮುಂದೆ ಕೆಟ್ಟತನವನ್ನು ಮಾಡಿ, ಬಾಳನನ್ನೂ, ಅಷ್ಟೋರೆತನ್ನೂ, ಅರಾಮ್ ದೇಶದ ದೇವರುಗಳನ್ನೂ, ಸೀದೋನಿನ ದೇವರುಗಳನ್ನೂ, ಮೋವಾಬಿನ ದೇವರುಗಳನ್ನೂ, ಅಮ್ಮೋನಿಯರ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸಿದರು.


ಏಹೂದನು ಮರಣಹೊಂದಿದನಂತರ ಇಸ್ರಾಯೇಲರು ತಿರುಗಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು.


ಕೂಷ್ಯನು ತನ್ನ ಚರ್ಮವನ್ನೂ, ಚಿರತೆಯು ತನ್ನ ಮಚ್ಚೆಯನ್ನೂ ಮಾರ್ಪಡಿಸುವುದಕ್ಕಾಗುವುದೋ? ಹಾಗಾದರೆ ಕೆಟ್ಟತನದ ಅಭ್ಯಾಸವುಳ್ಳವರಾದ ನೀವೂ ಸಹ ಒಳ್ಳೆಯದನ್ನು ಮಾಡುವುದಕ್ಕಾದೀತೇ?


ಇನ್ನೂ ಏನು ಹೇಳಬೇಕು? ಗಿಡಿಯೋನ್, ಬಾರಾಕ್, ಸಂಸೋನ್, ಎಪ್ತಾಹ, ದಾವೀದ, ಸಮುಯೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವುದಕ್ಕೆ ನನಗೆ ಸಮಯ ಸಾಲದು.


ಪಿರಾತೋನ್ಯನಾದ ಹಿಲ್ಲೇಲನ ಮಗನಾದ ಅಬ್ದೋನನು ಮರಣಹೊಂದಿ, ಎಫ್ರಾಯೀಮ್ ದೇಶದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಅವನ ಶವವನ್ನು ಸಮಾಧಿಮಾಡಿದರು.


ಆಗ ಯೆಹೂದದಲ್ಲಿ ಮೂರು ಸಾವಿರ ಜನರು ಏಟಾಮ್ ಬಂಡೆಯ ಮೇಲಕ್ಕೆ ಏರಿಹೋಗಿ, ಸಂಸೋನನಿಗೆ, “ಫಿಲಿಷ್ಟಿಯರು ನಮ್ಮನ್ನು ಆಳುತ್ತಾ ಇದ್ದಾರೆಂದು ನಿನಗೆ ಗೊತ್ತಿಲ್ಲವೋ? ನೀನು ನಮಗೆ ಹೀಗೆ ಏಕೆ ಮಾಡಿದೆ?” ಎಂದರು. ಅದಕ್ಕವನು, “ಅವರು ನನಗೆ ಮಾಡಿದ ಪ್ರಕಾರವೇ, ನಾನು ಅವರಿಗೆ ಮಾಡಿದೆನು,” ಎಂದು ಅವರಿಗೆ ಹೇಳಿದನು.


ಸಂಸೋನನು ಫಿಲಿಷ್ಟಿಯರ ದಿವಸಗಳಲ್ಲಿ ಇಪ್ಪತ್ತು ವರ್ಷ ಇಸ್ರಾಯೇಲಿಗೆ ನ್ಯಾಯತೀರಿಸಿದನು.


ಫಿಲಿಷ್ಟಿಯರೇ, ನೀವು ಬಲಗೊಂಡು ಶೂರರಾಗಿರಿ. ಹಿಬ್ರಿಯರು ನಿಮಗೆ ಗುಲಾಮರಾಗಿ ಮಾಡಿದ ಪ್ರಕಾರ ನೀವು ಅವರಿಗೆ ಗುಲಾಮರಾಗದ ಹಾಗೆ ಶೂರರಾಗಿ ಇದ್ದು, ಯುದ್ಧಮಾಡಿರೆಂದು ಹೇಳಿಕೊಂಡರು.


ಫಿಲಿಷ್ಟಿಯರು ಸೋತುಹೋದುದರಿಂದ ಇಸ್ರಾಯೇಲಿನ ಮೇರೆಯಲ್ಲಿ ಬರಲೇ ಇಲ್ಲ. ಇದಲ್ಲದೆ ಸಮುಯೇಲನು ಇದ್ದ ದಿವಸಗಳೆಲ್ಲಾ ಯೆಹೋವ ದೇವರ ಕೈ ಫಿಲಿಷ್ಟಿಯರಿಗೆ ವಿರೋಧವಾಗಿತ್ತು.


ಅವರು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ಯೆಹೋವ ದೇವರು ಇಸ್ರಾಯೇಲ್ಯರ ಮೇಲೆ ಕೋಪವುಳ್ಳವರಾಗಿ ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಮಾರಿಬಿಟ್ಟರು.


ಇದು ಯೆಹೋವ ದೇವರಿಂದ ಉಂಟಾಯಿತೆಂದು ಅವನ ತಂದೆತಾಯಂದಿರು ಅರಿಯದೆ ಇದ್ದರು. ಏಕೆಂದರೆ ಫಿಲಿಷ್ಟಿಯರಿಗೆ ವಿರೋಧವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರನ್ನು ಆಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು