Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:14 - ಕನ್ನಡ ಸಮಕಾಲಿಕ ಅನುವಾದ

14 ದ್ರಾಕ್ಷಿ ಗಿಡದಲ್ಲಿ ಹುಟ್ಟುವ ಒಂದನ್ನೂ ತಿನ್ನದೆ, ದ್ರಾಕ್ಷಾರಸವನ್ನೂ, ಮದ್ಯವನ್ನೂ ಕುಡಿಯದೆ, ಅಶುಚಿಯಾದ ಒಂದನ್ನೂ ತಿನ್ನದೆ ಇದ್ದು, ನಾನು ಅವಳಿಗೆ ಆಜ್ಞಾಪಿಸಿದ್ದೆಲ್ಲಾ ಕೈಗೊಳ್ಳಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದ್ರಾಕ್ಷಾಫಲವನ್ನು ತಿನ್ನದಿರಲಿ; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರಲಿ; ನಿಷಿದ್ಧಾಹಾರವನ್ನು ಮುಟ್ಟದಿರಲಿ; ಹೀಗೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಕೈಕೊಳ್ಳಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದ್ರಾಕ್ಷಾಫಲವನ್ನು ತಿನ್ನದಿರಲಿ; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರಲಿ; ನಿಷಿದ್ಧಾಹಾರವನ್ನು ಮುಟ್ಟದಿರಲಿ; ಹೀಗೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಕೈಗೊಳ್ಳಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದ್ರಾಕ್ಷಾಫಲವನ್ನು ತಿನ್ನದಿರಲಿ; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರಲಿ; ನಿಷಿದ್ಧಾಹಾರವನ್ನು ಮುಟ್ಟದಿರಲಿ; ಹೀಗೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಕೈಕೊಳ್ಳಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವಳು ನಿಷಿದ್ಧವಾದ ಯಾವ ಆಹಾರವನ್ನೂ ತಿನ್ನಬಾರದು. ಹೀಗೆ ನಾನು ಅವಳಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:14
10 ತಿಳಿವುಗಳ ಹೋಲಿಕೆ  

ಯೇಸುವಿನ ತಾಯಿಯು ಸೇವಕರಿಗೆ, “ಆತನು ನಿಮಗೆ ಹೇಳಿದಂತೆ ಮಾಡಿರಿ,” ಎಂದು ಹೇಳಿದಳು.


ನಾನು ನಿಮಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಕಾಪಾಡಿ ಕೈಗೊಳ್ಳಬೇಕು. ಅದಕ್ಕೆ ಏನೂ ಕೂಡಿಸಬಾರದು. ಅದರಿಂದ ಏನನ್ನೂ ತೆಗೆದುಹಾಕಬಾರದು.


ನಾವು ನಿಮಗೆ ಆಜ್ಞಾಪಿಸಿದವುಗಳನ್ನು ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ ನಿಮ್ಮ ವಿಷಯವಾಗಿ ಕರ್ತ ಯೇಸುವಿನಲ್ಲಿ ನಮಗೆ ಭರವಸೆಯಿದೆ.


ಆದ್ದರಿಂದ ನೀನು ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ, ಅಶುಚಿಯಾದ ಒಂದನ್ನಾದರೂ ತಿನ್ನದೆ, ಎಚ್ಚರಿಕೆಯಾಗಿರಬೇಕು.


ನಾನು ನಿಮಗೆ ಆಜ್ಞಾಪಿಸಿದ್ದನ್ನು ಪಾಲಿಸಿದರೆ ನೀವು ನನ್ನ ಸ್ನೇಹಿತರು.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ಅವನು ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ; ಈಗ ನೀನು ದ್ರಾಕ್ಷಾರಸವನ್ನೂ, ಮದ್ಯವನ್ನೂ ಕುಡಿಯದೆ, ಅಶುದ್ಧವಾದ ಒಂದನ್ನಾದರೂ ತಿನ್ನದೆ ಇರು. ಏಕೆಂದರೆ ಆ ಹುಡುಗನು ಹುಟ್ಟಿದಂದಿನಿಂದ ಮರಣಹೊಂದುವವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು,’ ಎಂದಳು.”


ತಮ್ಮ ನಾಜೀರತನದ ದಿವಸಗಳಲ್ಲೆಲ್ಲಾ ದ್ರಾಕ್ಷಿ ಬೀಜ ಮೊದಲುಗೊಂಡು ಸಿಪ್ಪೆಯವರೆಗೂ, ದ್ರಾಕ್ಷಿಬಳ್ಳಿಯಲ್ಲಿ ಬೆಳೆದದ್ದು ಯಾವುದನ್ನಾದರೂ ತಿನ್ನಬಾರದು.


ಆದರೆ ಅವರು, “ನಾವು ದ್ರಾಕ್ಷಾರಸ ಕುಡಿಯುವುದಿಲ್ಲ; ಏಕೆಂದರೆ ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ ಈ ಆಜ್ಞೆಯನ್ನು ಕೊಟ್ಟನು. ಅದು ಏನೆಂದರೆ ನೀವಾದರೂ, ನಿಮ್ಮ ಮಕ್ಕಳಾದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯಬೇಡಿರಿ;


“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ: ‘ಪುರುಷನಾದರೂ, ಸ್ತ್ರೀಯಾದರೂ ಯೆಹೋವ ದೇವರಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರ ವ್ರತ ಕೈಗೊಂಡರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು