Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:16 - ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರ ದೂತನು ಮಾನೋಹನಿಗೆ, “ನೀನು ನನ್ನನ್ನು ನಿಲ್ಲಿಸಿಕೊಂಡರೂ, ನಾನು ನಿನ್ನ ರೊಟ್ಟಿಯನ್ನು ತಿನ್ನುವುದಿಲ್ಲ; ನೀನು ದಹನಬಲಿಯನ್ನು ಅರ್ಪಿಸಿದರೆ, ಅದನ್ನು ಯೆಹೋವ ದೇವರಿಗೆ ಅರ್ಪಿಸಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನ ದೂತನು ಮಾನೋಹನಿಗೆ, “ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವುದಿಲ್ಲ; ಯಜ್ಞಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಯೆಹೋವನಿಗೆ ಸಮರ್ಪಿಸು” ಅಂದನು. ಅವನು ಯೆಹೋವನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವುದಿಲ್ಲ; ಬಲಿದಾನ ಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಸರ್ವೇಶ್ವರನಿಗೆ ಸಮರ್ಪಿಸು,” ಎಂದನು. ಅವನು ಸರ್ವೇಶ್ವರನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು - ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವದಿಲ್ಲ; ಯಜ್ಞಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಯೆಹೋವನಿಗೆ ಸಮರ್ಪಿಸು ಅಂದನು. ಅವನು ಯೆಹೋವನ ದೂತನೆಂಬದು ಮಾನೋಹನಿಗೆ ಗೊತ್ತಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ಯೆಹೋವನ ದೂತನು ಮಾನೋಹನಿಗೆ, “ನೀನು ನನ್ನನ್ನು ಹೋಗದಂತೆ ನಿಲ್ಲಿಸಿಕೊಂಡರೂ ಸಹ ನಾನು ನಿಮ್ಮ ಆಹಾರವನ್ನು ಊಟ ಮಾಡುವುದಿಲ್ಲ. ಏನಾದರೂ ಕೊಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸು” ಅಂದನು. (ಅವನು ಯೆಹೋವನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:16
5 ತಿಳಿವುಗಳ ಹೋಲಿಕೆ  

ಅವನ ಹೆಂಡತಿ ಅವನಿಗೆ, “ಯೆಹೋವ ದೇವರು ನಮ್ಮನ್ನು ಕೊಲ್ಲಬೇಕೆಂದಿದ್ದರೆ, ಅವರು ನಮ್ಮ ಕೈಯಿಂದ ದಹನಬಲಿಯನ್ನೂ, ಅರ್ಪಣೆಯನ್ನೂ ಸ್ವೀಕರಿಸುತ್ತಿರಲಿಲ್ಲ; ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ. ಈಗ ಹೇಳಿದವುಗಳನ್ನು ನಮಗೆ ತಿಳಿಯಮಾಡುತ್ತಿರಲಿಲ್ಲ,” ಎಂದಳು.


ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಆ ಎರಡನೆಯ ಹೋರಿಯನ್ನು ತಂದು, ನೀನು ಕಡಿದುಹಾಕಿದ ಅಶೇರ ಸ್ತಂಭವನ್ನು ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು,” ಎಂದರು.


ದೇವದೂತನು ಅವನಿಗೆ, “ನೀನು ಮಾಂಸವನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ತೆಗೆದುಕೊಂಡು ಈ ಬಂಡೆಯ ಮೇಲೆ ಇಟ್ಟು, ರಸವನ್ನು ಸುರಿ,” ಎಂದನು. ಅವನು ಹಾಗೆಯೇ ಮಾಡಿದನು.


ನಾನು ಸ್ವಲ್ಪ ಆಹಾರವನ್ನು ತರುತ್ತೇನೆ. ತರುವಾಯ ನೀವು ಮುಂದೆ ಹೊರಟು ಹೋಗಬಹುದು. ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ,” ಎಂದು ಬೇಡಿಕೊಂಡನು. ಅದಕ್ಕೆ ಅವರು, “ನೀನು ಹೇಳಿದಂತೆಯೇ ಮಾಡು,” ಎಂದರು.


ಯೆಹೋವ ದೇವರ ದೂತನು ಮಾನೋಹನಿಗೂ, ಅವನ ಹೆಂಡತಿಗೂ ತಿರುಗಿ ಕಾಣಿಸಲಿಲ್ಲ. ಆಗ ಮಾನೋಹನು, ಅವನು ದೇವರ ದೂತನು ಎಂದು ತಿಳಿದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು