Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:23 - ಕನ್ನಡ ಸಮಕಾಲಿಕ ಅನುವಾದ

23 ಅವನ ಹೆಂಡತಿ ಅವನಿಗೆ, “ಯೆಹೋವ ದೇವರು ನಮ್ಮನ್ನು ಕೊಲ್ಲಬೇಕೆಂದಿದ್ದರೆ, ಅವರು ನಮ್ಮ ಕೈಯಿಂದ ದಹನಬಲಿಯನ್ನೂ, ಅರ್ಪಣೆಯನ್ನೂ ಸ್ವೀಕರಿಸುತ್ತಿರಲಿಲ್ಲ; ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ. ಈಗ ಹೇಳಿದವುಗಳನ್ನು ನಮಗೆ ತಿಳಿಯಮಾಡುತ್ತಿರಲಿಲ್ಲ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದರೆ ಆಕೆಯು ಅವನಿಗೆ, “ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಯಜ್ಞವನ್ನೂ, ನೈವೇದ್ಯವನ್ನೂ ಸ್ವೀಕರಿಸುತ್ತಿರಲಿಲ್ಲ; ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ, ಹೇಳುತ್ತಿರಲಿಲ್ಲ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ದೇವರನ್ನು ಕಣ್ಣಾರೆ ಕಂಡೆವಲ್ಲಾ!” ಎಂದನು. ಆಕೆ ಅವನಿಗೆ, “ಸರ್ವೇಶ್ವರ ನಮ್ಮನ್ನು ಕೊಲ್ಲಬೇಕೆಂದಿದ್ದರೆ ಅವರು ನಮ್ಮ ಕೈಯಿಂದ ಬಲಿಯನ್ನೂ ನೈವೇದ್ಯವನ್ನೂ ಸ್ವೀಕರಿಸುತ್ತಿರಲಿಲ್ಲ. ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ; ಹೇಳುತ್ತಿರಲಿಲ್ಲ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಕೆಯು ಅವನಿಗೆ - ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಯಜ್ಞವನ್ನೂ ನೈವೇದ್ಯವನ್ನೂ ಸ್ವೀಕರಿಸುತ್ತಿದ್ದಿಲ್ಲ; ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿದ್ದಿಲ್ಲ, ಹೇಳುತ್ತಿದ್ದಿಲ್ಲ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಅವನ ಹೆಂಡತಿಯು ಅವನಿಗೆ, “ಯೆಹೋವನು ನಮ್ಮನ್ನು ಕೊಲ್ಲಬಯಸುವುದಿಲ್ಲ. ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಸ್ವೀಕರಿಸುತ್ತಿರಲಿಲ್ಲ; ಆತನು ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ; ಇದನ್ನೆಲ್ಲ ನಮಗೆ ಹೇಳುತ್ತಿರಲಿಲ್ಲ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:23
12 ತಿಳಿವುಗಳ ಹೋಲಿಕೆ  

ಕಣ್ಣು ಕೈಗೆ, “ನೀನು ನನಗೆ ಅವಶ್ಯವಿಲ್ಲ!” ಎಂದು ಹೇಳಲಾಗದು. ತಲೆಯು ಕಾಲುಗಳಿಗೆ, “ನೀನು ನನಗೆ ಅವಶ್ಯವಿಲ್ಲ!” ಎಂದು ಹೇಳಲಾಗದು.


ಯೆಹೋವ ದೇವರ ರಹಸ್ಯವು ಅವರಿಗೆ ಭಯಪಡುವವರೊಂದಿಗೆ ಇರುವುದು; ತಮ್ಮ ಒಡಂಬಡಿಕೆಯನ್ನು ಅವರು ಅಂಥವರಿಗೇ ತಿಳಿಸುವರು.


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ. ಏಕೆಂದರೆ ತನ್ನ ಧಣಿಯು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.


ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.


ನನಗಾಗಿ ನಿಮ್ಮ ಉಪಕಾರದ ಗುರುತೊಂದನ್ನು ತೋರಿಸಿರಿ. ಆಗ ನನ್ನ ವೈರಿಗಳು ಅದನ್ನು ಕಂಡು ನಾಚಿಕೆಪಡುವರು. ಏಕೆಂದರೆ ಯೆಹೋವ ದೇವರೇ, ನೀವು ನನಗೆ ಸಹಾಯಮಾಡಿ ನನ್ನನ್ನು ಆದರಿಸಿದ್ದೀರಿ.


ಏಕೆಂದರೆ ವಕ್ರಬುದ್ಧಿ ಯೆಹೋವ ದೇವರಿಗೆ ಅಸಹ್ಯ; ಆದರೆ ದೇವರ ನಂಬಿಗಸ್ತಿಕೆ ನೀತಿವಂತರೊಂದಿಗೆ ಇದೆ.


ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ಅವನು ನನ್ನ ವಾಕ್ಯವನ್ನು ಕೈಗೊಳ್ಳುವನು. ನನ್ನ ತಂದೆಯು ಅವನನ್ನು ಪ್ರೀತಿಸುವರು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಿವಾಸಮಾಡಿಕೊಳ್ಳುವೆವು.


ಇದೊಂದು ನನ್ನ ಭರವಸೆಯಾಗಿರುವುದು: ನಾನಂತೂ ಯೆಹೋವ ದೇವರ ಒಳಿತನ್ನು ಜೀವಿತರ ದೇಶದಲ್ಲಿ ಕಾಣುವೆನು.


ಆ ಸ್ತ್ರೀಯು ಮಗನನ್ನು ಹೆತ್ತು, ಅವನಿಗೆ ಸಂಸೋನ ಎಂದು ಹೆಸರಿಟ್ಟಳು. ಆ ಹುಡುಗನು ಬೆಳೆದನು. ಯೆಹೋವ ದೇವರು ಅವನನ್ನು ಆಶೀರ್ವದಿಸಿದರು.


ದೇವರು ನಿಮ್ಮ ಹೃದಯದ ಬಯಕೆಯನ್ನು ನಿಮಗೆ ದಯಪಾಲಿಸಲಿ; ನಿಮ್ಮ ಎಲ್ಲಾ ಯೋಜನೆಗಳಲ್ಲಿಯೂ ಯಶಸ್ಸನ್ನು ನೀಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು