Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:5 - ಕನ್ನಡ ಸಮಕಾಲಿಕ ಅನುವಾದ

5 ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವೆ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರಬಾರದು. ಏಕೆಂದರೆ ಗರ್ಭದಿಂದಲೇ ಆ ಹುಡುಗನು ದೇವರಿಗೆ ಪ್ರತಿಷ್ಠಿತನಾದ ನಾಜೀರನಾಗಿರುವನು. ಅವನು ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ, ರಕ್ಷಿಸಲು ಪ್ರಾರಂಭಿಸುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಲು ಪ್ರಾರಂಭಿಸುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇ ಬಾರದು. ಅವನು ಹುಟ್ಟಿನಿಂದ ದೇವರಿಗೆ ಪ್ರತಿಷ್ಠಿತನಾಗುವನು. ಅವನು ಇಸ್ರಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸುವುದಕ್ಕೆ ಪ್ರಾರಂಭಿಸುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸುವದಕ್ಕೆ ಪ್ರಾರಂಭಿಸುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಏಕೆಂದರೆ ನೀನು ಗರ್ಭವತಿಯಾಗಿರುವೆ ಮತ್ತು ನಿನಗೊಬ್ಬ ಮಗನು ಹುಟ್ಟಲಿದ್ದಾನೆ. ಅವನು ಹುಟ್ಟಿದಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾಗಿದ್ದಾನೆ. ಆದ್ದರಿಂದ ಅವನ ಕೂದಲನ್ನು ಕತ್ತರಿಸಕೂಡದು. ಅವನು ಇಸ್ರೇಲರನ್ನು ಫಿಲಿಷ್ಟಿಯರ ಹಿಡಿತದಿಂದ ಬಿಡಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:5
9 ತಿಳಿವುಗಳ ಹೋಲಿಕೆ  

“ ‘ಅವರ ನಾಜೀರ ವ್ರತದ ದಿನಗಳಲ್ಲೆಲ್ಲಾ ಕ್ಷೌರಮಾಡಿಸಿಕೊಳ್ಳಬಾರದು. ಅವರು ಯೆಹೋವ ದೇವರಿಗೆ ತಮ್ಮನ್ನು ಪ್ರತ್ಯೇಕಿಸಿಕೊಂಡ ದಿವಸಗಳು ಪೂರ್ತಿಯಾಗುವವರೆಗೆ ಅವರು ಪರಿಶುದ್ಧರಾಗಿರುವರು, ಅವರು ತಮ್ಮ ತಲೆಗೂದಲನ್ನು ಕತ್ತರಿಸದೇ ಬೆಳೆಯಬಿಡಬೇಕು.


ಹರಕೆಮಾಡಿ, “ಸೇನಾಧೀಶ್ವರ ಯೆಹೋವ ದೇವರೇ, ನೀವು ನಿಶ್ಚಯವಾಗಿ ನಿಮ್ಮ ದಾಸಿಯ ದೀನತೆಯನ್ನು ಕಂಡು, ನಿಮ್ಮ ದಾಸಿಯನ್ನು ಮರೆಯದೆ, ನನ್ನನ್ನು ನೆನಸಿ, ನಿಮ್ಮ ದಾಸಿಗೆ ಗಂಡು ಮಗುವನ್ನು ಕೊಟ್ಟರೆ, ಅವನು ಬದುಕುವ ಸಕಲ ದಿವಸಗಳಲ್ಲಿ ಅವನನ್ನು ಯೆಹೋವ ದೇವರಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರಿಕನ ಕತ್ತಿ ಬೀಳುವುದಿಲ್ಲ,” ಎಂದಳು.


ಇದರ ತರುವಾಯ ದಾವೀದನು ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಅದರ ಸುತ್ತಲಿನ ಗ್ರಾಮಗಳನ್ನೂ ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.


ಫಿಲಿಷ್ಟಿಯರು ಸೋತುಹೋದುದರಿಂದ ಇಸ್ರಾಯೇಲಿನ ಮೇರೆಯಲ್ಲಿ ಬರಲೇ ಇಲ್ಲ. ಇದಲ್ಲದೆ ಸಮುಯೇಲನು ಇದ್ದ ದಿವಸಗಳೆಲ್ಲಾ ಯೆಹೋವ ದೇವರ ಕೈ ಫಿಲಿಷ್ಟಿಯರಿಗೆ ವಿರೋಧವಾಗಿತ್ತು.


ಇದರ ತರುವಾಯ ದಾವೀದನು ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿ, ಅವರಿಂದ ಮೇತೆಗ್ ಅಮ್ಮಹವನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.


ಅವನು ಕರ್ತದೇವರ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಕುಡಿಯುವುದಿಲ್ಲ, ಅವನು ತಾಯಿಯ ಗರ್ಭದಿಂದಲೇ ಪವಿತ್ರಾತ್ಮ ಭರಿತನಾಗಿರುವನು.


ಅವನು ತನ್ನ ಹೃದಯವನ್ನೆಲ್ಲಾ ಅವಳಿಗೆ ತಿಳಿಸಿ, ಅವಳಿಗೆ, “ಕ್ಷೌರದ ಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ಏಕೆಂದರೆ ನಾನು ನನ್ನ ತಾಯಿಯ ಗರ್ಭದಲ್ಲಿಂದ ದೇವರಿಗೆ ಪ್ರತಿಷ್ಠಿತನಾದ ನಾಜೀರನಾಗಿದ್ದೇನೆ. ನನ್ನ ತಲೆಯನ್ನು ಬೋಳಿಸಿದರೆ, ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗುವುದು; ನಾನು ಬಲಹೀನನಾಗಿ ಎಲ್ಲಾ ಮನುಷ್ಯರ ಹಾಗೆ ಇರುವೆನು,” ಎಂದನು.


“ನಾನು ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನೂ ಎಬ್ಬಿಸಿದೆನು. ಇಸ್ರಾಯೇಲಿನ ಜನರೇ, ಇದು ಸರಿಯಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು