Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:7 - ಕನ್ನಡ ಸಮಕಾಲಿಕ ಅನುವಾದ

7 ಅವನು ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ; ಈಗ ನೀನು ದ್ರಾಕ್ಷಾರಸವನ್ನೂ, ಮದ್ಯವನ್ನೂ ಕುಡಿಯದೆ, ಅಶುದ್ಧವಾದ ಒಂದನ್ನಾದರೂ ತಿನ್ನದೆ ಇರು. ಏಕೆಂದರೆ ಆ ಹುಡುಗನು ಹುಟ್ಟಿದಂದಿನಿಂದ ಮರಣಹೊಂದುವವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು,’ ಎಂದಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ; ಆದುದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು, ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಹುಡುಗನು ಹುಟ್ಟಿದಂದಿನಿಂದ ಸಾಯುವ ವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು’ ಎಂದು ಹೇಳಿದನು” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ಆತ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ; ಆದ್ದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು. ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಮಗು ಹುಟ್ಟಿದಂದಿನಿಂದ ಸಾಯುವವರೆಗೆ ಪ್ರತಿಷ್ಠಿತನಾಗಿರುವನು,’ ಎಂದು ಹೇಳಿದನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ನನಗೆ - ನೀನು ಗರ್ಭವತಿಯಾಗಿ ಮಗನನ್ನು ಹೆರುವಿ; ಆದದರಿಂದ ನೀನು ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು, ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಹುಡುಗನು ಹುಟ್ಟಿದಂದಿನಿಂದ ಸಾಯುವವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಅವನು ನನಗೆ, ‘ನೀನು ಗರ್ಭವತಿಯಾಗಿರುವೆ; ನಿನಗೊಬ್ಬ ಮಗನು ಹುಟ್ಟುತ್ತಾನೆ. ನೀನು ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯಬೇಡ. ಯಾವ ನಿಷಿದ್ಧ ಆಹಾರವನ್ನೂ ತಿನ್ನಬೇಡ. ಏಕೆಂದರೆ ಆ ಹುಡುಗನು ಹುಟ್ಟಿದಂದಿನಿಂದ ಸಾಯುವವರೆಗೂ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು’” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:7
6 ತಿಳಿವುಗಳ ಹೋಲಿಕೆ  

ಆದ್ದರಿಂದ ನೀನು ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ, ಅಶುಚಿಯಾದ ಒಂದನ್ನಾದರೂ ತಿನ್ನದೆ, ಎಚ್ಚರಿಕೆಯಾಗಿರಬೇಕು.


“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ: ‘ಪುರುಷನಾದರೂ, ಸ್ತ್ರೀಯಾದರೂ ಯೆಹೋವ ದೇವರಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರ ವ್ರತ ಕೈಗೊಂಡರೆ,


ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆ, “ಒಬ್ಬ ದೇವರ ಮನುಷ್ಯ ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾ ಭಯಂಕರವಾಗಿತ್ತು. ನಾನು ಅವನನ್ನು ಎಲ್ಲಿಂದ ಬಂದೆ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.


ಆಗ ಮಾನೋಹನು ಯೆಹೋವ ದೇವರಿಗೆ ಬೇಡಿಕೊಂಡು, “ನನ್ನ ಕರ್ತದೇವರೇ, ನೀವು ಕಳುಹಿಸಿದ ದೇವರ ಮನುಷ್ಯನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು, ಹುಟ್ಟುವ ಕೂಸಿಗೋಸ್ಕರ ನಾವು ಮಾಡಬೇಕಾದದ್ದನ್ನು ನಮಗೆ ಕಲಿಸಲಿ,” ಎಂದು ಪ್ರಾರ್ಥಿಸಿದನು.


ಆದರೆ ಅವರು, “ನಾವು ದ್ರಾಕ್ಷಾರಸ ಕುಡಿಯುವುದಿಲ್ಲ; ಏಕೆಂದರೆ ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ ಈ ಆಜ್ಞೆಯನ್ನು ಕೊಟ್ಟನು. ಅದು ಏನೆಂದರೆ ನೀವಾದರೂ, ನಿಮ್ಮ ಮಕ್ಕಳಾದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯಬೇಡಿರಿ;


“ನಾನು ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನೂ ಎಬ್ಬಿಸಿದೆನು. ಇಸ್ರಾಯೇಲಿನ ಜನರೇ, ಇದು ಸರಿಯಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು