Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:14 - ಕನ್ನಡ ಸಮಕಾಲಿಕ ಅನುವಾದ

14 ಆಗ ಅವನು ಅವರಿಗೆ ಹೇಳಿದ್ದೇನೆಂದರೆ, “ತಿಂದು ಬಿಡುವಂಥದ್ದರಿಂದ ತಿನ್ನತಕ್ಕದ್ದು ಹೊರಟಿತು. ಬಲಿಷ್ಠವಾದದ್ದರಿಂದ ಸಿಹಿಯು ಹೊರಟಿತು.” ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಅವನು, “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು; ಕ್ರೂರವಾದದ್ದರಿಂದ ಮಧುರವಾದದ್ದು ಹುಟ್ಟಿತು” ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಡಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಅವನು, “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು ಕ್ರೂರವಾದದ್ದರಿಂದ ಮಧುರವಾದದ್ದು ಸಿಕ್ಕಿತು” ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಡಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಅವನು - ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು; ಕ್ರೂರವಾದದ್ದರಿಂದ ಮಧುರವಾದದ್ದು ಸಿಕ್ಕಿತು ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಚ್ಚಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸಂಸೋನನು ಅವರಿಗೆ ಈ ಒಗಟನ್ನು ಹೇಳಿದನು: “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು. ಕ್ರೂರವಾದದ್ದರಿಂದ ಮಧುರವಾದದ್ದು ಸಿಕ್ಕಿತು.” ಆ ಮೂವತ್ತು ಜನರು ಮೂರು ದಿನಗಳವರೆಗೆ ಒಗಟಿನ ಅರ್ಥವನ್ನು ಕಂಡುಹಿಡಿಯಲು ಪ್ರಯತ್ನ ಮಾಡಿದರು. ಆದರೆ ಅವರಿಂದ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:14
20 ತಿಳಿವುಗಳ ಹೋಲಿಕೆ  

ಕಾಗೆಗಳು ಅವನಿಗೆ ಉದಯಕಾಲದಲ್ಲಿ ರೊಟ್ಟಿಯನ್ನೂ, ಮಾಂಸವನ್ನೂ, ಸಂಜೆಯಲ್ಲಿ ರೊಟ್ಟಿಯನ್ನೂ, ಮಾಂಸವನ್ನೂ ತೆಗೆದುಕೊಂಡು ಬಂದವು, ಅವನು ಆ ಹೊಳೆಯ ನೀರನ್ನು ಕುಡಿದನು.


ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ.


ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


ಹಗುರವಾಗಿಯೂ ಕ್ಷಣಿಕವಾಗಿಯೂ ಇರುವ ನಮ್ಮ ಸಂಕಟವು ಅತ್ಯಂತ ಘನತೆಯುಳ್ಳ ನಿತ್ಯ ಮಹಿಮೆಯನ್ನು ನಮಗೆ ದೊರಕಿಸಿಕೊಡುವುದು.


ಅವನು, “ಯಾರಾದರೊಬ್ಬರು ಅದನ್ನು ವಿವರಿಸದಿದ್ದರೆ ನನಗೆ ಅರ್ಥವಾಗುವುದು ಹೇಗೆ?” ಎಂದು ಹೇಳಿ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಮಂತ್ರಿಸಿದನು.


ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ.


ಜ್ಞಾನವು ಬುದ್ಧಿಹೀನನಿಗೆ ನಿಲುಕದು; ಪುರದ್ವಾರದಲ್ಲಿ ಕೂಡಿಬಂದ ಸಭೆಯಲ್ಲಿ ಅವನು ತನ್ನ ಬಾಯಿಯನ್ನು ತೆರೆಯುವುದೇ ಇಲ್ಲ.


ಯೆಹೋಷಾಫಾಟನೂ, ಅವನ ಜನರೂ ಅವರ ವಸ್ತ್ರಗಳನ್ನೂ, ವಸ್ತುಗಳನ್ನೂ ಕೊಳ್ಳೆಮಾಡಲು ಬಂದಾಗ, ಅವರು ಹೆಣಗಳ ಬಳಿಯಲ್ಲಿ ದ್ರವ್ಯವನ್ನೂ, ಆಭರಣಗಳನ್ನೂ ಬಹಳವಾಗಿ ಕಂಡುಕೊಂಡು, ತಾವು ಒಯ್ಯಲಿಕ್ಕಾಗದಷ್ಟು ಹೆಚ್ಚಾಗಿ ಸುಲಿದುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದುದರಿಂದ ಅದನ್ನು ಮೂರು ದಿವಸಗಳವರೆಗೂ ಸುಲಿದುಕೊಳ್ಳುತ್ತಾ ಇದ್ದರು.


ಆಗ ಕೆಲವರು ಬಂದು ಯೆಹೋಷಾಫಾಟನಿಗೆ, “ಅರಾಮಿನ ಈಚೆಯಲ್ಲಿರುವ ಲವಣ ಸಮುದ್ರದ ಆಚೆಯಿಂದ ನಿನಗೆ ವಿರೋಧವಾಗಿ ಮಹಾ ಸಮೂಹವೊಂದು ಬರುತ್ತದೆ. ಅವರು ಏನ್ಗೆದಿ ಎಂಬ ಹಜಜೋನ್ ತಾಮಾರಿನಲ್ಲಿ ಇದ್ದಾರೆ,” ಎಂದು ತಿಳಿಸಿದರು.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ನಿಮ್ಮಿಂದ ಗ್ರಹಿಸಲು ಆಗದೆ ಹೋದರೆ, ನೀವು ನನಗೆ ಮೂವತ್ತು ದುಪ್ಪಟಿಗಳನ್ನು, ಮೂವತ್ತು ಜೊತೆ ಬಟ್ಟೆಗಳನ್ನು ಕೊಡಬೇಕು,” ಎಂದನು. ಅವರು ಅವನಿಗೆ, “ನೀನು ನಿನ್ನ ಒಗಟನ್ನು ಹೇಳು, ಅದನ್ನು ಕೇಳೋಣ,” ಎಂದರು.


ನಾಲ್ಕನೆಯ ದಿವಸದಲ್ಲಿ ಅವರು ಸಂಸೋನನ ಹೆಂಡತಿಗೆ, “ನಾವು ನಿನ್ನನ್ನೂ, ನಿನ್ನ ತಂದೆಯ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡದ ಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರಳುಗೊಳಿಸು. ನೀನು ನಮಗಿರುವುದೆಲ್ಲವನ್ನು ಕಸಿದುಕೊಳ್ಳುವುದಕ್ಕೆ ಅಲ್ಲವೇ ನಮ್ಮನ್ನು ಇಲ್ಲಿಗೆ ಕರೆಸಿದೆ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು