Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:11 - ಕನ್ನಡ ಸಮಕಾಲಿಕ ಅನುವಾದ

11 ಆಗ ಯೆಹೂದದಲ್ಲಿ ಮೂರು ಸಾವಿರ ಜನರು ಏಟಾಮ್ ಬಂಡೆಯ ಮೇಲಕ್ಕೆ ಏರಿಹೋಗಿ, ಸಂಸೋನನಿಗೆ, “ಫಿಲಿಷ್ಟಿಯರು ನಮ್ಮನ್ನು ಆಳುತ್ತಾ ಇದ್ದಾರೆಂದು ನಿನಗೆ ಗೊತ್ತಿಲ್ಲವೋ? ನೀನು ನಮಗೆ ಹೀಗೆ ಏಕೆ ಮಾಡಿದೆ?” ಎಂದರು. ಅದಕ್ಕವನು, “ಅವರು ನನಗೆ ಮಾಡಿದ ಪ್ರಕಾರವೇ, ನಾನು ಅವರಿಗೆ ಮಾಡಿದೆನು,” ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ, “ಫಿಲಿಷ್ಟಿಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದಾರೆ ಎಂಬುದು ನಿನಗೆ ಗೊತ್ತಿಲ್ಲವೋ? ಹೀಗೆ ಯಾಕೆ ಮಾಡಿದಿ?” ಎಂದು ಕೇಳಲು ಅವನು, “ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ, “ಫಿಲಿಷ್ಟಿಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದಾರೆಂಬುದು ನಿನಗೆ ಗೊತ್ತಿಲ್ಲವೇ? ಹೀಗೆ ಏಕೆ ಮಾಡಿದೆ,” ಎಂದು ಕೇಳಲು ಅವನು, “ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ - ಫಿಲಿಷ್ಟಿಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದಾರೆಂಬದು ನಿನಗೆ ಗೊತ್ತಿಲ್ಲವೋ? ಹೀಗೆ ಯಾಕೆ ಮಾಡಿದಿ ಎಂದು ಕೇಳಲು ಅವನು - ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಯೆಹೂದಕುಲದ ಮೂರು ಸಾವಿರ ಜನರು ಸಂಸೋನನಲ್ಲಿಗೆ ಹೋದರು. ಅವರು ಏಟಾಮಿನ ಬಂಡೆಯ ಬಳಿಯಲ್ಲಿದ್ದ ಗುಹೆಗೆ ಬಂದು ಅವನಿಗೆ, “ನೀನು ನಮಗೆ ಮಾಡಿರುವುದೇನು? ಫಿಲಿಷ್ಟಿಯರು ನಮ್ಮನ್ನು ಆಳುತ್ತಿದ್ದಾರೆ ಎಂಬುದು ನಿನಗೆ ಗೊತ್ತಿಲ್ಲವೇ?” ಎಂದು ಕೇಳಿದರು. ಸಂಸೋನನು, “ಅವರು ನನಗೆ ಮಾಡಿದ ದ್ರೋಹಕ್ಕಾಗಿ ನಾನು ಅವರನ್ನು ಶಿಕ್ಷಿಸಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:11
10 ತಿಳಿವುಗಳ ಹೋಲಿಕೆ  

ಇದು ಯೆಹೋವ ದೇವರಿಂದ ಉಂಟಾಯಿತೆಂದು ಅವನ ತಂದೆತಾಯಂದಿರು ಅರಿಯದೆ ಇದ್ದರು. ಏಕೆಂದರೆ ಫಿಲಿಷ್ಟಿಯರಿಗೆ ವಿರೋಧವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರನ್ನು ಆಳುತ್ತಿದ್ದರು.


ಇಸ್ರಾಯೇಲರು ತಿರುಗಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ, ಯೆಹೋವ ದೇವರು ಅವರನ್ನು ನಾಲ್ವತ್ತು ವರ್ಷದವರೆಗೆ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಟ್ಟರು.


ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ನೀವು ಕೇಳಿ ಕಾಪಾಡಿ ಕೈಗೊಂಡರೆ, ಅವರು ಇತರರಿಗೆ ನಿಮ್ಮನ್ನು ಅಧೀನಮಾಡದೆ, ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವರು. ನೀವು ಎಲ್ಲರಿಗಿಂತಲೂ ಮೇಲಿನವರಾಗುವಿರೇ ಹೊರತು ಕೆಳಗಿನವರಾಗಿ ಇರುವುದಿಲ್ಲ.


ಒಡಂಬಡಿಕೆಯನ್ನು ಮುರಿದದ್ದಕ್ಕಾಗಿ, ಮುಯ್ಯಿಗೆ ಮುಯ್ಯಿ ತೀರಿಸುವ ಖಡ್ಗವನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಸೇರಿದಾಗ, ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನಿಮ್ಮನ್ನು ಶತ್ರುವಿನ ಕೈಗೆ ಒಪ್ಪಿಸಲಾಗುವುದು.


ನಿಮ್ಮ ಮಧ್ಯದಲ್ಲಿರುವ ಪರದೇಶದವರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುವರು. ನೀವಾದರೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.


ಯೆಹೂದದಲ್ಲಿ ವಾಸಿಸುವ ಜನರು ಅವರಿಗೆ, “ನೀವು ನಮಗೆ ವಿರೋಧವಾಗಿ ಬಂದದ್ದೇನು?” ಎಂದರು. ಫಿಲಿಷ್ಟಿಯರು, “ಸಂಸೋನನು ನಮಗೆ ಮಾಡಿದ ಹಾಗೆ ನಾವು ಅವನಿಗೆ ಪ್ರತಿಯಾಗಿ ಮಾಡುವುದಕ್ಕೆ, ಅವನನ್ನು ಹಿಡಿದು ಕಟ್ಟುವುದಕ್ಕೆ ಬಂದೆವು,” ಎಂದರು.


ಆಗ ಅವರು ಅವನಿಗೆ, “ನಾವು ನಿನ್ನನ್ನು ಕಟ್ಟಿ, ಫಿಲಿಷ್ಟಿಯರ ಕೈಗೆ ಒಪ್ಪಿಸಿಕೊಡಲು ಬಂದೆವು,” ಎಂದರು. ಸಂಸೋನನು ಅವರಿಗೆ, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ನನಗೆ ಆಣೆ ಇಡಿರಿ,” ಎಂದನು.


ಏಟಾಮನ ಪುತ್ರರು: ಇಜ್ರೆಯೇಲ್, ಇಷ್ಮ ಮತ್ತು ಇಬ್ಬಾಷ್ ಮತ್ತು ಇವರ ತಂಗಿ ಹಚೆಲೆಲ್‌ಪೋನೀ ಎಂಬವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು