Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಅವರು ಅವನಿಗೆ, “ನಾವು ನಿನ್ನನ್ನು ಕಟ್ಟಿ, ಫಿಲಿಷ್ಟಿಯರ ಕೈಗೆ ಒಪ್ಪಿಸಿಕೊಡಲು ಬಂದೆವು,” ಎಂದರು. ಸಂಸೋನನು ಅವರಿಗೆ, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ನನಗೆ ಆಣೆ ಇಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು, “ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ” ಅನ್ನಲು ಸಂಸೋನನು, “ಹಾಗಾದರೆ ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರು, “ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ,” ಎನ್ನಲು ಸಂಸೋನನು, “ಹಾಗಾದರೆ ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು - ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ ಅನ್ನಲು ಸಂಸೋನನು - ಹಾಗಾದರೆ ನೀವು ನನ್ನನ್ನು ಕೊಲ್ಲುವದಿಲ್ಲವೆಂದು ಆಣೆಮಾಡಿರಿ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಅವರು ಸಂಸೋನನಿಗೆ, “ನಾವು ನಿನ್ನನ್ನು ಬಂಧಿಸಲು ಬಂದಿದ್ದೇವೆ. ನಾವು ನಿನ್ನನ್ನು ಫಿಲಿಷ್ಟಿಯರಿಗೆ ಕೊಡುತ್ತೇವೆ” ಎಂದರು. ಸಂಸೋನನು ಯೆಹೂದ್ಯರಿಗೆ, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:12
7 ತಿಳಿವುಗಳ ಹೋಲಿಕೆ  

ದೇವರು ಸ್ವಜನರಿಗೆ ತನ್ನ ಮೂಲಕವಾಗಿ ಬಿಡುಗಡೆಯನ್ನು ಕೊಡುವನೆಂದು ಅವರು ಅರ್ಥ ಮಾಡಿಕೊಳ್ಳುವರೆಂದು ಮೋಶೆ ಭಾವಿಸಿದ್ದನು. ಸ್ವಜನರೋ, ಇದನ್ನು ಅರ್ಥಮಾಡಿಕೊಳ್ಳಲಿಲ್ಲ.


ಅವರು ಯೇಸುವನ್ನು ಕಟ್ಟಿ, ಕರೆದುಕೊಂಡು ಹೋಗಿ ರಾಜ್ಯಪಾಲ ಪಿಲಾತನಿಗೆ ಒಪ್ಪಿಸಿದರು.


ಹಾಗೆಯೇ ಯೆಹೋಯಾದಾವನ ಮಗ ಬೆನಾಯನು ಹೋಗಿ ಯೋವಾಬನನ್ನು ಕೊಂದುಹಾಕಿದನು. ಅವನ ಶವಕ್ಕೆ ಮರುಭೂಮಿಯಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು.


ಆಗ ಅರಸನಾದ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನನ್ನು ಕಳುಹಿಸಿದನು. ಇವನು ಹೋಗಿ ಅದೋನೀಯನನ್ನು ಕೊಂದುಹಾಕಿದನು.


ಆಗ ಜೆಬಹನೂ, ಚಲ್ಮುನ್ನನೂ, “ನೀನು ಎದ್ದು ನಮ್ಮ ಮೇಲೆ ಬೀಳು. ಏಕೆಂದರೆ ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವುದು,” ಎಂದರು. ಗಿದ್ಯೋನನು ಎದ್ದು ಜೆಬಹನನ್ನೂ, ಚೆಲ್ಮುನ್ನನನ್ನೂ ಕೊಂದುಹಾಕಿ, ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದುಕೊಂಡನು.


ಆಗ ಯೆಹೂದದಲ್ಲಿ ಮೂರು ಸಾವಿರ ಜನರು ಏಟಾಮ್ ಬಂಡೆಯ ಮೇಲಕ್ಕೆ ಏರಿಹೋಗಿ, ಸಂಸೋನನಿಗೆ, “ಫಿಲಿಷ್ಟಿಯರು ನಮ್ಮನ್ನು ಆಳುತ್ತಾ ಇದ್ದಾರೆಂದು ನಿನಗೆ ಗೊತ್ತಿಲ್ಲವೋ? ನೀನು ನಮಗೆ ಹೀಗೆ ಏಕೆ ಮಾಡಿದೆ?” ಎಂದರು. ಅದಕ್ಕವನು, “ಅವರು ನನಗೆ ಮಾಡಿದ ಪ್ರಕಾರವೇ, ನಾನು ಅವರಿಗೆ ಮಾಡಿದೆನು,” ಎಂದು ಅವರಿಗೆ ಹೇಳಿದನು.


ಅದಕ್ಕವರು, “ಇಲ್ಲ; ಆದರೆ ನಿನ್ನನ್ನು ಭದ್ರವಾಗಿ ಕಟ್ಟಿ, ಅವರ ಕೈಯಲ್ಲಿ ಒಪ್ಪಿಸಿಕೊಡುವೆವು. ನಾವು ನಿನ್ನನ್ನು ನಿಜವಾಗಿ ಕೊಲ್ಲುವುದೇ ಇಲ್ಲ,” ಎಂದರು. ಎರಡು ಹೊಸ ಹಗ್ಗಗಳಿಂದ ಅವನನ್ನು ಕಟ್ಟಿ, ಬಂಡೆಯ ಮೇಲಿನಿಂದ ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು