Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:14 - ಕನ್ನಡ ಸಮಕಾಲಿಕ ಅನುವಾದ

14 ಅವನು ಲೇಹಿಗೆ ಬಂದಾಗ, ಫಿಲಿಷ್ಟಿಯರು ಅವನ ಎದುರಾಗಿ ಆರ್ಭಟಿಸುತ್ತಾ ಬಂದರು. ಯೆಹೋವ ದೇವರ ಆತ್ಮ ಅವನ ಮೇಲೆ ಬಲವಾಗಿ ಬಂದದ್ದರಿಂದ, ಅವನ ತೋಳುಗಳಲ್ಲಿ ಕಟ್ಟಿದ್ದ ಸೆಣಬಿನ ಹಗ್ಗಗಳು ಬೆಂಕಿಯಲ್ಲಿ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಯಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದ್ದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸಂಸೋನನನ್ನು ಲೆಹೀ ಎಂಬ ಸ್ಥಳಕ್ಕೆ ತಂದಾಗ ಫಿಲಿಷ್ಟಿಯರು ಅವನನ್ನು ನೋಡುವದಕ್ಕೆ ಬಂದರು. ಅವರು ಸಂತೋಷದಿಂದ ಆರ್ಭಟಿಸುತ್ತಿದ್ದರು. ಆಗ ಯೆಹೋವನ ಆತ್ಮವು ಪ್ರಬಲವಾಗಿ ಸಂಸೋನನ ಮೇಲೆ ಬಂದಿತು. ಸಂಸೋನನು ಹಗ್ಗಗಳನ್ನು ಸುಟ್ಟದಾರಗಳೊ ಎಂಬಂತೆ ಕಿತ್ತುಹಾಕಿದನು; ಕೈಗೆ ಕಟ್ಟಿದ್ದ ಹಗ್ಗಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:14
22 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಆತ್ಮ ಅವನ ಮೇಲೆ ಬಂದದ್ದರಿಂದ, ಅವನು ಅಷ್ಕೆಲೋನಿಗೆ ಹೋಗಿ, ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ, ಸುಲಿದುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತು ವಸ್ತ್ರಗಳನ್ನು ಕೊಟ್ಟನು.


ಅವರು ನನ್ನನ್ನು ಎಲ್ಲಾ ದಿಕ್ಕುಗಳಿಂದ ಸುತ್ತಿಕೊಂಡರು; ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಸೋಲಿಸುವೆನು.


ಆಗ ನಾನು ಅದರ ಹಿಂದೆ ಹೋಗಿ, ಅದನ್ನು ಹೊಡೆದುಬಿಟ್ಟು, ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂದಿರುಗಿ ಬಿದ್ದಾಗ, ನಾನು ಅದರ ಗಡ್ಡವನ್ನು ಹಿಡಿದು, ಹೊಡೆದು ಕೊಂದುಹಾಕಿದೆನು.


ಸೌಲನು ಈ ಮಾತುಗಳನ್ನು ಕೇಳಿದಾಗ, ದೇವರ ಆತ್ಮವು ಬಹಳ ಸಾಮರ್ಥ್ಯದಿಂದ ಅವನ ಮೇಲೆ ಬಂದು, ಅವನು ಬಹು ಕೋಪೋದ್ರೇಕಗೊಂಡನು. ಅನಂತರ ಅವನು ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು,


ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವ ದೇವರ ಆತ್ಮ ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆಯ ಮರಿಯ ಹಾಗೆ ಸೀಳಿ ಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.


ಅವನ ಮೇಲೆ ಯೆಹೋವ ದೇವರ ಆತ್ಮವು ಬಂದದ್ದರಿಂದ, ಅವನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಯುದ್ಧಮಾಡುವುದಕ್ಕೆ ಹೊರಟಾಗ, ಯೆಹೋವ ದೇವರು ಅವನ ಕೈಗೆ ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಒಪ್ಪಿಸಿಕೊಟ್ಟರು. ಅವನು ಕೂಷನ್ ರಿಷಾತಯಿಮನ ಮೇಲೆ ಜಯಹೊಂದಿದನು.


ಜೀವಗ್ರಂಥದಲ್ಲಿ ಹೆಸರು ಬರೆದಿರುವ ಕ್ಲೇಮೆನ್ಸ್ ಮುಂತಾದ ನನ್ನ ಜೊತೆ ಕೆಲಸದವರೊಡನೆ ನನ್ನೊಂದಿಗೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟ ಆ ಸ್ತ್ರೀಯರಿಗೆ ನೀನೂ ಸಹಾಯಕನಾಗಿರಬೇಕೆಂದು ನಿಜ ಜೊತೆಗಾರನೇ, ನಿನ್ನನ್ನೂ ಕೇಳಿಕೊಳ್ಳುತ್ತೇನೆ.


ಆಗ ಅವನು, “ಜೆರುಬ್ಬಾಬೆಲನಿಗೆ ಯೆಹೋವ ದೇವರ ವಾಕ್ಯವು ಇದೇ: ‘ಪರಾಕ್ರಮದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ನನ್ನ ಶತ್ರುವೇ, ನನ್ನ ಮೇಲೆ ಸಂತೋಷ ಪಡಬೇಡ, ನಾನು ಬಿದ್ದಿದ್ದರೂ ತಿರುಗಿ ಏಳುವೆನು. ನಾನು ಕತ್ತಲೆಯಲ್ಲಿ ಕುಳಿತುಕೊಂಡರೂ ಯೆಹೋವ ದೇವರೇ ನನಗೆ ಬೆಳಕಾಗಿರುವರು.


ಅವರು ಯುದ್ಧಕ್ಕಾಗಿ ನನ್ನ ಕೈಗಳಿಗೆ ತರಬೇತುಕೊಟ್ಟು, ನನ್ನ ಭುಜದಿಂದ ಕಂಚಿನ ಬಿಲ್ಲನ್ನು ಬಗ್ಗಿಸುವಂತೆ ಮಾಡುತ್ತಾರೆ.


ದುಷ್ಟರ ಜಯವು ಅಲ್ಪ ಕಾಲ, ಭಕ್ತಿಹೀನರ ಸಂತೋಷವು ಕ್ಷಣ ಮಾತ್ರ.


ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ, ಇಸ್ರಾಯೇಲರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.


ಜನರು ಸಂಸೋನನನ್ನು ನೋಡಿದಾಗ ತಮ್ಮ ದೇವರನ್ನು ಹೊಗಳಿದರು. ಏಕೆಂದರೆ, “ನಮ್ಮ ದೇಶವನ್ನು ಹಾಳು ಮಾಡಿ, ನಮ್ಮಲ್ಲಿ ಅನೇಕರನ್ನು ಕೊಂದ ನಮ್ಮ ವೈರಿಯನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು,” ಎಂದು ಅವರು ಹೇಳಿಕೊಂಡರು.


ಆಗ ದೆಲೀಲಳು ಹೊಸ ಹಗ್ಗಗಳನ್ನು ತೆಗೆದುಕೊಂಡು, ಅವುಗಳಿಂದ ಅವನನ್ನು ಕಟ್ಟಿ, ಅವನಿಗೆ, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬಂದಿದ್ದಾರೆ,” ಎಂದಳು. ಹೊಂಚುಗಾರರು ಕೊಠಡಿಯಲ್ಲಿದ್ದರು. ಆದರೆ ಅವನು ತನ್ನ ತೋಳುಗಳಲ್ಲಿ ಇರುವವುಗಳನ್ನು ದಾರದ ಹಾಗೆಯೇ ಹರಿದುಬಿಟ್ಟನು.


ಹೊಂಚುಗಾರರು ಅವಳಿಗೋಸ್ಕರ ಕೊಠಡಿಯಲ್ಲಿದ್ದರು. ಅವಳು ಅವನಿಗೆ, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ,” ಎಂದಳು. ಆಗ ಅವನು ಬೆಂಕಿ ತಗುಲಿದ ಸೆಣಬಿನ ದಾರ ಹರಿದು ಹೋಗುವ ಹಾಗೆಯೇ ನಾರಿನ ಬರಲುಗಳನ್ನು ಹರಿದುಬಿಟ್ಟನು. ಹೀಗೆ ಅವನ ಶಕ್ತಿಯ ರಹಸ್ಯ ತಿಳಿಯದೆ ಹೋಯಿತು.


‘ಅವರು ಓಡಲಿಲ್ಲವೋ? ಕೊಳ್ಳೆ ಹಂಚಿಕೊಳ್ಳಲಿಲ್ಲವೋ? ಒಬ್ಬೊಬ್ಬ ಸೈನಿಕನಿಗೆ ಒಂದೆರಡು ದಾಸಿಯರು ಸೀಸೆರನಿಗಾದರೋ ನಾನಾ ವರ್ಣವುಳ್ಳ ಬಟ್ಟೆಗಳು. ನಾನಾ ವರ್ಣವುಳ್ಳ ವಿಚಿತ್ರವಾಗಿ ಕಸೂತಿಹಾಕಿದ ಬಟ್ಟೆಗಳು, ವಿಚಿತ್ರವಾಗಿ ಕಸೂತಿಹಾಕಿದ ಒಂದೆರಡು ಬಟ್ಟೆಗಳೂ ಕೊಳ್ಳೆ ಹಿಡಿಯುವವರಿಗೆ ತಕ್ಕಂಥ ಕಂಠಮಾಲೆಗಳೂ ಸಿಕ್ಕಲಿಲ್ಲವೋ?’


ಜನರು ಓಡಿಹೋದರೆಂಬ ವಿಷಯ ಈಜಿಪ್ಟಿನ ಅರಸನಿಗೆ ತಿಳಿಯಿತು. ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಅವರಿಗೆ ವಿರೋಧವಾಗಿ ತಿರುಗಿಕೊಂಡಿತು. ಅವರು, “ಇಸ್ರಾಯೇಲರು ನಮ್ಮ ಸೇವೆ ಮಾಡುವುದನ್ನು ಬಿಟ್ಟು ಹೋಗಿಬಿಡುವಂತೆ ನಾವು ಏಕೆ ಮಾಡಿದೆವು?” ಎಂದುಕೊಂಡರು.


ಏಕೆಂದರೆ ಫರೋಹನು ಇಸ್ರಾಯೇಲರ ವಿಷಯದಲ್ಲಿ, ‘ಅವರು ಗಲಿಬಿಲಿಗೊಂಡು ಮರುಭೂಮಿಯನ್ನು ಸುತ್ತುವರಿದ ಪ್ರದೇಶದಲ್ಲಿ ಅತ್ತಿತ್ತ ಹೋಗುತ್ತಿರುವರು,’ ಎಂದುಕೊಳ್ಳುವನು.


ಅದಕ್ಕವರು, “ಇಲ್ಲ; ಆದರೆ ನಿನ್ನನ್ನು ಭದ್ರವಾಗಿ ಕಟ್ಟಿ, ಅವರ ಕೈಯಲ್ಲಿ ಒಪ್ಪಿಸಿಕೊಡುವೆವು. ನಾವು ನಿನ್ನನ್ನು ನಿಜವಾಗಿ ಕೊಲ್ಲುವುದೇ ಇಲ್ಲ,” ಎಂದರು. ಎರಡು ಹೊಸ ಹಗ್ಗಗಳಿಂದ ಅವನನ್ನು ಕಟ್ಟಿ, ಬಂಡೆಯ ಮೇಲಿನಿಂದ ತಂದರು.


ಫಿಲಿಷ್ಟಿಯರು ಹೊರಟುಹೋಗಿ ಯೆಹೂದದಲ್ಲಿ ಇಳಿದು, ಲೇಹಿಯಲ್ಲಿ ವ್ಯಾಪಿಸಿದರು.


ಆಗ ಯೆಹೋವ ದೇವರ ಆತ್ಮವು ನಿನ್ನ ಮೇಲೆ ಬರುವುದು. ನೀನು ಅವರ ಸಂಗಡ ಪ್ರವಾದಿಸುವೆ, ಬೇರೆ ಮನುಷ್ಯನಾಗಿ ಮಾರ್ಪಡುವೆ.


ಅವನು ಗಿಬೆಯದ ಗುಡ್ಡಕ್ಕೆ ಬಂದಾಗ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು. ಆಗ ದೇವರ ಆತ್ಮವು ಅವನ ಮೇಲೆ ಬಂದದ್ದರಿಂದ, ಅವರಲ್ಲಿದ್ದು ಪ್ರವಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು