Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:15 - ಕನ್ನಡ ಸಮಕಾಲಿಕ ಅನುವಾದ

15 ಅವನು ಒಂದು ಕತ್ತೆಯ ದವಡೆಯ ಹೊಸ ಎಲುಬನ್ನು ಕಂಡುಕೊಂಡು, ತನ್ನ ಕೈಯನ್ನು ಚಾಚಿ ತೆಗೆದುಕೊಂಡು, ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿದಾಗಿತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಸಂಹರಿಸಿಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಲ್ಲೇ ಒಂದು ಕತ್ತೆಯ ದವಡೆ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿ ಇತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಹತಿಸಿಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತು. ಅದು ಇನ್ನೂ ಹಸಿ ಇತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಹತಿಸಿಬಿಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸಂಸೋನನು ಸತ್ತಕತ್ತೆಯ ದವಡೇ ಎಲುಬನ್ನು ಕಂಡನು. ಅವನು ಆ ದವಡೇ ಎಲುಬನ್ನು ತೆಗೆದುಕೊಂಡು ಅದರಿಂದ ಒಂದು ಸಾವಿರ ಫಿಲಿಷ್ಟಿಯರನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:15
14 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರು ತಮ್ಮ ವಾಗ್ದಾನದಂತೆಯೇ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.


ನಿಮ್ಮಲ್ಲಿಯ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿಯ ನೂರು ಮಂದಿ, ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ಖಡ್ಗದಿಂದ ನಿಮ್ಮ ಮುಂದೆ ಬೀಳುವರು.


ಏಹೂದನ ತರುವಾಯ ಅನಾತನ ಮಗ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರುನೂರು ಜನರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲರನ್ನು ರಕ್ಷಿಸಿದನು.


ಯೋನಾತಾನನೂ, ಅವನ ಆಯುಧಗಳನ್ನು ಹೊರುವವನೂ ಹೊಡೆದ ಆ ಮೊದಲ ಸಂಹಾರದಲ್ಲಿ ಅರ್ಧ ಎಕರೆ ಭೂಮಿಯಲ್ಲಿ ಸತ್ತವರು ಸುಮಾರು ಇಪ್ಪತ್ತು ಜನರಾಗಿದ್ದರು.


ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯುವಕನಿಗೆ, “ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿ ಹೋಗೋಣ ಬಾ; ಒಂದು ವೇಳೆ ಯೆಹೋವ ದೇವರು ನಮಗೋಸ್ಕರ ಕಾರ್ಯವನ್ನು ನಡೆಸುವರು. ಏಕೆಂದರೆ ಅನೇಕ ಜನರಿಂದಲಾದರೂ, ಸ್ವಲ್ಪ ಜನರಿಂದಲಾದರೂ ರಕ್ಷಿಸುವುದಕ್ಕೆ ಯೆಹೋವ ದೇವರಿಗೆ ಅಸಾಧ್ಯವಲ್ಲ,” ಎಂದನು.


ಆ ಮುನ್ನೂರು ಜನರನ್ನು ಮೂರು ಭಾಗವಾಗಿ ಹಂಚಿ, ಎಲ್ಲರ ಕೈಯಲ್ಲಿ ತುತೂರಿಗಳನ್ನೂ, ಬರಿದಾದ ಕೊಡಗಳನ್ನೂ, ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟನು.


ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆಯನ್ನು ತೆಗೆದು, ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದುಕೊಂಡು, ಅವನು ಆಯಾಸದಿಂದ ನಿದ್ರೆ ಮಾಡುತ್ತಿರುವಾಗ, ಮೆಲ್ಲನೆ ಅವನ ಬಳಿಗೆ ಬಂದು, ಅವನ ತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿಸಿದಳು. ಅವನು ಮರಣಹೊಂದಿದನು.


ಬೆಂಕಿಯ ಶಕ್ತಿಯನ್ನು ಆರಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ಬಲಹೀನತೆಯಿಂದ ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರರ ಸೈನ್ಯಗಳನ್ನು ಓಡಿಸಿಬಿಟ್ಟರು,


ಆಗ ಸಂಸೋನನು ಹೇಳಿದ್ದೇನೆಂದರೆ, “ಕತ್ತೆಯ ದವಡೆಯಿಂದ ನಾನು ಅವರನ್ನು ಹೆಣಗಳನ್ನಾಗಿ ಮಾಡಿದ್ದೇನೆ. ಕತ್ತೆ ದವಡೆಯ ಎಲುಬಿನಿಂದ ಒಂದು ಸಾವಿರ ಜನರನ್ನು ಕೊಂದಿದ್ದೇನೆ.”


ಅವನು ಮಾತನಾಡಿ ತೀರಿಸಿದಾಗ, ತನ್ನ ಕೈಯಲ್ಲಿದ್ದ ದವಡೆಯ ಎಲುಬನ್ನು ಎಸೆದುಬಿಟ್ಟನು. ಆ ಸ್ಥಳಕ್ಕೆ ರಾಮತ್ ಲೇಹಿ ಎಂಬ ಹೆಸರಾಯಿತು.


ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ, ಅವರು ಖಡ್ಗದಿಂದ ನಿಮ್ಮ ಮುಂದೆ ಬೀಳುವರು.


ದಾವೀದನ ಪರಾಕ್ರಮಶಾಲಿಗಳ ಹೆಸರುಗಳು ಇವೇ: ಮೂರು ಜನ ಮುಖ್ಯಸ್ಥರಲ್ಲಿ ಒಬ್ಬನು ತಹ್ಕೆಮೋನ್ಯನಾದ ಯೋಷೆಬ್ ಬಷ್ಷೆಬೆತ ಎಂಬವನು; ಇವನು ತನ್ನ ಈಟಿಯಿಂದ ಎಂಟುನೂರು ಮಂದಿಗೆ ವಿರೋಧವಾಗಿ ಹೋರಾಡಿ ಅವರನ್ನು ಒಂದೇ ಕಾಳಗದಲ್ಲಿ ಕೊಂದುಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು