Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:16 - ಕನ್ನಡ ಸಮಕಾಲಿಕ ಅನುವಾದ

16 ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ, ತೊಂದರೆ ಪಡಿಸಿದ್ದರಿಂದ, ಅವನ ಪ್ರಾಣವು ಸಾಯುವಷ್ಟು ವ್ಯಸನಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸಿದ್ದರಿಂದ ಅವನಿಗೆ ಸಾಯುವುದು ಒಳ್ಳೆಯದು ಎನ್ನುವಷ್ಟು ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇದಲ್ಲದೆ, ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸುತ್ತಿದ್ದುದರಿಂದ ಅವನಿಗೆ ಸಾಯುವುದೇ ಒಳ್ಳೆಯದೆನ್ನುವಷ್ಟು ಬೇಸರ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಅವಳು ಅವನನ್ನು ದಿನ ದಿನವೂ ಮಾತಿನಿಂದ ಪೀಡಿಸಿದ್ದರಿಂದ ಅವನಿಗೆ ಸಾಯುವದು ಒಳ್ಳೇದನ್ನುವಷ್ಟು ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವಳು ಸಂಸೋನನನ್ನು ಪ್ರತಿದಿನ ಪೀಡಿಸತೊಡಗಿದಳು. ಅವನ ಶಕ್ತಿಯ ರಹಸ್ಯದ ಬಗ್ಗೆ ಅವಳು ಪದೇಪದೇ ಕೇಳುತ್ತಿದ್ದದರಿಂದ ಅವನಿಗೆ ಸಾಯುವಷ್ಟು ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:16
11 ತಿಳಿವುಗಳ ಹೋಲಿಕೆ  

ಆದರೂ ಈ ವಿಧವೆಯು ನನಗೆ ತೊಂದರೆಕೊಟ್ಟು ಪದೇಪದೇ ನನ್ನ ಬಳಿಗೆ ಬಂದು, ನನ್ನನ್ನು ಕಾಡಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು,’ ” ಎಂದುಕೊಂಡನು.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ಅವನು ಸ್ನೇಹಿತನಾಗಿರುವುದರಿಂದ ಎದ್ದು ಇವನಿಗೆ ಕೊಡದೆಹೋದರೂ ಮೇಲಿಂದ ಮೇಲೆ ನಾಚಿಕೆಪಡದೆ ಬೇಡುವುದರಿಂದ ಎದ್ದು ಇವನಿಗೆ ಬೇಕಾದಷ್ಟು ಕೊಡುವನು.


ಯೇಸು ಅವರಿಗೆ, “ಇದು ಬಹುಜನರಿಗೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.


ಆದರೆ ದೇವರು ಯೋನನಿಗೆ, “ನೀನು ಸೋರೆ ಬಳ್ಳಿಯನ್ನು ಕುರಿತು ಕೋಪ ಮಾಡುವುದು ಸರಿಯೋ?” ಎಂದರು. ಅವನು, “ನಾನು ಸಾಯುವಷ್ಟು ಕೋಪ ಮಾಡುವುದು ಒಳ್ಳೆಯದೇ,” ಎಂದನು.


“ನಾನೇನು ಮನುಷ್ಯನ ವಿಷಯವಾಗಿ ದೂರು ಹೇಳುತ್ತಿದ್ದೇನೋ? ನಾನೇಕೆ ಬೇಸರಪಡಬಾರದು.


ಅವಳು ಅವನಿಗೆ, “ನಿನ್ನ ಹೃದಯವು ನನ್ನ ಸಂಗಡ ಇಲ್ಲದೆ ಇರುವಾಗ, ನಿನ್ನನ್ನು ಪ್ರೀತಿಮಾಡುತ್ತೇನೆ ಎಂದು ನೀನು ಹೇಗೆ ಹೇಳುತ್ತೀ? ನೀನು ಈ ಮೂರು ಸಾರಿ ನನಗೆ ವಂಚನೆ ಮಾಡಿದೆ; ನಿನ್ನ ದೊಡ್ಡ ಶಕ್ತಿಯ ರಹಸ್ಯ ಯಾವುದರಲ್ಲಿ ಉಂಟೋ ನನಗೆ ತಿಳಿಸಲಿಲ್ಲ,” ಎಂದಳು.


ಅವನು ತನ್ನ ಹೃದಯವನ್ನೆಲ್ಲಾ ಅವಳಿಗೆ ತಿಳಿಸಿ, ಅವಳಿಗೆ, “ಕ್ಷೌರದ ಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ಏಕೆಂದರೆ ನಾನು ನನ್ನ ತಾಯಿಯ ಗರ್ಭದಲ್ಲಿಂದ ದೇವರಿಗೆ ಪ್ರತಿಷ್ಠಿತನಾದ ನಾಜೀರನಾಗಿದ್ದೇನೆ. ನನ್ನ ತಲೆಯನ್ನು ಬೋಳಿಸಿದರೆ, ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗುವುದು; ನಾನು ಬಲಹೀನನಾಗಿ ಎಲ್ಲಾ ಮನುಷ್ಯರ ಹಾಗೆ ಇರುವೆನು,” ಎಂದನು.


ಆಗ ಸಂಸೋನನ ಹೆಂಡತಿ ಅವನ ಮುಂದೆ ಅತ್ತು, “ನನ್ನನ್ನು ಹಗೆ ಮಾಡುತ್ತಿರುವೆ. ನೀನು ನನ್ನನ್ನು ನಿಜವಾಗಿ ಪ್ರೀತಿ ಮಾಡುವುದಿಲ್ಲ, ಏಕೆಂದರೆ ನೀನು ನನ್ನ ಜನರಿಗೆ ಒಂದು ಒಗಟನ್ನು ಹೇಳಿ ನನಗೆ ತಿಳಿಸದೆ ಹೋದೆ,” ಎಂದಳು. ಅವನು ಅವಳಿಗೆ, “ಇಗೋ, ನಾನು ನನ್ನ ತಂದೆತಾಯಿಗೆ ಅದನ್ನು ತಿಳಿಸಲಿಲ್ಲ. ನಿನಗೆ ತಿಳಿಸುವೆನೋ?” ಎಂದನು.


ಅವಳು ಔತಣದ ಏಳು ದಿವಸಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಆದರೆ ಏಳನೆಯ ದಿವಸದಲ್ಲಿ ಅವಳು, ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಒಗಟಿನ ಅರ್ಥವನ್ನು ತಿಳಿಸಿದನು. ಆಗ ಆಕೆ ತನ್ನ ಜನರಿಗೆ ಆ ಒಗಟನ್ನು ತಿಳಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು