Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:18 - ಕನ್ನಡ ಸಮಕಾಲಿಕ ಅನುವಾದ

18 ಆಗ ದೆಲೀಲಳು, ಅವನು ತನಗೆ ತನ್ನ ಹೃದಯಲ್ಲಿರುವುದನ್ನೆಲ್ಲಾ ತಿಳಿಸಿದ್ದಾನೆಂದು ಕಂಡು, ಅವಳು ಫಿಲಿಷ್ಟಿಯರ ಅಧಿಪತಿಗಳಿಗೆ, “ನೀವು ಈ ಸಾರಿ ಬನ್ನಿರಿ. ಏಕೆಂದರೆ ಅವನು ತನ್ನ ಹೃದಯದಲ್ಲಿರುವುದನ್ನೆಲ್ಲಾ ನನಗೆ ತಿಳಿಸಿದನು,” ಎಂದು ಕರೆಕಳುಹಿಸಿದಳು. ಆಗ ಫಿಲಿಷ್ಟಿಯರ ಅಧಿಪತಿಗಳು ಅವಳ ಬಳಿಗೆ ಹಣವನ್ನು ತಮ್ಮ ಕೈಯಲ್ಲಿ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಪ್ರಭುಗಳ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಇದೊಂದು ಸಾರಿ ಬನ್ನಿರಿ: ಅವನು ನನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆ” ಎಂದು ಹೇಳಿ, ಕರೆಕಳುಹಿಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಮುಖಂಡರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಇದೊಂದು ಸಾರಿ ಬನ್ನಿ; ಅವರು ನನಗೆ ತಮ್ಮ ಹೃದಯವನ್ನೆಲ್ಲಾ ಬಿಚ್ಚಿದ್ದಾರೆ,” ಎಂದು ಹೇಳಿ ಕರೆಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಪ್ರಭುಗಳ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ - ಇದೊಂದು ಸಾರಿ ಬನ್ನಿರಿ; ಅವನು ನನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆ ಎಂದು ಹೇಳಿಸಿ ಕರಿಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಸಂಸೋನನು ತನ್ನ ರಹಸ್ಯವನ್ನು ತಿಳಿಸಿದನೆಂದು ದೆಲೀಲಳಿಗೆ ಗೊತ್ತಾಯಿತು. ಅವಳು ಫಿಲಿಷ್ಟಿಯ ಅಧಿಪತಿಗಳಿಗೆ ಸಂದೇಶವನ್ನು ಕಳುಹಿಸಿದಳು. ಅವಳು, “ಸಂಸೋನನು ನನಗೆ ಎಲ್ಲವನ್ನು ಹೇಳಿದ್ದಾನೆ, ಮತ್ತೊಮ್ಮೆ ಬನ್ನಿ” ಎಂದು ಹೇಳಿದಳು. ಫಿಲಿಷ್ಟಿಯ ಅಧಿಪತಿಗಳು ದೆಲೀಲಳ ಬಳಿಗೆ ಬಂದರು. ಅವರು ಅವಳಿಗೆ ಕೊಡುವುದಾಗಿ ಹೇಳಿದ್ದ ಹಣವನ್ನು ತಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:18
11 ತಿಳಿವುಗಳ ಹೋಲಿಕೆ  

ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಬೇರಾಗಿದೆ. ಕೆಲವರು ಹಣಕ್ಕಾಗಿ ಆತುರಪಟ್ಟು ನಂಬಿಕೆಯಿಂದ ದೂರಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


“ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ?” ಎಂದನು. ಆಗ ಅವರು ಅವನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಎಣಿಸಿ ಕೊಟ್ಟರು.


ಅವಳ ಬಳಿಗೆ ಫಿಲಿಷ್ಟಿಯರ ಅಧಿಪತಿಗಳು ಬಂದು ಅವಳಿಗೆ, “ನೀನು ಅವನನ್ನು ಮರಳುಗೊಳಿಸಿ, ನಾವು ಅವನನ್ನು ಯಾವ ಪ್ರಕಾರ ಗೆದ್ದು, ಕಟ್ಟಿ, ಬಾಧಿಸಬಹುದೆಂದೂ ಅವನ ದೊಡ್ಡ ಶಕ್ತಿ ಯಾವುದರಲ್ಲಿ ಇದೆ ಎಂದೂ ನೋಡು. ನಾವು ಒಬ್ಬೊಬ್ಬರು ನಿನಗೆ ಸಾವಿರದ ನೂರು ಬೆಳ್ಳಿಯ ನಾಣ್ಯಗಳನ್ನು ಕೊಡುವೆವು,” ಎಂದರು.


ಏಕೆಂದರೆ ಯಾವ ಜಾರನಾಗಲಿ, ಅಶುದ್ಧನಾಗಲಿ, ದೇವರಲ್ಲದವುಗಳನ್ನು ಪೂಜಿಸುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಹಕ್ಕುಬಾಧ್ಯತೆಯನ್ನು ಹೊಂದುವುದಿಲ್ಲವೆಂಬುದು ನಿಮಗೆ ಮನದಟ್ಟಾಗಿರಲಿ.


ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು; ಅವು ಹೊಟ್ಟೆಯ ಒಳಭಾಗಗಳಿಗೆ ಇಳಿದು ಹೋಗುವುವು.


ಸಾಮಾನ್ಯ ಜನರು ಬರೀ ಉಸಿರೇ, ಉನ್ನತ ಜನರು ಬರೀ ಸುಳ್ಳೇ. ತಕ್ಕಡಿಯಲ್ಲಿ ತೂಗಿದರೆ ಅವರೇನೂ ಇಲ್ಲ, ಎಲ್ಲರೂ ಬರೀ ಉಸಿರೇ.


ಆಗ ಅಹಾಬನು ಎಲೀಯನಿಗೆ, “ನನ್ನ ಶತ್ರುವೇ, ನೀನು ನನ್ನನ್ನು ಕಂಡುಹಿಡಿದೆಯಾ,” ಎಂದನು. ಅದಕ್ಕೆ ಎಲೀಯನು, “ಕಂಡುಕೊಂಡೆನು, ನೀನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡದ್ದರಿಂದ,


ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಗಳನ್ನು ತೆಗೆದುಕೊಂಡು ಹೋದರು. ಅವರು ಬಿಳಾಮನ ಬಳಿಗೆ ಬಂದು, ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.


ಅವನು ತನ್ನ ಹೃದಯವನ್ನೆಲ್ಲಾ ಅವಳಿಗೆ ತಿಳಿಸಿ, ಅವಳಿಗೆ, “ಕ್ಷೌರದ ಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ಏಕೆಂದರೆ ನಾನು ನನ್ನ ತಾಯಿಯ ಗರ್ಭದಲ್ಲಿಂದ ದೇವರಿಗೆ ಪ್ರತಿಷ್ಠಿತನಾದ ನಾಜೀರನಾಗಿದ್ದೇನೆ. ನನ್ನ ತಲೆಯನ್ನು ಬೋಳಿಸಿದರೆ, ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗುವುದು; ನಾನು ಬಲಹೀನನಾಗಿ ಎಲ್ಲಾ ಮನುಷ್ಯರ ಹಾಗೆ ಇರುವೆನು,” ಎಂದನು.


ಅವಳು ಅವನನ್ನು ತನ್ನ ತೊಡೆಗಳ ಮೇಲೆ ನಿದ್ರೆ ಹೋಗುವಂತೆ ಮಾಡಿ, ಒಬ್ಬನನ್ನು ಕರೆದು, ಅವನ ತಲೆಯ ಏಳು ಜಡೆಗಳನ್ನು ಬೋಳಿಸುವಂತೆ ಮಾಡಿ, ಅವನನ್ನು ದುರ್ಬಲಪಡಿಸಿದಳು. ಆಗ ಅವನ ಶಕ್ತಿ ಅವನನ್ನು ಬಿಟ್ಟುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು