Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:21 - ಕನ್ನಡ ಸಮಕಾಲಿಕ ಅನುವಾದ

21 ಆದರೆ ಫಿಲಿಷ್ಟಿಯರು ಅವನನ್ನು ಹಿಡಿದು, ಅವನ ಕಣ್ಣುಗಳನ್ನು ಕಿತ್ತು, ಅವನನ್ನು ಗಾಜಕ್ಕೆ ಒಯ್ದು ಎರಡು ಕಂಚಿನ ಸಂಕೋಲೆಗಳನ್ನು ಹಾಕಿದರು. ಸೆರೆಮನೆಯಲ್ಲಿ ಅವನನ್ನು ಬೀಸುವುದಕ್ಕೆ ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಹಿಟ್ಟನ್ನು ಬೀಸುವುದಕ್ಕೆ ಇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಾಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಬೀಸುವುದಕ್ಕೆ ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಫಿಲಿಷ್ಟಿಯರು ಅವನನ್ನು ಹಿಡಿದು ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಕಬ್ಬಿಣದ ಬೇಡಿಗಳನ್ನು ಹಾಕಿ ಸೆರೆಮನೆಯಲ್ಲಿ ಬೀಸುವದಕ್ಕೆ ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಫಿಲಿಷ್ಟಿಯರು ಸಂಸೋನನನ್ನು ಬಂಧಿಸಿ ಅವನ ಕಣ್ಣುಗಳನ್ನು ಕಿತ್ತು ಗಾಜಾ ನಗರಕ್ಕೆ ತೆಗೆದುಕೊಂಡು ಹೋದರು. ಅವನು ಓಡಿಹೋಗದಂತೆ ಅವನಿಗೆ ಸಂಕೋಲೆಗಳನ್ನು ಬಿಗಿದರು. ಅವರು ಸಂಸೋನನನ್ನು ಒಂದು ಸೆರೆಮನೆಯಲ್ಲಿಟ್ಟು ಧಾನ್ಯಬೀಸುವ ಕೆಲಸಕ್ಕೆ ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:21
15 ತಿಳಿವುಗಳ ಹೋಲಿಕೆ  

ಅವಳ ಬಳಿಗೆ ಹೋಗುವ ಯಾವನೂ ಹಿಂದಿರುಗುವುದಿಲ್ಲ; ಜೀವಮಾರ್ಗಗಳನ್ನು ಅಂಥವರು ಹಿಡಿಯುವುದೇ ಇಲ್ಲ.


ಇಬ್ಬರು ಹೆಂಗಸರು ಬೀಸುವ ಕಲ್ಲಿನಲ್ಲಿ ಬೀಸುತ್ತಿರುವಾಗ, ಒಬ್ಬಳನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬಳನ್ನು ಬಿಡಲಾಗುವುದು.


ಬೀಸುವ ಕಲ್ಲನ್ನು ಹಿಡಿದು, ಹಿಟ್ಟನ್ನು ಬೀಸು. ಮುಸುಕನ್ನು ತೆಗೆದುಹಾಕಿ, ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ, ನದಿಗಳನ್ನು ಹಾದುಹೋಗು.


ಭ್ರಷ್ಟನು ತನ್ನ ದುಷ್ಕರ್ಮಗಳಿಂದ ದಣಿಯನು, ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.


ಆಗ ಈಜಿಪ್ಟ್ ದೇಶದ ಚೊಚ್ಚಲ ಮಕ್ಕಳು ಅಂದರೆ, ಸಿಂಹಾಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲನ್ನು ಹಿಡಿದಿರುವ ದಾಸಿಯ ಚೊಚ್ಚಲ ಮಗನವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವೂ ಸಾಯುವುವು.


ದುಷ್ಟನನ್ನು ಅವನ ಸ್ವಂತ ದ್ರೋಹಗಳೇ ಹಿಡಿಯುತ್ತವೆ; ತನ್ನ ಪಾಪಗಳ ಪಾಶಗಳೇ ಅವನನ್ನು ಬಂಧಿಸುತ್ತದೆ.


ಅಪರಾಧದ ಅರಸರನ್ನು ಸಂಕೋಲೆಗಳಿಂದಲೂ, ಪ್ರಮುಖರನ್ನು ಕಬ್ಬಿಣದ ಬೇಡಿಗಳಿಂದಲೂ ಬಂಧಿಸಲಿ.


ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.


ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದರು. ತರುವಾಯ ಅವನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ ಅವನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಅಷ್ಟುಮಾತ್ರವಲ್ಲದೆ, ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತೆಗೆದುಕೊಂಡು ಬರಲಿಲ್ಲ. ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ನಮಗೆ ಸ್ವಾಧೀನಕ್ಕೆ ಕೊಡಲಿಲ್ಲ. ಈ ಮನುಷ್ಯರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ!” ಎಂದರು.


ಅವಳು, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬಂದಿದ್ದಾರೆ,” ಎಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು, “ಮೊದಲಿನಂತೆಯೇ ನಾನು ಹೊರಗೆ ಹೋಗಿ ಬಿಡುಗಡೆಯಾಗುವೆನು,” ಎಂದುಕೊಂಡನು. ಆದರೆ ಯೆಹೋವ ದೇವರು ತನ್ನನ್ನು ಬಿಟ್ಟು ಹೋಗಿದ್ದಾರೆಂದು ಅವನು ಅರಿಯಲಿಲ್ಲ.


ಆದರೆ ಕ್ಷೌರ ಮಾಡಿದ ತರುವಾಯ ಅವನ ತಲೆಯ ಕೂದಲು ತಿರುಗಿ ಬೆಳೆಯಲಾರಂಭಿಸಿತು.


ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಕಂಚಿನ ಬೇಡಿಹಾಕಿಸಿ, ಬಾಬಿಲೋನಿಗೆ ಸಾಗಿಸಿದನು.


ಅವರು ಯೌವನಸ್ಥರನ್ನು ಅರೆಯುವುದಕ್ಕೆ ತೆಗೆದುಕೊಂಡರು ಮತ್ತು ಹುಡುಗರು ಕಟ್ಟಿಗೆಯ ಕೆಳಗೆ ಬಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು